<p><strong>ವಿರಾಜಪೇಟೆ</strong>: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಸಾಂಪ್ರದಾಯಿಕ ಕದಿರು ತೆಗೆಯುವ ಮೂಲಕ ಗುರುವಾರ ಹುತ್ತರಿ ಹಬ್ಬ ಆಚರಿಸಲಾಯಿತು. ಕೊಡಗಿನ ಕಾಟ್ರಕೊಲ್ಲಿಯಲ್ಲಿ ಅಲ್ಲಿನ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಹಲವರು ಅದ್ದೂರಿಯಾಗಿ ಹಬ್ಬ ಆಚರಿಸಿದರು.</p>.<p>ಸಭಾ ಕಾರ್ಯಕ್ರಮದಲ್ಲಿ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಎಚ್.ಸೂಫಿ ಹಾಜಿ ಮಾತನಾಡಿ, ‘ಸಾಂಪ್ರದಾಯಿಕ ಆಚರಣೆಗಳನ್ನು ಮತ್ತು ಪದ್ಧತಿ ಪರಂಪರೆಯನ್ನು ಸಂರಕ್ಷಿಸಬೇಕು’ ಎಂದರು.</p>.<p>ಕದಿರು ತೆಗೆದ ಬಳಿಕ ಆಲೀರ ಐನ್ ಮನೆ ಆವರಣದಲ್ಲಿ ಸಾಂಪ್ರದಾಯಿಕ ತಂಬಿಟ್ಟು, ಹುತ್ತರಿ ಗೆಣಸಿನ ಉಪಾಹಾರ ಸೇವಿಸಿದರು. ಕೆ.ಎಂ.ಎ. ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು ಅವರ ಮನೆಯ ಆವರಣದಲ್ಲಿ ಬೋಜನದ ವ್ಯವಸ್ಥೆಗೊಳಿಸಲಾಗಿತ್ತು. ನಂತರ ಗದ್ದೆಯಿಂದ ತಂದ ಕದಿರನ್ನು ಮನೆಗಳಿಗೆ ಕೊಂಡೊಯ್ದರು.</p>.<p>ಆಲೀರ ಎಂ. ಸಾದಲಿ ಅವರ ಗದ್ದೆಯಲ್ಲಿ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಎಚ್. ಸೂಫಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಲೀರ ಕುಟುಂಬದ ಹಿರಿಯರಾದ ಸಾದಲಿ ಅವರು ಭತ್ತದ ತೆನೆಯನ್ನು ಕೊಯ್ದು ಹಂಚಿದರು. </p>.<p>ಕೊಟ್ಟಮುಡಿ, ಕುಂಜಿಲ, ಚೆರಿಯಪರಂಬು ಎಡಪಾಲ, ಕೊಂಡಂಗೇರಿ, ಗುಂಡಿಕೆರೆ, ಕೊಮ್ಮೆತೋಡು, ಚಾಮಿಯಾಲ, ವಿರಾಜಪೇಟೆ, ನಲ್ವತ್ತೋಕ್ಲು, ಅಂಬಟ್ಟಿ, ಚಿಮ್ಮಿಚ್ಚಿಕುಂಡ್ (ಹಳ್ಳಿಗಟ್ಟು)ನ ಸಮುದಾಯ ಬಾಂಧವರು, ಕಾಟ್ರಕೊಲ್ಲಿಯ ಆಲೀರ ಕುಟುಂಬಸ್ಥರು ಪಾಲ್ಗೊಂಡಿದ್ದರು.</p>.<p>ಕೆಎಂಎ ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು, ಕೋಶಾಧಿಕಾರಿ ಹರಿಶ್ಚಂದ್ರ ಎ.ಹಂಸ, ಪ್ರಧಾನ ಕಾರ್ಯದರ್ಶಿ ಈ ತಲತಂಡ ರಫೀಕ್ ತೂಚಮಕೇರಿ, ಸಂಘಟನಾ ಕಾರ್ಯದರ್ಶಿ ಮೀತಲತಂಡ ಎಂ. ಇಸ್ಮಾಯಿಲ್, ಕೆ.ಎಂ.ಎ. ನಿರ್ದೇಶಕ ಮತ್ತು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ರಶೀದ್ ಸಹಯೋಗ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಸಾಂಪ್ರದಾಯಿಕ ಕದಿರು ತೆಗೆಯುವ ಮೂಲಕ ಗುರುವಾರ ಹುತ್ತರಿ ಹಬ್ಬ ಆಚರಿಸಲಾಯಿತು. ಕೊಡಗಿನ ಕಾಟ್ರಕೊಲ್ಲಿಯಲ್ಲಿ ಅಲ್ಲಿನ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಹಲವರು ಅದ್ದೂರಿಯಾಗಿ ಹಬ್ಬ ಆಚರಿಸಿದರು.</p>.<p>ಸಭಾ ಕಾರ್ಯಕ್ರಮದಲ್ಲಿ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಎಚ್.ಸೂಫಿ ಹಾಜಿ ಮಾತನಾಡಿ, ‘ಸಾಂಪ್ರದಾಯಿಕ ಆಚರಣೆಗಳನ್ನು ಮತ್ತು ಪದ್ಧತಿ ಪರಂಪರೆಯನ್ನು ಸಂರಕ್ಷಿಸಬೇಕು’ ಎಂದರು.</p>.<p>ಕದಿರು ತೆಗೆದ ಬಳಿಕ ಆಲೀರ ಐನ್ ಮನೆ ಆವರಣದಲ್ಲಿ ಸಾಂಪ್ರದಾಯಿಕ ತಂಬಿಟ್ಟು, ಹುತ್ತರಿ ಗೆಣಸಿನ ಉಪಾಹಾರ ಸೇವಿಸಿದರು. ಕೆ.ಎಂ.ಎ. ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು ಅವರ ಮನೆಯ ಆವರಣದಲ್ಲಿ ಬೋಜನದ ವ್ಯವಸ್ಥೆಗೊಳಿಸಲಾಗಿತ್ತು. ನಂತರ ಗದ್ದೆಯಿಂದ ತಂದ ಕದಿರನ್ನು ಮನೆಗಳಿಗೆ ಕೊಂಡೊಯ್ದರು.</p>.<p>ಆಲೀರ ಎಂ. ಸಾದಲಿ ಅವರ ಗದ್ದೆಯಲ್ಲಿ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಎಚ್. ಸೂಫಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಲೀರ ಕುಟುಂಬದ ಹಿರಿಯರಾದ ಸಾದಲಿ ಅವರು ಭತ್ತದ ತೆನೆಯನ್ನು ಕೊಯ್ದು ಹಂಚಿದರು. </p>.<p>ಕೊಟ್ಟಮುಡಿ, ಕುಂಜಿಲ, ಚೆರಿಯಪರಂಬು ಎಡಪಾಲ, ಕೊಂಡಂಗೇರಿ, ಗುಂಡಿಕೆರೆ, ಕೊಮ್ಮೆತೋಡು, ಚಾಮಿಯಾಲ, ವಿರಾಜಪೇಟೆ, ನಲ್ವತ್ತೋಕ್ಲು, ಅಂಬಟ್ಟಿ, ಚಿಮ್ಮಿಚ್ಚಿಕುಂಡ್ (ಹಳ್ಳಿಗಟ್ಟು)ನ ಸಮುದಾಯ ಬಾಂಧವರು, ಕಾಟ್ರಕೊಲ್ಲಿಯ ಆಲೀರ ಕುಟುಂಬಸ್ಥರು ಪಾಲ್ಗೊಂಡಿದ್ದರು.</p>.<p>ಕೆಎಂಎ ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು, ಕೋಶಾಧಿಕಾರಿ ಹರಿಶ್ಚಂದ್ರ ಎ.ಹಂಸ, ಪ್ರಧಾನ ಕಾರ್ಯದರ್ಶಿ ಈ ತಲತಂಡ ರಫೀಕ್ ತೂಚಮಕೇರಿ, ಸಂಘಟನಾ ಕಾರ್ಯದರ್ಶಿ ಮೀತಲತಂಡ ಎಂ. ಇಸ್ಮಾಯಿಲ್, ಕೆ.ಎಂ.ಎ. ನಿರ್ದೇಶಕ ಮತ್ತು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ರಶೀದ್ ಸಹಯೋಗ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>