<p><strong>ಕುಶಾಲನಗರ</strong>: ಪಟ್ಟಣದಲ್ಲಿ ಸಂಚಾರಿ ನಿಯಮಗಳ ಫಲಕಗಳನ್ನು ಅಳವಡಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಬೇಕು ಎಂದು ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿಯು ಡಿವೈಎಸ್ಪಿ ಚಂದ್ರಶೇಖರ್ ಅವರಿಗೆ ಗುರುವಾರ ಮನವಿ ಸಲ್ಲಿಸಿತು</p>.<p>ಇಲ್ಲಿನ ರಥ ಬೀದಿಯಲ್ಲಿ ಲಾರಿ ಸಂಚಾರದಿಂದ ಹಲವು ಬಾರಿ ಸಂಚಾರ ದಟ್ಟಣೆ ಆಗಿರುವುದರಿಂದ ಆ ರಸ್ತೆಯಲ್ಲಿ ಎಲ್ಲ ಮಾದರಿಯ ಲಾರಿ ಸಂಚಾರದಿಂದ ಮುಕ್ತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿ ಅಧ್ಯಕ್ಷ ಕೆ.ಎಸ್.ನಾಗೇಶ್ ನೇತೃತ್ವದಲ್ಲಿ ತೆರಳಿದ ತಂಡ ಸಂಚಾರ ನಿಯಮಗಳನ್ನು ತಿಳಿಸುವ ನಾಮಫಲಕವನ್ನು ಅವಶ್ಯವಿರುವ ಕಡೆಗಳಲ್ಲಿ ಅಳವಡಿಸಲು ಸಲಹೆ ನೀಡಿತು.</p>.<p>ಡಿವೈಎಸ್ಪಿ ಚಂದ್ರಶೇಖರ್ ಮನವಿ ಸ್ವೀಕರಿಸಿ ಮಾತನಾಡಿ, ‘ವರ್ತಕರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ನಾಮಫಲಕ ಅಳವಡಿಸಲು ನಮ್ಮದೇ ಆದ ನಿಯಮಗಳು ಇವೆ. ಅದರಂತೆ ಫಲಕಗಳನ್ನು ಮಾಡಿಸಲು ದಾನಿಗಳು ಮುಂದಾದರೆ ಖಂಡಿತಾ ಎಲ್ಲಾ ಕಡೆ ಸೂಚನಾ ಫಲಕಗಳನ್ನು ಹಾಕಿಸಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕುಶಾಲನಗರ ಸ್ಥಾನೀಯ ಸಮಿತಿಯ ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ನಿಕಟಪೂರ್ವ ಅಧ್ಯಕ್ಷ ರವೀಂದ್ರ ರೈ, ಕಾರ್ಯದರ್ಶಿ ಚಿತ್ರ ರಮೇಶ್, ಖಜಾಂಚಿ ಎನ್.ವಿ.ಬಾಬು, ನಿರ್ದೇಶಕರಾದ ಕೆ.ಜೆ.ಸತೀಶ್, ಅಬ್ದುಲ್ ರಶೀದ್, ಬಿ.ಎನ್.ಅಂಜನ್, ಜನಾರ್ಧನ ಪ್ರಭು, ಕುಶಾಲನಗರ ಠಾಣಾಧಿಕಾರಿ ಗಣೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಪಟ್ಟಣದಲ್ಲಿ ಸಂಚಾರಿ ನಿಯಮಗಳ ಫಲಕಗಳನ್ನು ಅಳವಡಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಬೇಕು ಎಂದು ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿಯು ಡಿವೈಎಸ್ಪಿ ಚಂದ್ರಶೇಖರ್ ಅವರಿಗೆ ಗುರುವಾರ ಮನವಿ ಸಲ್ಲಿಸಿತು</p>.<p>ಇಲ್ಲಿನ ರಥ ಬೀದಿಯಲ್ಲಿ ಲಾರಿ ಸಂಚಾರದಿಂದ ಹಲವು ಬಾರಿ ಸಂಚಾರ ದಟ್ಟಣೆ ಆಗಿರುವುದರಿಂದ ಆ ರಸ್ತೆಯಲ್ಲಿ ಎಲ್ಲ ಮಾದರಿಯ ಲಾರಿ ಸಂಚಾರದಿಂದ ಮುಕ್ತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿ ಅಧ್ಯಕ್ಷ ಕೆ.ಎಸ್.ನಾಗೇಶ್ ನೇತೃತ್ವದಲ್ಲಿ ತೆರಳಿದ ತಂಡ ಸಂಚಾರ ನಿಯಮಗಳನ್ನು ತಿಳಿಸುವ ನಾಮಫಲಕವನ್ನು ಅವಶ್ಯವಿರುವ ಕಡೆಗಳಲ್ಲಿ ಅಳವಡಿಸಲು ಸಲಹೆ ನೀಡಿತು.</p>.<p>ಡಿವೈಎಸ್ಪಿ ಚಂದ್ರಶೇಖರ್ ಮನವಿ ಸ್ವೀಕರಿಸಿ ಮಾತನಾಡಿ, ‘ವರ್ತಕರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ನಾಮಫಲಕ ಅಳವಡಿಸಲು ನಮ್ಮದೇ ಆದ ನಿಯಮಗಳು ಇವೆ. ಅದರಂತೆ ಫಲಕಗಳನ್ನು ಮಾಡಿಸಲು ದಾನಿಗಳು ಮುಂದಾದರೆ ಖಂಡಿತಾ ಎಲ್ಲಾ ಕಡೆ ಸೂಚನಾ ಫಲಕಗಳನ್ನು ಹಾಕಿಸಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕುಶಾಲನಗರ ಸ್ಥಾನೀಯ ಸಮಿತಿಯ ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ನಿಕಟಪೂರ್ವ ಅಧ್ಯಕ್ಷ ರವೀಂದ್ರ ರೈ, ಕಾರ್ಯದರ್ಶಿ ಚಿತ್ರ ರಮೇಶ್, ಖಜಾಂಚಿ ಎನ್.ವಿ.ಬಾಬು, ನಿರ್ದೇಶಕರಾದ ಕೆ.ಜೆ.ಸತೀಶ್, ಅಬ್ದುಲ್ ರಶೀದ್, ಬಿ.ಎನ್.ಅಂಜನ್, ಜನಾರ್ಧನ ಪ್ರಭು, ಕುಶಾಲನಗರ ಠಾಣಾಧಿಕಾರಿ ಗಣೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>