<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಮಂಗಳವಾರ ನಡೆದ ಅಂತರರಾಜ್ಯ ಅಪರಾಧ ಸಭೆಯಲ್ಲಿ ಕೇರಳದ 4 ಹಾಗೂ ಕರ್ನಾಟಕದ 4 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.</p>.<p>ಐಜಿಪಿ ಅಮಿತ್ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಕೈಗೊಳ್ಳಬೇಕಿರುವ ಭದ್ರತಾ ಕ್ರಮಗಳ ಕುರಿತು ಪ್ರಮುಖವಾಗಿ ಚರ್ಚೆ ನಡೆಯಿತು.</p>.<p>ಕರ್ನಾಟಕ ಮತ್ತು ಕೇರಳ ಗಡಿಯಲ್ಲಿ ಸಕ್ರಿಯವಾಗಿರುವ ನಕ್ಸಲರ ಚಲನವಲನಗಳ ಕುರಿತು ಸುದೀರ್ಘವಾದ ಮಾಹಿತಿ ಹಂಚಿಕೆಗಳು ನಡೆದವು. ಜೊತೆಗೆ, ಅಕ್ರಮ ಹಣ ಮತ್ತು ಮದ್ಯ ಸಾಗಣೆ, ಇವುಗಳನ್ನು ತಡೆಯಲು ಚೆಕ್ಪೋಸ್ಟ್ಗಳ ರಚನೆ, ಕೈಗೊಳ್ಳಬೇಕಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತೂ ಚರ್ಚೆಗಳು ನಡೆದವು.</p>.<p>ಅಂತರರಾಜ್ಯ ಗಡಿಯಲ್ಲಿ ಹೆಚ್ಚುತ್ತಿರುವ ದರೋಡೆ ಪ್ರಕರಣಗಳು, ಪ್ರಮುಖ ಆರೋಪಿಗಳು ಮೊದಲಾದ ಅಪರಾಧ ಚಟುವಟಿಕೆಗಳ ಕುರಿತೂ ಅಧಿಕಾರಿಗಳು ಪರಸ್ಪರ ಮಾಹಿತಿ ಹಂಚಿಕೊಂಡರು ಎಂದು ಮೂಲಗಳು ತಿಳಿಸಿವೆ.</p>.<p>ಈ ಸಭೆಯಲ್ಲಿ ಕೇರಳ ರಾಜ್ಯದ ಕಣ್ಣೂರಿನ ಐಜಿಪಿ ಥಾಮಸ್ ಜೋಸ್, ಎಟಿಎಸ್ನ ಡಿಐಜಿ ಪುಟ್ಟ ವಿಮಲಾದಿತ್ಯ, ವೈನಾಡುವಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣನ್, ಕಣ್ಣೂರಿನ ಹೇಮಲತಾ, ಕಾಸರಗೋಡಿನ ಬಿಜಯ್, ಸ್ಪೆಷಲ್ ಆಪರೇಷನ್ ಗ್ರೂಪ್ನ ಎಸ್.ಪಿ. ತಪೋಸ್ ಭಾಗವಹಿಸಿದ್ದರು.</p>.<p>ಕರ್ನಾಟಕದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ದಕ್ಷಿಣ ಕನ್ನಡದ ರಿಷ್ಯಂತ್, ಮೈಸೂರಿನ ಸೀಮಾಲಾಟ್ಕರ್, ಚಾಮರಾಜನಗರ ಪದ್ಮಿನಿ ಸಾಹು, ಆಂತರಿಕ ಭದ್ರತಾ ವಿಭಾಗದ ಎಸ್.ಪಿ ಪ್ರಕಾಶ್ಗೌಡ, ಮೈಸೂರು ನಗರದ ಡಿಸಿಪಿ ದಿನೇಶ್ಕುಮಾರ್ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಮಂಗಳವಾರ ನಡೆದ ಅಂತರರಾಜ್ಯ ಅಪರಾಧ ಸಭೆಯಲ್ಲಿ ಕೇರಳದ 4 ಹಾಗೂ ಕರ್ನಾಟಕದ 4 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.</p>.<p>ಐಜಿಪಿ ಅಮಿತ್ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಕೈಗೊಳ್ಳಬೇಕಿರುವ ಭದ್ರತಾ ಕ್ರಮಗಳ ಕುರಿತು ಪ್ರಮುಖವಾಗಿ ಚರ್ಚೆ ನಡೆಯಿತು.</p>.<p>ಕರ್ನಾಟಕ ಮತ್ತು ಕೇರಳ ಗಡಿಯಲ್ಲಿ ಸಕ್ರಿಯವಾಗಿರುವ ನಕ್ಸಲರ ಚಲನವಲನಗಳ ಕುರಿತು ಸುದೀರ್ಘವಾದ ಮಾಹಿತಿ ಹಂಚಿಕೆಗಳು ನಡೆದವು. ಜೊತೆಗೆ, ಅಕ್ರಮ ಹಣ ಮತ್ತು ಮದ್ಯ ಸಾಗಣೆ, ಇವುಗಳನ್ನು ತಡೆಯಲು ಚೆಕ್ಪೋಸ್ಟ್ಗಳ ರಚನೆ, ಕೈಗೊಳ್ಳಬೇಕಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತೂ ಚರ್ಚೆಗಳು ನಡೆದವು.</p>.<p>ಅಂತರರಾಜ್ಯ ಗಡಿಯಲ್ಲಿ ಹೆಚ್ಚುತ್ತಿರುವ ದರೋಡೆ ಪ್ರಕರಣಗಳು, ಪ್ರಮುಖ ಆರೋಪಿಗಳು ಮೊದಲಾದ ಅಪರಾಧ ಚಟುವಟಿಕೆಗಳ ಕುರಿತೂ ಅಧಿಕಾರಿಗಳು ಪರಸ್ಪರ ಮಾಹಿತಿ ಹಂಚಿಕೊಂಡರು ಎಂದು ಮೂಲಗಳು ತಿಳಿಸಿವೆ.</p>.<p>ಈ ಸಭೆಯಲ್ಲಿ ಕೇರಳ ರಾಜ್ಯದ ಕಣ್ಣೂರಿನ ಐಜಿಪಿ ಥಾಮಸ್ ಜೋಸ್, ಎಟಿಎಸ್ನ ಡಿಐಜಿ ಪುಟ್ಟ ವಿಮಲಾದಿತ್ಯ, ವೈನಾಡುವಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣನ್, ಕಣ್ಣೂರಿನ ಹೇಮಲತಾ, ಕಾಸರಗೋಡಿನ ಬಿಜಯ್, ಸ್ಪೆಷಲ್ ಆಪರೇಷನ್ ಗ್ರೂಪ್ನ ಎಸ್.ಪಿ. ತಪೋಸ್ ಭಾಗವಹಿಸಿದ್ದರು.</p>.<p>ಕರ್ನಾಟಕದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ದಕ್ಷಿಣ ಕನ್ನಡದ ರಿಷ್ಯಂತ್, ಮೈಸೂರಿನ ಸೀಮಾಲಾಟ್ಕರ್, ಚಾಮರಾಜನಗರ ಪದ್ಮಿನಿ ಸಾಹು, ಆಂತರಿಕ ಭದ್ರತಾ ವಿಭಾಗದ ಎಸ್.ಪಿ ಪ್ರಕಾಶ್ಗೌಡ, ಮೈಸೂರು ನಗರದ ಡಿಸಿಪಿ ದಿನೇಶ್ಕುಮಾರ್ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>