<p><strong>ಮಡಿಕೇರಿ</strong>: ಇಲ್ಲಿನ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ಹಿರಿಯ ನಾಗರಿಕರಿಗಾಗಿ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 200 ಮಂದಿ ಭಾಗವಹಿಸಿ, ಉಲ್ಲಾಸಿತರಾದರು.</p>.<p>ಅ. 1ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಇಲ್ಲಿ ನಡೆದ ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಉದ್ಘಾಟಿಸಿದರು.</p>.<p>ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್ನಲ್ಲಿ ಬಾಲ್ ಎಸೆಯುವುದು ಈ ಮೂರು ವಿಭಾಗದಲ್ಲಿ ಆಟೋಟ ಸ್ಪರ್ಧೆಗಳು ನಡೆದವು. ಗಾಯನ ಸ್ಪರ್ಧೆ ಮತ್ತು ಏಕಪಾತ್ರಾಭಿನಯ ವಿಭಾಗದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನೆರವೇರಿದವು. 60-69 ಹಾಗೂ 70 ವರ್ಷ ತುಂಬಿದ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗಿತ್ತು.</p>.<p>ಭಾಗವಹಿಸಿದ್ದ ನೂರಾರು ಮಂದಿ ಹಿರಿಯ ನಾಗರಿಕರು ಈ ಸ್ಪರ್ಧೆಗಳನ್ನು ಸಂಭ್ರಮದಿಂದಲೇ ಭಾಗವಹಿಸಿದ್ದರು. ಪರಸ್ಪರ ಮಾತನಾಡಿ ಖುಷಿಪಟ್ಟರು. ದಿನವಿಡೀ ನಡೆದ ಅಪರೂಪದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿದ್ದು ವಿಶೇಷ ಎನಿಸಿತ್ತು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಶಂಕರಿ ಪೊನ್ನಪ್ಪ, ನಿವೃತ್ತ ನೌಕರರ ಸಂಘದ ಮಲ್ಲಪ್ಪ, ಮಾದಮಯ್ಯ, ತಿಮ್ಮಯ್ಯ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಭಾಗವಹಿಸಿದ್ದರು.</p>.<p>ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಇಲ್ಲಿ ಆಯ್ಕೆಯಾದವರು ಸೆ. 23ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಮಲಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಇಲ್ಲಿನ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ಹಿರಿಯ ನಾಗರಿಕರಿಗಾಗಿ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 200 ಮಂದಿ ಭಾಗವಹಿಸಿ, ಉಲ್ಲಾಸಿತರಾದರು.</p>.<p>ಅ. 1ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಇಲ್ಲಿ ನಡೆದ ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಉದ್ಘಾಟಿಸಿದರು.</p>.<p>ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್ನಲ್ಲಿ ಬಾಲ್ ಎಸೆಯುವುದು ಈ ಮೂರು ವಿಭಾಗದಲ್ಲಿ ಆಟೋಟ ಸ್ಪರ್ಧೆಗಳು ನಡೆದವು. ಗಾಯನ ಸ್ಪರ್ಧೆ ಮತ್ತು ಏಕಪಾತ್ರಾಭಿನಯ ವಿಭಾಗದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನೆರವೇರಿದವು. 60-69 ಹಾಗೂ 70 ವರ್ಷ ತುಂಬಿದ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗಿತ್ತು.</p>.<p>ಭಾಗವಹಿಸಿದ್ದ ನೂರಾರು ಮಂದಿ ಹಿರಿಯ ನಾಗರಿಕರು ಈ ಸ್ಪರ್ಧೆಗಳನ್ನು ಸಂಭ್ರಮದಿಂದಲೇ ಭಾಗವಹಿಸಿದ್ದರು. ಪರಸ್ಪರ ಮಾತನಾಡಿ ಖುಷಿಪಟ್ಟರು. ದಿನವಿಡೀ ನಡೆದ ಅಪರೂಪದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿದ್ದು ವಿಶೇಷ ಎನಿಸಿತ್ತು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಶಂಕರಿ ಪೊನ್ನಪ್ಪ, ನಿವೃತ್ತ ನೌಕರರ ಸಂಘದ ಮಲ್ಲಪ್ಪ, ಮಾದಮಯ್ಯ, ತಿಮ್ಮಯ್ಯ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಭಾಗವಹಿಸಿದ್ದರು.</p>.<p>ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಇಲ್ಲಿ ಆಯ್ಕೆಯಾದವರು ಸೆ. 23ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಮಲಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>