ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗು ಪ್ರಾಕೃತಿಕವಾಗಿ ಸಂಪತ್ಭರಿತವಾಗಿದೆ. ಆದರೆ, ಇಲ್ಲಿನ ಬೆಟ್ಟ, ಗುಡ್ಡಗಳ ಮೇಲೆ ರೆಸಾರ್ಟ್ಗಳನ್ನು ನಿರ್ಮಿಸುವ ಮೂಲಕ ಸುಂದರ ಪರಿಸರವನ್ನು ಹಾಳು ಮಾಡುವ ಕಾರ್ಯ ಮಾಡಲಾಗುತ್ತಿದೆ. ಪರಿಸ್ಥಿತಿ ಹೀಗಿದ್ದರೂ, ಜನಪ್ರತಿನಿಧಿಗಳು ಮಾತ್ರ ಏನನ್ನೂ ಮಾತನಾಡುತ್ತಿಲ್ಲ. ಇಂದು ಯಾವುದೇ ವಿಧದಲ್ಲೂ ಪುಟ್ಟ ಜಿಲ್ಲೆ ಕೊಡಗಿನ ಪ್ರಕೃತಿಯನ್ನು ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.