ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪಸಿಂಹ, ‘ಕರ್ನಾಟಕದ ಹಣ ತೆಲಂಗಾಣದ ಚುನಾವಣೆಗೆ ಹೋಗುತ್ತಿದೆ ಎಂದು ವಿರಾಜಪೇಟೆಯ ಬಿಜೆಪಿ ಕಾರ್ಯಕರ್ತರೊಬ್ಬರು ಫೇಸ್ಬುಕ್ ಸ್ಟೇಟಸ್ ಹಾಕಿದರು ಎಂಬ ಕಾರಣಕ್ಕೆ ಅವರಿಂದ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡಿರುವುದು ಸರಿಯಲ್ಲ. ಒಂದು ವೇಳೆ ಕಾನೂನಿನಲ್ಲಿ ಅದಕ್ಕೆ ಅವಕಾಶವಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.