<p><strong>ಕುಶಾಲನಗರ:</strong> ಇಲ್ಲಿನ ಕಾವೇರಿ ನದಿ ಹರಿಯುವ ಮಾರ್ಗ ಮಧ್ಯೆ ಕುಶಾಲನಗರ -ಕೊಪ್ಪ ಸೇತುವೆಗೆ ₹ 30 ಲಕ್ಷ ವೆಚ್ಚದಲ್ಲಿ ಸ್ವಯಂಚಾಲಿತ ವಾಟರ್ ಗೇಜ್ನ್ನು ಅಳವಡಿಸಲಾಗಿದೆ. ಇದರ ಮೂಲಕ ನೀರಿನ ಆಳ ಹಾಗೂ ಹರಿಯುವ ಪ್ರಮಾಣದ ಮೇಲೆ ಕೇಂದ್ರ ಜಲ ಆಯೋಗ ಕಣ್ಗಾವಲು ಇರಿಸಲು ಸಾಧ್ಯವಾಗಲಿದೆ.</p>.<p>ಪ್ರವಾಹ ಸೇರಿದಂತೆ ನದಿಯ ನೀರಿನ ಹರಿವಿನ ಪ್ರಮಾಣವನ್ನು ಸ್ವಯಂಚಾಲಿತವಾಗಿ ಈ ಉಪಕರಣ ದಾಖಲಿಸುತ್ತದೆ. ಜತೆಗೆ, ಶೀಘ್ರವಾಗಿ ಮಾಹಿತಿಯನ್ನು ರವಾನಿಸುತ್ತದೆ. ಈ ನಿಟ್ಟಿನಲ್ಲಿ ಸೇತುವೆಯ ಮೇಲ್ಭಾಗದಲ್ಲಿ ಕೇಂದ್ರ ಜಲಸಂಪನ್ಮೂಲ ಇಲಾಖೆಯಿಂದ ನದಿ ಜಲಮಾಪಕ ಕೇಂದ್ರ ಸ್ಥಾಪಿಸಲಾಗಿದೆ.</p>.<p>ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ನೀರು ಹಂಚಿಕೆ ವಿವಾದ ಕಳೆದ ಅನೇಕ ವರ್ಷಗಳಿಂದ ಬಗೆಹರಿಯದ ಸಮಸ್ಯೆಯಾಗಿ ಕಾಡುತ್ತಿದ್ದು. ಕೇಂದ್ರ ಜಲ ಆಯೋಗದ ನಿರ್ದೇಶನದ ಮೇರೆಗೆ ಈ ಹಿಂದೆ ಹಾರಂಗಿ ಅಣೆಕಟ್ಟೆಗೂ ಕೂಡ ಟೆಲಿಮೆಟ್ರಿಕ್ ವಾಟರ್ ಗೇಜ್ ಅಳವಡಿಸಲಾಗಿದೆ. ಜಲಾಶಯದ ನೀರಿನ ಸಂಗ್ರಹ ಪ್ರಮಾಣ, ಒಳಹರಿವು ಮತ್ತು ಹೊರ ಹರಿವಿನ ಪ್ರಮಾಣ ಸೇರಿದಂತೆ ಕ್ಷಣ ಕ್ಷಣದ ಮಾಹಿತಿಯನ್ನು ಆಯೋಗಕ್ಕೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.</p>.<p>ಕಾವೇರಿ ನದಿಯ ಸ್ಥಿತಿಗತಿ ಜೊತೆಗೆ ಮಳೆಯ ಪ್ರಮಾಣ, ಹವಾಮಾನ ವರದಿ, ಮಳೆ ಎಷ್ಟು ಬೀಳಬಹುದು ಎನ್ನುವ ಮುನ್ಸೂಚನೆ ಪಡೆದುಕೊಳ್ಳಲೂ ಈ ವ್ಯವಸ್ಥೆ ಸಹಕಾರಿಯಾಗಿದೆ.</p>.<p>ನೀರಾವರಿ ಇಲಾಖೆ ಅಣೆಕಟ್ಟೆ ವಿಭಾಗದ ಅಧಿಕಾರಿಗಳು ಜಲಾಶಯಗಳ ನೀರಿನ ಪ್ರಮಾಣ ಕುರಿತು ಅಳತೆ ಮಾಡಿ ಲಿಖಿತವಾಗಿ ಮೇಲಧಿಕಾರಿಗಳಿಗೆ ಕಳುಹಿಸುವ ವ್ಯವಸ್ಥೆ ಇತ್ತು. ಇದೀಗ ನೂತನ ಯಂತ್ರೋಪಕರಣ ಅಳವಡಿಸಿರುವುದರಿಂದ ಕ್ಷಣ ಕ್ಷಣದ ಎಲ್ಲಾ ಮಾಹಿತಿಯೂ ನೇರವಾಗಿ ಆಯೋಗಕ್ಕೆ ತಲುಪುತ್ತದೆ.</p>.<p>ಸ್ವಯಂಚಾಲಿತ ಉಪಕರಣ: ಈ ಯಂತ್ರದಿಂದ ನದಿಯ ನೀರಿನ ಮಟ್ಟ, ಏರಿಕೆ, ಇಳಿಕೆ, ಹರಿವು ಸಂಬಂಧಿಸಿದ ಅಂಕಿ ಅಂಶಗಳು ಸೇರಿದಂತೆ ಎಲ್ಲಾ ಬಗೆಯ ಮಾಹಿತಿ ಉಪಗ್ರಹದ ಮೂಲಕ ಕೇಂದ್ರ ಜಲ ಆಯೋಗದ ಬೆಂಗಳೂರು ಮತ್ತು ದೆಹಲಿಯ ಕಚೇರಿಗಳಿಗೆ ನೇರವಾಗಿ ರವಾನೆ ಆಗುತ್ತದೆ. ಈ ಎಲ್ಲಾ ಮಾಹಿತಿಗಳು ಸ್ಥಳೀಯ ಅಧಿಕಾರಿಗಳಿಗೆ ಸಿಗುವುದಿಲ್ಲ.</p>.<p>‘ಈ ಕೇಂದ್ರ ಕಾರ್ಯಚರಣೆ ನಡೆಸಲು ಸೋಲಾರ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ತಂತ್ರಜ್ಞಾನದ ಕೇಂದ್ರದ ಕಾಮಗಾರಿ ಸಂಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಕಾರ್ಯ ಆರಂಭ ಗೊಳಿಸಲಿದೆ’ ಎಂದು ಜಲಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಂತೋಷ್ ಕುಮಾರ್ ತಿಳಿಸಿದ್ದಾರೆ.</p>.<p>ಇದುವರೆಗೆ ನದಿ ನೀರಿನ ಹರಿವಿನ ಪ್ರಮಾಣವನ್ನು ಮಾನವ ಸಂಪನ್ಮೂಲ ಬಳಸಿ ಸಂಗ್ರಹಿಸಲಾಗುತ್ತಿತ್ತು. ಇದೀಗ ಸಂಪೂರ್ಣವಾಗಿ ಸ್ವಯಂಚಾಲಿತವಾಗಿ ಹರಿವಿನ ಪ್ರಮಾಣವನ್ನು ಪಡೆಯುವ ವ್ಯವಸ್ಥೆ ಹೊಂದಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಇಲ್ಲಿನ ಕಾವೇರಿ ನದಿ ಹರಿಯುವ ಮಾರ್ಗ ಮಧ್ಯೆ ಕುಶಾಲನಗರ -ಕೊಪ್ಪ ಸೇತುವೆಗೆ ₹ 30 ಲಕ್ಷ ವೆಚ್ಚದಲ್ಲಿ ಸ್ವಯಂಚಾಲಿತ ವಾಟರ್ ಗೇಜ್ನ್ನು ಅಳವಡಿಸಲಾಗಿದೆ. ಇದರ ಮೂಲಕ ನೀರಿನ ಆಳ ಹಾಗೂ ಹರಿಯುವ ಪ್ರಮಾಣದ ಮೇಲೆ ಕೇಂದ್ರ ಜಲ ಆಯೋಗ ಕಣ್ಗಾವಲು ಇರಿಸಲು ಸಾಧ್ಯವಾಗಲಿದೆ.</p>.<p>ಪ್ರವಾಹ ಸೇರಿದಂತೆ ನದಿಯ ನೀರಿನ ಹರಿವಿನ ಪ್ರಮಾಣವನ್ನು ಸ್ವಯಂಚಾಲಿತವಾಗಿ ಈ ಉಪಕರಣ ದಾಖಲಿಸುತ್ತದೆ. ಜತೆಗೆ, ಶೀಘ್ರವಾಗಿ ಮಾಹಿತಿಯನ್ನು ರವಾನಿಸುತ್ತದೆ. ಈ ನಿಟ್ಟಿನಲ್ಲಿ ಸೇತುವೆಯ ಮೇಲ್ಭಾಗದಲ್ಲಿ ಕೇಂದ್ರ ಜಲಸಂಪನ್ಮೂಲ ಇಲಾಖೆಯಿಂದ ನದಿ ಜಲಮಾಪಕ ಕೇಂದ್ರ ಸ್ಥಾಪಿಸಲಾಗಿದೆ.</p>.<p>ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ನೀರು ಹಂಚಿಕೆ ವಿವಾದ ಕಳೆದ ಅನೇಕ ವರ್ಷಗಳಿಂದ ಬಗೆಹರಿಯದ ಸಮಸ್ಯೆಯಾಗಿ ಕಾಡುತ್ತಿದ್ದು. ಕೇಂದ್ರ ಜಲ ಆಯೋಗದ ನಿರ್ದೇಶನದ ಮೇರೆಗೆ ಈ ಹಿಂದೆ ಹಾರಂಗಿ ಅಣೆಕಟ್ಟೆಗೂ ಕೂಡ ಟೆಲಿಮೆಟ್ರಿಕ್ ವಾಟರ್ ಗೇಜ್ ಅಳವಡಿಸಲಾಗಿದೆ. ಜಲಾಶಯದ ನೀರಿನ ಸಂಗ್ರಹ ಪ್ರಮಾಣ, ಒಳಹರಿವು ಮತ್ತು ಹೊರ ಹರಿವಿನ ಪ್ರಮಾಣ ಸೇರಿದಂತೆ ಕ್ಷಣ ಕ್ಷಣದ ಮಾಹಿತಿಯನ್ನು ಆಯೋಗಕ್ಕೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.</p>.<p>ಕಾವೇರಿ ನದಿಯ ಸ್ಥಿತಿಗತಿ ಜೊತೆಗೆ ಮಳೆಯ ಪ್ರಮಾಣ, ಹವಾಮಾನ ವರದಿ, ಮಳೆ ಎಷ್ಟು ಬೀಳಬಹುದು ಎನ್ನುವ ಮುನ್ಸೂಚನೆ ಪಡೆದುಕೊಳ್ಳಲೂ ಈ ವ್ಯವಸ್ಥೆ ಸಹಕಾರಿಯಾಗಿದೆ.</p>.<p>ನೀರಾವರಿ ಇಲಾಖೆ ಅಣೆಕಟ್ಟೆ ವಿಭಾಗದ ಅಧಿಕಾರಿಗಳು ಜಲಾಶಯಗಳ ನೀರಿನ ಪ್ರಮಾಣ ಕುರಿತು ಅಳತೆ ಮಾಡಿ ಲಿಖಿತವಾಗಿ ಮೇಲಧಿಕಾರಿಗಳಿಗೆ ಕಳುಹಿಸುವ ವ್ಯವಸ್ಥೆ ಇತ್ತು. ಇದೀಗ ನೂತನ ಯಂತ್ರೋಪಕರಣ ಅಳವಡಿಸಿರುವುದರಿಂದ ಕ್ಷಣ ಕ್ಷಣದ ಎಲ್ಲಾ ಮಾಹಿತಿಯೂ ನೇರವಾಗಿ ಆಯೋಗಕ್ಕೆ ತಲುಪುತ್ತದೆ.</p>.<p>ಸ್ವಯಂಚಾಲಿತ ಉಪಕರಣ: ಈ ಯಂತ್ರದಿಂದ ನದಿಯ ನೀರಿನ ಮಟ್ಟ, ಏರಿಕೆ, ಇಳಿಕೆ, ಹರಿವು ಸಂಬಂಧಿಸಿದ ಅಂಕಿ ಅಂಶಗಳು ಸೇರಿದಂತೆ ಎಲ್ಲಾ ಬಗೆಯ ಮಾಹಿತಿ ಉಪಗ್ರಹದ ಮೂಲಕ ಕೇಂದ್ರ ಜಲ ಆಯೋಗದ ಬೆಂಗಳೂರು ಮತ್ತು ದೆಹಲಿಯ ಕಚೇರಿಗಳಿಗೆ ನೇರವಾಗಿ ರವಾನೆ ಆಗುತ್ತದೆ. ಈ ಎಲ್ಲಾ ಮಾಹಿತಿಗಳು ಸ್ಥಳೀಯ ಅಧಿಕಾರಿಗಳಿಗೆ ಸಿಗುವುದಿಲ್ಲ.</p>.<p>‘ಈ ಕೇಂದ್ರ ಕಾರ್ಯಚರಣೆ ನಡೆಸಲು ಸೋಲಾರ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ತಂತ್ರಜ್ಞಾನದ ಕೇಂದ್ರದ ಕಾಮಗಾರಿ ಸಂಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಕಾರ್ಯ ಆರಂಭ ಗೊಳಿಸಲಿದೆ’ ಎಂದು ಜಲಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಂತೋಷ್ ಕುಮಾರ್ ತಿಳಿಸಿದ್ದಾರೆ.</p>.<p>ಇದುವರೆಗೆ ನದಿ ನೀರಿನ ಹರಿವಿನ ಪ್ರಮಾಣವನ್ನು ಮಾನವ ಸಂಪನ್ಮೂಲ ಬಳಸಿ ಸಂಗ್ರಹಿಸಲಾಗುತ್ತಿತ್ತು. ಇದೀಗ ಸಂಪೂರ್ಣವಾಗಿ ಸ್ವಯಂಚಾಲಿತವಾಗಿ ಹರಿವಿನ ಪ್ರಮಾಣವನ್ನು ಪಡೆಯುವ ವ್ಯವಸ್ಥೆ ಹೊಂದಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>