ಮುಖಾಮುಖಿ ಡಿಕ್ಕಿ ರಭಸಕ್ಕೆ ಲಾರಿಯು ಹಳ್ಳಕ್ಕೆ ಇಳಿದಿದೆ. ಕಾರು ರಸ್ತೆಯ ಎಡಬದಿ ತಡೆಗೋಡೆಗೆ ಹೊಡೆದು ಜಖಂಗೊಂಡಿದೆ. ಕಾರು ಚಲಾಯಿಸುತ್ತಿದ್ದ ಅಪ್ಪಯ್ಯ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿರುವ ಅವರ ಪತ್ನಿ ಮೀನಾಕ್ಷಿ ಅವರನ್ನು ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಲಾರಿ ಚಾಲಕ ಪ್ರಕಾಶ್ ಸಹ ಗಾಯಗೊಂಡಿದ್ದು, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.