<p><strong>ಕುಶಾಲನಗರ:</strong> ‘ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು’ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ. ಶಶಿಧರ್ ಹೇಳಿದರು.</p>.<p>ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ, ವಿಸ್ತರಣಾ ಘಟಕ ಮಡಿಕೇರಿ, ಕೃಷಿ ವಿಜ್ಞಾನ ಕೇಂದ್ರ ಗೋಣಿಕೊಪ್ಪಲು, ಕೃಷಿ ಇಲಾಖೆ ಹಾಗೂ ಶಿರಂಗಾಲ ಕೃಷಿ ಪತ್ತಿನ ಸಹಕಾರ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಮಣಜೂರಿನ ರೈತ ಭವನದಲ್ಲಿ ಶುಕ್ರವಾರ ‘ಆತ್ಮಾ’ ಯೋಜನೆಯಡಿ ರೈತರಿಗೆ ಏರ್ಪಡಿಸಿದ್ದ ಕಲ್ಲಂಗಡಿ ಬೆಳೆಯ ಕ್ಷೇತ್ರೋತ್ಸವ ಮತ್ತು ಜೇನು ಕೃಷಿ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೊಡಗಿನಲ್ಲಿ ಹೆಚ್ಚು ತೋಟಗಾರಿಕೆ ಬೆಳೆಗಳನ್ನು ಬೆಳೆಯಾಗುತ್ತಿದೆ. ರೈತರು ಹೈನುಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಕೃಷಿಯೊಂದಿಗೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಯಶಸ್ಸು ಗಳಿಸಬೇಕು’ ಎಂದರು.</p>.<p>‘ಜೇನು ಸಾಕಾಣಿಕೆಯನ್ನು ಉಪಕೃಷಿಯನ್ನಾಗಿ ಕೈಗೊಂಡಲ್ಲಿ ಉತ್ತಮ ಆದಾಯ ಗಳಿಸಬಹುದು. ಜೇನು ಪ್ರಮುಖ ನೈಸರ್ಗಿಕ ಸಂಪನ್ಮೂಲ. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಕೂಡ ದೊರೆಯುತ್ತದೆ. ಆದ್ದರಿಂದ ರೈತರು ಜೇನು ಸಾಕಾಣಿಕೆಗೆ ಹೆಚ್ಚಿನ ಒತ್ತು ನೀಡಬೇಕು’ ಎಂದರು.</p>.<p>ಉಪ ಕೃಷಿ ನಿರ್ದೇಶಕ ಸೋಮಶೇಖರ್ ಮಾತನಾಡಿ, ‘ತೋಟಗಾರಿಕೆ ವೈವಿಧ್ಯ ಬೆಳೆಗಳನ್ನು ರೈತರು ಹೆಚ್ಚು ಬೆಳೆಯುತ್ತಿದ್ದಾರೆ. ವೈಜ್ಞಾನಿಕ ಜೇನು ಕೃಷಿ, ಕಲ್ಲಂಗಡಿ ಕ್ಷೇತ್ರೋತ್ಸವ ಕುರಿತು ವಿಜ್ಞಾನಿಗಳು ಮಾಹಿತಿ ನೀಡುತ್ತಾರೆ. ಏಕ ಬೆಳೆ ಬದಲಿಗೆ ವೈವಿಧ್ಯ ಬೆಳೆಗೆ ಹೆಚ್ಚಿನ ಒತ್ತು ಕೊಡಬೇಕು’ ಎಂದರು.</p>.<p>‘ಏಕ ಬೆಳೆಯಲ್ಲಿ ಹೆಚ್ಚು ನಷ್ಟು ಉಂಟಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚು ನಡೆಯುತ್ತಿವೆ. ಆದ್ದರಿಂದ ರೈತರು ವಿಜ್ಞಾನಿಗಳ ಸಲಹೆ ಪಡೆದು ವೈಜ್ಞಾನಿಕ ಕೃಷಿ ಪದ್ಧತಿಯನ್ನು ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಶಿವಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಕೃಷಿಯಲ್ಲಿ ಪ್ರತಿ ದಿನ ಹೊಸವಿಷಯ ಕಲಿಯಬೇಕು. ಹವಾಮಾನ ವೈಪರೀತ್ಯದಿಂದ ಚಳಿಗಾಲದಲ್ಲಿ ಚಳಿ ಇರೋದಿಲ್ಲ, ಮಳೆಗಾಲದಲ್ಲಿ ಮಳೆ ಬರೋದಿಲ್ಲ. ಯಾವುದೋ ಸಮಯದಲ್ಲಿ ಮಳೆ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ರೈತ ಕೃಷಿಯಲ್ಲಿ ಸಂತೋಷವಾಗಿದ್ದೇನೆ ಎಂದು ಸಮಾಧಾನ ಪಡಲು ಸಾಧ್ಯವಾಗುವುದಿಲ್ಲ. ಕೃಷಿಯನ್ನು ವೃತ್ತಿಪರವಾಗಿ ನೋಡದೆ ವಾಣಿಜ್ಯ ಉದ್ದೇಶವಾಗಿ ಕೈಗೊಳ್ಳಬೇಕಾದ ಅನಿವಾರ್ಯ ಉಂಟಾಗಿದೆ’ ಎಂದರು.</p>.<p>ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀರೇಂದ್ರ ಕುಮಾರ್, ರೋಗ ಮತ್ತು ಕೀಟಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.</p>.<p>ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ರಾಣಿ ಅವರು ಕಲ್ಲಂಗಡಿ ಬೆಳೆಗೆ ಬರುವ ರೋಗ ಮತ್ತು ಕೀಟಗಳ ಕುರಿತು ಮಾಹಿತಿ ನೀಡಿದರು.</p>.<p>ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತಾರಣಾ ಶಿಕ್ಷಣ ಘಟಕದ ಮುಖ್ಯಸ್ಥ ಆರ್.ಎನ್.ಕೆಂಚರೆಡ್ಡಿ, ಸಹ ಪ್ರಾಧ್ಯಾಪಕ ಪಿ.ಹೇಮಂತ್ ಕುಮಾರ್, ಪೊನ್ನಂಪೇಟೆ ಕೃಷಿ ಸಂಶೋಧನಾ ಕೇಂದ್ರ ಸಹಾಯಕ ಪ್ರಾಧ್ಯಾಪಕ ಪ್ರಾಶಂತ್, ಮಡಿಕೇರಿ ಕೃಷಿ ಇಲಾಖೆಯ ಉಪ ಯೋಜನಾ ನಿರ್ದೇಶಕಿ ಪಿ.ಜಿ. ಮೈತ್ರಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಸ್.ಎಂ.ಭರತ್, ಶಿರಂಗಾಲ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ಎಂ.ಎಸ್.ಜೀವನ್, ನಿರ್ದೇಶಕ ಬಸವರಾಜು, ಮಣಜೂರು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎಂ.ಪಿ.ರಾಜಶೇಖರ್, ಶಿರಂಗಾಲ ಮಂಟಿಗಮ್ಮ ದೇವಾಲಯ ಸಮಿತಿ ಅಧ್ಯಕ್ಷ ನೇಮೇಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಎಸ್.ಎನ್.ರಮೇಶ್, ಪ್ರಗತಿಪರ ಕೃಷಿಕ ಶೇಷಪ್ಪ ಪಾಲ್ಗೊಂಡಿದ್ದರು. ಇದೇ ವೇಳೆ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ‘ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು’ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ. ಶಶಿಧರ್ ಹೇಳಿದರು.</p>.<p>ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ, ವಿಸ್ತರಣಾ ಘಟಕ ಮಡಿಕೇರಿ, ಕೃಷಿ ವಿಜ್ಞಾನ ಕೇಂದ್ರ ಗೋಣಿಕೊಪ್ಪಲು, ಕೃಷಿ ಇಲಾಖೆ ಹಾಗೂ ಶಿರಂಗಾಲ ಕೃಷಿ ಪತ್ತಿನ ಸಹಕಾರ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಮಣಜೂರಿನ ರೈತ ಭವನದಲ್ಲಿ ಶುಕ್ರವಾರ ‘ಆತ್ಮಾ’ ಯೋಜನೆಯಡಿ ರೈತರಿಗೆ ಏರ್ಪಡಿಸಿದ್ದ ಕಲ್ಲಂಗಡಿ ಬೆಳೆಯ ಕ್ಷೇತ್ರೋತ್ಸವ ಮತ್ತು ಜೇನು ಕೃಷಿ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೊಡಗಿನಲ್ಲಿ ಹೆಚ್ಚು ತೋಟಗಾರಿಕೆ ಬೆಳೆಗಳನ್ನು ಬೆಳೆಯಾಗುತ್ತಿದೆ. ರೈತರು ಹೈನುಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಕೃಷಿಯೊಂದಿಗೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಯಶಸ್ಸು ಗಳಿಸಬೇಕು’ ಎಂದರು.</p>.<p>‘ಜೇನು ಸಾಕಾಣಿಕೆಯನ್ನು ಉಪಕೃಷಿಯನ್ನಾಗಿ ಕೈಗೊಂಡಲ್ಲಿ ಉತ್ತಮ ಆದಾಯ ಗಳಿಸಬಹುದು. ಜೇನು ಪ್ರಮುಖ ನೈಸರ್ಗಿಕ ಸಂಪನ್ಮೂಲ. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಕೂಡ ದೊರೆಯುತ್ತದೆ. ಆದ್ದರಿಂದ ರೈತರು ಜೇನು ಸಾಕಾಣಿಕೆಗೆ ಹೆಚ್ಚಿನ ಒತ್ತು ನೀಡಬೇಕು’ ಎಂದರು.</p>.<p>ಉಪ ಕೃಷಿ ನಿರ್ದೇಶಕ ಸೋಮಶೇಖರ್ ಮಾತನಾಡಿ, ‘ತೋಟಗಾರಿಕೆ ವೈವಿಧ್ಯ ಬೆಳೆಗಳನ್ನು ರೈತರು ಹೆಚ್ಚು ಬೆಳೆಯುತ್ತಿದ್ದಾರೆ. ವೈಜ್ಞಾನಿಕ ಜೇನು ಕೃಷಿ, ಕಲ್ಲಂಗಡಿ ಕ್ಷೇತ್ರೋತ್ಸವ ಕುರಿತು ವಿಜ್ಞಾನಿಗಳು ಮಾಹಿತಿ ನೀಡುತ್ತಾರೆ. ಏಕ ಬೆಳೆ ಬದಲಿಗೆ ವೈವಿಧ್ಯ ಬೆಳೆಗೆ ಹೆಚ್ಚಿನ ಒತ್ತು ಕೊಡಬೇಕು’ ಎಂದರು.</p>.<p>‘ಏಕ ಬೆಳೆಯಲ್ಲಿ ಹೆಚ್ಚು ನಷ್ಟು ಉಂಟಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚು ನಡೆಯುತ್ತಿವೆ. ಆದ್ದರಿಂದ ರೈತರು ವಿಜ್ಞಾನಿಗಳ ಸಲಹೆ ಪಡೆದು ವೈಜ್ಞಾನಿಕ ಕೃಷಿ ಪದ್ಧತಿಯನ್ನು ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಶಿವಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಕೃಷಿಯಲ್ಲಿ ಪ್ರತಿ ದಿನ ಹೊಸವಿಷಯ ಕಲಿಯಬೇಕು. ಹವಾಮಾನ ವೈಪರೀತ್ಯದಿಂದ ಚಳಿಗಾಲದಲ್ಲಿ ಚಳಿ ಇರೋದಿಲ್ಲ, ಮಳೆಗಾಲದಲ್ಲಿ ಮಳೆ ಬರೋದಿಲ್ಲ. ಯಾವುದೋ ಸಮಯದಲ್ಲಿ ಮಳೆ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ರೈತ ಕೃಷಿಯಲ್ಲಿ ಸಂತೋಷವಾಗಿದ್ದೇನೆ ಎಂದು ಸಮಾಧಾನ ಪಡಲು ಸಾಧ್ಯವಾಗುವುದಿಲ್ಲ. ಕೃಷಿಯನ್ನು ವೃತ್ತಿಪರವಾಗಿ ನೋಡದೆ ವಾಣಿಜ್ಯ ಉದ್ದೇಶವಾಗಿ ಕೈಗೊಳ್ಳಬೇಕಾದ ಅನಿವಾರ್ಯ ಉಂಟಾಗಿದೆ’ ಎಂದರು.</p>.<p>ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀರೇಂದ್ರ ಕುಮಾರ್, ರೋಗ ಮತ್ತು ಕೀಟಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.</p>.<p>ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ರಾಣಿ ಅವರು ಕಲ್ಲಂಗಡಿ ಬೆಳೆಗೆ ಬರುವ ರೋಗ ಮತ್ತು ಕೀಟಗಳ ಕುರಿತು ಮಾಹಿತಿ ನೀಡಿದರು.</p>.<p>ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತಾರಣಾ ಶಿಕ್ಷಣ ಘಟಕದ ಮುಖ್ಯಸ್ಥ ಆರ್.ಎನ್.ಕೆಂಚರೆಡ್ಡಿ, ಸಹ ಪ್ರಾಧ್ಯಾಪಕ ಪಿ.ಹೇಮಂತ್ ಕುಮಾರ್, ಪೊನ್ನಂಪೇಟೆ ಕೃಷಿ ಸಂಶೋಧನಾ ಕೇಂದ್ರ ಸಹಾಯಕ ಪ್ರಾಧ್ಯಾಪಕ ಪ್ರಾಶಂತ್, ಮಡಿಕೇರಿ ಕೃಷಿ ಇಲಾಖೆಯ ಉಪ ಯೋಜನಾ ನಿರ್ದೇಶಕಿ ಪಿ.ಜಿ. ಮೈತ್ರಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಸ್.ಎಂ.ಭರತ್, ಶಿರಂಗಾಲ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ಎಂ.ಎಸ್.ಜೀವನ್, ನಿರ್ದೇಶಕ ಬಸವರಾಜು, ಮಣಜೂರು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎಂ.ಪಿ.ರಾಜಶೇಖರ್, ಶಿರಂಗಾಲ ಮಂಟಿಗಮ್ಮ ದೇವಾಲಯ ಸಮಿತಿ ಅಧ್ಯಕ್ಷ ನೇಮೇಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಎಸ್.ಎನ್.ರಮೇಶ್, ಪ್ರಗತಿಪರ ಕೃಷಿಕ ಶೇಷಪ್ಪ ಪಾಲ್ಗೊಂಡಿದ್ದರು. ಇದೇ ವೇಳೆ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>