ಸುಂಟಿಕೊಪ್ಪದ ಟ್ಯಾಕ್ಸಿ ಚಾಲಕರೊಬ್ಬರು ಕರೆ ಮಾಡಿ, ‘ಪ್ರವಾಸಿಗಳಿಗೆ ಜಿಲ್ಲೆಯಲ್ಲಿ ಸೂಕ್ತವಾದ ಶೌಚಾಲಯಗಳು ಇಲ್ಲ, ಇರುವ ಶೌಚಾಲಯಗಳಿಗೂ ನಿರ್ವಹಣೆ ಇಲ್ಲ’ ಎಂದು ದೂರಿದರು. ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಸ್ವಚ್ಛ ಭಾರತ ಮಿಷನ್ನಡಿ ಶೌಚಾಲಯಗಳನ್ನು ನಿರ್ಮಿಸಿ, ಅದರ ನಿರ್ವಹಣೆಯನ್ನು ಖಾಸಗಿಯವರಿಗೆ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದರು.