ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಸಿ. ವರ್ಗಾವಣೆ ವದಂತಿ

Last Updated 8 ಮಾರ್ಚ್ 2018, 10:17 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಹಾಸನಕ್ಕೆ ವರ್ಗಾವಣೆಗೊಂಡಿದ್ದಾರೆ ಎಂಬ ವದಂತಿ ಬುಧವಾರ ಹಾವೇರಿ ಮತ್ತು ಹಾಸನದಲ್ಲಿ ಹಬ್ಬಿತ್ತು.

ವದಂತಿಯ ಹಿನ್ನೆಲೆಯಲ್ಲಿ ಹಲವರು ‘ಪ್ರಜಾವಾಣಿ’ಗೆ ಕರೆ ಮಾಡಿ, ಮಾಹಿತಿ ಕೇಳಿದರು. ಆದರೆ, ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅವರು, ವರ್ಗಾವಣೆ ಕುರಿತ ವದಂತಿಗಳನ್ನು ನಿರಾಕರಿಸಿದರು. ‘ಯಾವುದೇ ಆದೇಶಗಳು ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಹಾವೇರಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಲ್ಲಿ ಹಲವಾರು ಯೋಜನೆ, ಕಾಮಗಾರಿಗಳು ಹಾಗೂ ಆಡಳಿತಾತ್ಮಕ ಶಿಸ್ತುಬದ್ಧ ಕ್ರಮಗಳು ಜಾರಿಯಲ್ಲಿವೆ. ಇಂತಹ ಸಂಕ್ರಮಣ ಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಬಾರದು. ಇದು ಜಿಲ್ಲೆಯ ಅಭಿವೃದ್ಧಿಗೆ ಪೂರಕವಲ್ಲ’ ಎಂದು ಹಲವು ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT