<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ಮೂಲ ನಿವಾಸಿಗಳ ಸಂಸ್ಕೃತಿ ಜಗತ್ತಿನಲ್ಲೇ ಅತಿವಿಶಿಷ್ಟವಾಗಿದ್ದು ಇದಕ್ಕೆ ಐರಿ ಜನಾಂಗದ ಕೊಡುಗೆ ಅಪಾರ ಎಂದು ಕೊಡಗು ಐರಿ ಸಮಾಜದ ಅಧ್ಯಕ್ಷ ಮೇಲತ್ತಂಡ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಅರಮೇರಿ ಸಮೀಪದ ಐರಿ ಸಮಾಜದ ಜಾಗದಲ್ಲಿ ನಡೆದ 2019-20ನೇ ಸಾಲಿನ ಕೊಡಗು ಐರಿ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡುಅವರು ಮಾತನಾಡಿದರು.</p>.<p>ಜನಾಂಗದ ಏಳಿಗೆಗಾಗಿ ಎಲ್ಲಾ ಐರಿ ಮನೆ ತನಗಳು ಒಗ್ಗಟ್ಟಿನಿಂದ ಶ್ರಮಿಸುವಂತೆ ಕರೆ ನೀಡಿದರು.</p>.<p>ಅರಮೇರಿ ಬಳಿ ಖರೀದಿಸಲಾಗಿರುವ 1.50 ಎಕರೆ ಜಾಗದಲ್ಲಿ ಐರಿ ಸಮಾಜದ ಕಟ್ಟಡ ನಿರ್ಮಾಣ ಮಾಡಬೇಕಾಗಿದ್ದು ಇದಕ್ಕೆ ಸಮಾಜ ಬಾಂಧವರು ನೆರವು ನೀಡುವಂತೆ ಕೋರಿದರು.</p>.<p>ಕೊಡಗು ಐರಿ ಸಮಾಜದ ಉಪಾಧ್ಯಕ್ಷೆ ಬಬ್ಬೀರ ಸರಸ್ವತಿ ಮಾತನಾಡಿ, ಕೊಡವ ಭಾಷಿಕರ ಒಡವೆ, ಆಯುಧಗಳು, ದೇವಸ್ಥಾನಗಳು ಮತ್ತು ಐನ್ ಮನೆಗಳು ಐರಿ ಜನಾಂಗದ ಕೊಡುಗೆಯಾಗಿದ್ದು ಇದನ್ನು ಗುರುತಿಸುವಂತಹ ಕೆಲಸವಾಗಬೇಕಿದೆ, ಈ ನಿಟ್ಟಿನಲ್ಲಿ ಐರಿ ಸಮಾಜ ಮುಂದಿನ ದಿನಗಳಲ್ಲಿ ರಚನಾತ್ಮಕವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು. ಸಮಾಜ ಬಾಂಧವರು ಐರಿ ಸಮಾಜದ ಸದಸ್ಯತ್ವ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.</p>.<p>ಸಭೆಯಲ್ಲಿ ಸಮಾಜ ಬಾಂಧವರ ಏಳಿಗೆ ನಿಟ್ಟಿನಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮೇಲತ್ತಂಡ ರಮೇಶ್ ನೇತೃತ್ವದ ಈಗಿರುವ ಆಡಳಿತ ಮಂಡಳಿಯನ್ನೇ ಮುಂದಿನ ಅವಧಿಗೂ ಮುಂದುವರಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.</p>.<p>ನಿವೃತ್ತ ಡಿವೈಎಸ್ಪಿ ತಟ್ಟಂಡ ಕುಶಾಲಪ್ಪ, ಉರಗ ತಜ್ಷ ಪೊನ್ನೀರ ಸ್ನೇಕ್ ಗಗನ್, ಹಿರಿಯ ಶಿಕ್ಷಕಿ ಮುಲ್ಲೈರೀರ ಹೇಮಾವತಿ ಹಾಗೂ ಪತ್ರಕರ್ತ ಐಮಂಡ ಗೋಪಾಲ್ ಸೋಮಯ್ಯ ಅವರನ್ನು ಕೊಡಗು ಐರಿ ಸಮಾಜದ ನೂತನ ನಿರ್ದೇಶಕರನ್ನಾಗಿಆಯ್ಕೆ ಮಾಡಲಾಯಿತು.</p>.<p>ಸಭೆಯಲ್ಲಿ ಸಾಧಕರಾದ ತಟ್ಟಂಡ ಹರೀಶ್ ತಮ್ಮಯ್ಯ ಹಾಗೂ ಕುಟ್ಟೈರೀರ ಸಾತ್ವಿಕ್ ಉತ್ತಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯದರ್ಶಿ ಕಾಮೆಯಂಡ ಗಣೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ಮೂಲ ನಿವಾಸಿಗಳ ಸಂಸ್ಕೃತಿ ಜಗತ್ತಿನಲ್ಲೇ ಅತಿವಿಶಿಷ್ಟವಾಗಿದ್ದು ಇದಕ್ಕೆ ಐರಿ ಜನಾಂಗದ ಕೊಡುಗೆ ಅಪಾರ ಎಂದು ಕೊಡಗು ಐರಿ ಸಮಾಜದ ಅಧ್ಯಕ್ಷ ಮೇಲತ್ತಂಡ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಅರಮೇರಿ ಸಮೀಪದ ಐರಿ ಸಮಾಜದ ಜಾಗದಲ್ಲಿ ನಡೆದ 2019-20ನೇ ಸಾಲಿನ ಕೊಡಗು ಐರಿ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡುಅವರು ಮಾತನಾಡಿದರು.</p>.<p>ಜನಾಂಗದ ಏಳಿಗೆಗಾಗಿ ಎಲ್ಲಾ ಐರಿ ಮನೆ ತನಗಳು ಒಗ್ಗಟ್ಟಿನಿಂದ ಶ್ರಮಿಸುವಂತೆ ಕರೆ ನೀಡಿದರು.</p>.<p>ಅರಮೇರಿ ಬಳಿ ಖರೀದಿಸಲಾಗಿರುವ 1.50 ಎಕರೆ ಜಾಗದಲ್ಲಿ ಐರಿ ಸಮಾಜದ ಕಟ್ಟಡ ನಿರ್ಮಾಣ ಮಾಡಬೇಕಾಗಿದ್ದು ಇದಕ್ಕೆ ಸಮಾಜ ಬಾಂಧವರು ನೆರವು ನೀಡುವಂತೆ ಕೋರಿದರು.</p>.<p>ಕೊಡಗು ಐರಿ ಸಮಾಜದ ಉಪಾಧ್ಯಕ್ಷೆ ಬಬ್ಬೀರ ಸರಸ್ವತಿ ಮಾತನಾಡಿ, ಕೊಡವ ಭಾಷಿಕರ ಒಡವೆ, ಆಯುಧಗಳು, ದೇವಸ್ಥಾನಗಳು ಮತ್ತು ಐನ್ ಮನೆಗಳು ಐರಿ ಜನಾಂಗದ ಕೊಡುಗೆಯಾಗಿದ್ದು ಇದನ್ನು ಗುರುತಿಸುವಂತಹ ಕೆಲಸವಾಗಬೇಕಿದೆ, ಈ ನಿಟ್ಟಿನಲ್ಲಿ ಐರಿ ಸಮಾಜ ಮುಂದಿನ ದಿನಗಳಲ್ಲಿ ರಚನಾತ್ಮಕವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು. ಸಮಾಜ ಬಾಂಧವರು ಐರಿ ಸಮಾಜದ ಸದಸ್ಯತ್ವ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.</p>.<p>ಸಭೆಯಲ್ಲಿ ಸಮಾಜ ಬಾಂಧವರ ಏಳಿಗೆ ನಿಟ್ಟಿನಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮೇಲತ್ತಂಡ ರಮೇಶ್ ನೇತೃತ್ವದ ಈಗಿರುವ ಆಡಳಿತ ಮಂಡಳಿಯನ್ನೇ ಮುಂದಿನ ಅವಧಿಗೂ ಮುಂದುವರಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.</p>.<p>ನಿವೃತ್ತ ಡಿವೈಎಸ್ಪಿ ತಟ್ಟಂಡ ಕುಶಾಲಪ್ಪ, ಉರಗ ತಜ್ಷ ಪೊನ್ನೀರ ಸ್ನೇಕ್ ಗಗನ್, ಹಿರಿಯ ಶಿಕ್ಷಕಿ ಮುಲ್ಲೈರೀರ ಹೇಮಾವತಿ ಹಾಗೂ ಪತ್ರಕರ್ತ ಐಮಂಡ ಗೋಪಾಲ್ ಸೋಮಯ್ಯ ಅವರನ್ನು ಕೊಡಗು ಐರಿ ಸಮಾಜದ ನೂತನ ನಿರ್ದೇಶಕರನ್ನಾಗಿಆಯ್ಕೆ ಮಾಡಲಾಯಿತು.</p>.<p>ಸಭೆಯಲ್ಲಿ ಸಾಧಕರಾದ ತಟ್ಟಂಡ ಹರೀಶ್ ತಮ್ಮಯ್ಯ ಹಾಗೂ ಕುಟ್ಟೈರೀರ ಸಾತ್ವಿಕ್ ಉತ್ತಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯದರ್ಶಿ ಕಾಮೆಯಂಡ ಗಣೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>