<p>ನಾಪೋಕ್ಲು: ಭಾಗಮಂಡಲದ ಕಾವೇರಿ ಕೋಲ್ ಮಂದ್ನಲ್ಲಿ ಶುಕ್ರವಾರ ನಾಲ್ಕು ಗ್ರಾಮದವರಿಂದ ಹುತ್ತರಿ ಕೋಲಾಟ ಸಂಭ್ರಮದಿಂದ ನಡೆಯಿತು.</p>.<p>ಭಾಗಮಂಡಲದ ತಾವೂರು, ಚೇರಂಗಾಲ, ಕೋರಂಗಾಲ ಮತ್ತು ತಣ್ಣಿಮಾನಿ ಗ್ರಾಮಸ್ಥರು ಒಟ್ಟಾಗಿ ಕಾವೇರಿ ಹಿರಿಯ ಮಾನಿ ಮಂದ್ನಲ್ಲಿ ಹುತ್ತರಿ ಕೋಲಾಟ ನಡೆಯಿತು.</p>.<p>ತಾವೂರು ಗ್ರಾಮದ ಮಹಿಷಾಸುರಮರ್ದಿನಿ ದೇವಾಲಯದ ತಕ್ಕರಾದ ಕುರುಂಜಿ ಬಾಲಕೃಷ್ಣ, ಚೇರಂಗಾಲ ಗ್ರಾಮದ ಸಿರಕಜ್ಜೆ ಸುಂದರ, ತಣ್ಣಿಮಾನಿ ಭಗವತಿ ದೇವಾಲಯದ ತಕ್ಕರಾದ ದಂಡಿನ ರುಕ್ಮಯ್ಯ, ಹಾಗೂ ಕೋರಂಗಾಲ ಗ್ರಾಮದ ಸುಬ್ರಹ್ಮಣ್ಯ ದೇವಾಲಯದ ನಂಗಾರು ವಿಜಯ ನೇತೃತ್ವದಲ್ಲಿ ಪುತ್ತರಿಕೋಲು ನಡೆಯಿತು.</p>.<p>ಬಳಿಕ, ಭಾಗಮಂಡಲಕ್ಕೆ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಒಟ್ಟು ಸೇರಿ ಭಗಂಡೇಶ್ವರ ದೇವಾಲಯಕ್ಕೆ ತೆರಳಿದರು. ಅಲ್ಲಿಂದ ವಾದ್ಯಗೋಷ್ಠಿಯೊಂದಿಗೆ ತೆರಳಿದ ಮಂದಿ ಎಂಟು ಸುತ್ತಿನ ಕೋಲಾಟ ನಡೆಸಿದರು. ನಂತರ, ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ಹಿಂತಿರುಗಿ ಕೋಲು ಒಪ್ಪಿಸಲಾಯಿತು.</p>.<p>ತಣ್ಣಿಮಾನಿ ಗ್ರಾಮದ ಭಗವತಿ ದೇವಾಲಯದಲ್ಲಿ ಹುತ್ತರಿ ಕೋಲು ನಡೆದು ಅಲ್ಲಿಯೇ ಕೋಲು ಒಪ್ಪಿಸುವ ಸಂಪ್ರದಾಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಪೋಕ್ಲು: ಭಾಗಮಂಡಲದ ಕಾವೇರಿ ಕೋಲ್ ಮಂದ್ನಲ್ಲಿ ಶುಕ್ರವಾರ ನಾಲ್ಕು ಗ್ರಾಮದವರಿಂದ ಹುತ್ತರಿ ಕೋಲಾಟ ಸಂಭ್ರಮದಿಂದ ನಡೆಯಿತು.</p>.<p>ಭಾಗಮಂಡಲದ ತಾವೂರು, ಚೇರಂಗಾಲ, ಕೋರಂಗಾಲ ಮತ್ತು ತಣ್ಣಿಮಾನಿ ಗ್ರಾಮಸ್ಥರು ಒಟ್ಟಾಗಿ ಕಾವೇರಿ ಹಿರಿಯ ಮಾನಿ ಮಂದ್ನಲ್ಲಿ ಹುತ್ತರಿ ಕೋಲಾಟ ನಡೆಯಿತು.</p>.<p>ತಾವೂರು ಗ್ರಾಮದ ಮಹಿಷಾಸುರಮರ್ದಿನಿ ದೇವಾಲಯದ ತಕ್ಕರಾದ ಕುರುಂಜಿ ಬಾಲಕೃಷ್ಣ, ಚೇರಂಗಾಲ ಗ್ರಾಮದ ಸಿರಕಜ್ಜೆ ಸುಂದರ, ತಣ್ಣಿಮಾನಿ ಭಗವತಿ ದೇವಾಲಯದ ತಕ್ಕರಾದ ದಂಡಿನ ರುಕ್ಮಯ್ಯ, ಹಾಗೂ ಕೋರಂಗಾಲ ಗ್ರಾಮದ ಸುಬ್ರಹ್ಮಣ್ಯ ದೇವಾಲಯದ ನಂಗಾರು ವಿಜಯ ನೇತೃತ್ವದಲ್ಲಿ ಪುತ್ತರಿಕೋಲು ನಡೆಯಿತು.</p>.<p>ಬಳಿಕ, ಭಾಗಮಂಡಲಕ್ಕೆ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಒಟ್ಟು ಸೇರಿ ಭಗಂಡೇಶ್ವರ ದೇವಾಲಯಕ್ಕೆ ತೆರಳಿದರು. ಅಲ್ಲಿಂದ ವಾದ್ಯಗೋಷ್ಠಿಯೊಂದಿಗೆ ತೆರಳಿದ ಮಂದಿ ಎಂಟು ಸುತ್ತಿನ ಕೋಲಾಟ ನಡೆಸಿದರು. ನಂತರ, ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ಹಿಂತಿರುಗಿ ಕೋಲು ಒಪ್ಪಿಸಲಾಯಿತು.</p>.<p>ತಣ್ಣಿಮಾನಿ ಗ್ರಾಮದ ಭಗವತಿ ದೇವಾಲಯದಲ್ಲಿ ಹುತ್ತರಿ ಕೋಲು ನಡೆದು ಅಲ್ಲಿಯೇ ಕೋಲು ಒಪ್ಪಿಸುವ ಸಂಪ್ರದಾಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>