<p>ಪ್ರಜಾವಾಣಿ ವಾರ್ತೆ</p>.<p>ಸೋಮವಾರಪೇಟೆ: ಸಮೀಪದ ಶಾಂತಳ್ಳಿ ಅಂಗನವಾಡಿ ಶಿಕ್ಷಕಿ ಹಾಗೂ ಬೂತ್ ಮಟ್ಟದ ಅಧಿಕಾರಿ ಎಂ.ಎಲ್.ಇಂದಿರಾವತಿ ಅವರಿಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದ ಅತ್ಯುತ್ತಮ ಶ್ರೇಷ್ಠತೆಯ ಕಾರ್ಯಕ್ಷಮತೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ರಾಜ್ಯದಾದ್ಯಂತ ಚುನಾವಣಾ ತಯಾರಿಯ ಪೂರ್ವ ಸಿದ್ಧತೆಯ ಭಾಗವಾಗಿ ಮತದಾರರ ಗುರುತಿನ ಚೀಟಿ, ಸಮೀಕ್ಷೆ, ಸೇರ್ಪಡೆ, ತಿದ್ದುಪಡಿ ಸೇರಿದಂತೆ ಚುನಾವಣಾ ಆಯೋಗ ನೀಡಿದ ಜವಾಬ್ದಾರಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಬಿಎಲ್ಒಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯಿಂದ ಇಂದಿರಾವತಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಬೆಂಗಳೂರಿನ ಸರ್.ಪುಟ್ಟಣಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ್ದ 16ನೇ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್, ಮುಖ್ಯ ಆಯುಕ್ತ ಎಂ.ಮಹೇಶ್ವರರಾವ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಸೋಮವಾರಪೇಟೆ: ಸಮೀಪದ ಶಾಂತಳ್ಳಿ ಅಂಗನವಾಡಿ ಶಿಕ್ಷಕಿ ಹಾಗೂ ಬೂತ್ ಮಟ್ಟದ ಅಧಿಕಾರಿ ಎಂ.ಎಲ್.ಇಂದಿರಾವತಿ ಅವರಿಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದ ಅತ್ಯುತ್ತಮ ಶ್ರೇಷ್ಠತೆಯ ಕಾರ್ಯಕ್ಷಮತೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ರಾಜ್ಯದಾದ್ಯಂತ ಚುನಾವಣಾ ತಯಾರಿಯ ಪೂರ್ವ ಸಿದ್ಧತೆಯ ಭಾಗವಾಗಿ ಮತದಾರರ ಗುರುತಿನ ಚೀಟಿ, ಸಮೀಕ್ಷೆ, ಸೇರ್ಪಡೆ, ತಿದ್ದುಪಡಿ ಸೇರಿದಂತೆ ಚುನಾವಣಾ ಆಯೋಗ ನೀಡಿದ ಜವಾಬ್ದಾರಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಬಿಎಲ್ಒಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯಿಂದ ಇಂದಿರಾವತಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಬೆಂಗಳೂರಿನ ಸರ್.ಪುಟ್ಟಣಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ್ದ 16ನೇ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್, ಮುಖ್ಯ ಆಯುಕ್ತ ಎಂ.ಮಹೇಶ್ವರರಾವ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>