<p><strong>ಮಡಿಕೇರಿ</strong>: ‘ನಮ್ಮ ಆಸ್ತಿ ರಕ್ಷಿಸುವುದು ನಮ್ಮ ಹಕ್ಕು. ಅದನ್ನು ನಮ್ಮ ತಾಯಿ ಮಾಡುತ್ತಿದ್ದಾರೆ. ಅದರಿಂದ ಜನರಿಗೆ ಯಾವುದೇ ತೊಂದರೆಯಾಗುವುದಿಲ್ಲ’ ಎಂದು ಸಂಸದ ಹಾಗೂ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.</p>.<p>ಚಾಮರಾಜನಗರದ ಸಿದ್ದಯ್ಯನಪುರದ ರೈತರು ಅರಮನೆಗೆ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಿರುವ ಕುರಿತು ಇಲ್ಲಿ ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು, ‘ಯಾವತ್ತೂ ಅಂತಹ ಪರಿಸ್ಥಿತಿ ಬರುವುದಿಲ್ಲ’ ಎಂದು ಹೇಳಿದರು.</p>.<p>ಇದರಲ್ಲಿ ಯಾರೂ ರಾಜಕೀಯ ಮಾಡುವಂತಹದ್ದು ಏನೂ ಇಲ್ಲ. ಸಂವಿಧಾನ ರಚನೆ ಸಂದರ್ಭದಲ್ಲಿ ನಮ್ಮ ರಾಜಮನೆತನ ಮಾತ್ರವಲ್ಲ 560 ರಾಜಮನೆತನಗಳ ಆಸ್ತಿ ಪಟ್ಟಿ ಇತ್ತು. ಆ ಪಟ್ಟಿ ಪ್ರಕಾರ ನಮ್ಮ ಆಸ್ತಿ ರಕ್ಷಿಸುವುದು ನಮ್ಮ ಹಕ್ಕು ಎಂದು ಪ್ರತಿಪಾದಿಸಿದರು.</p>.<p>ಈ ಸಮಸ್ಯೆಗೆ ಸರ್ಕಾರದ ತಪ್ಪೇ ಕಾರಣ. ಕಂದಾಯ ಭೂಮಿ ಬಗ್ಗೆ ಸರ್ಕಾರ ಸರಿಯಾಗಿ ಸರ್ವೇ ಮಾಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.</p>.<p>ಇದು ಅರಮನೆಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ತೊಂದರೆಗೆ ಒಳಗಾಗುವರು ಅರಮನೆಗೆ ಬಂದು ಮಾತನಾಡಿ ಎಂದು ಹೇಳಿದರು.</p>.<p>ಜಾತಿ ಜನಗಣತಿ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಈ ವರದಿ 10 ವರ್ಷದ ಹಿಂದೆ ನಡೆದಿದೆ. ಅದನ್ನು ಇಂದಿನ ಜನಸಂಖ್ಯೆಗೆ ಅಂದಾಜು ಮಾಡಿ ಜಾರಿಗೆ ತರುವುದು ಸರಿಯಲ್ಲ. ವೈಜ್ಞಾನಿಕವಾಗಿ ವರದಿ ತಯಾರಿಸಬೇಕಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ನಮ್ಮ ಆಸ್ತಿ ರಕ್ಷಿಸುವುದು ನಮ್ಮ ಹಕ್ಕು. ಅದನ್ನು ನಮ್ಮ ತಾಯಿ ಮಾಡುತ್ತಿದ್ದಾರೆ. ಅದರಿಂದ ಜನರಿಗೆ ಯಾವುದೇ ತೊಂದರೆಯಾಗುವುದಿಲ್ಲ’ ಎಂದು ಸಂಸದ ಹಾಗೂ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.</p>.<p>ಚಾಮರಾಜನಗರದ ಸಿದ್ದಯ್ಯನಪುರದ ರೈತರು ಅರಮನೆಗೆ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಿರುವ ಕುರಿತು ಇಲ್ಲಿ ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು, ‘ಯಾವತ್ತೂ ಅಂತಹ ಪರಿಸ್ಥಿತಿ ಬರುವುದಿಲ್ಲ’ ಎಂದು ಹೇಳಿದರು.</p>.<p>ಇದರಲ್ಲಿ ಯಾರೂ ರಾಜಕೀಯ ಮಾಡುವಂತಹದ್ದು ಏನೂ ಇಲ್ಲ. ಸಂವಿಧಾನ ರಚನೆ ಸಂದರ್ಭದಲ್ಲಿ ನಮ್ಮ ರಾಜಮನೆತನ ಮಾತ್ರವಲ್ಲ 560 ರಾಜಮನೆತನಗಳ ಆಸ್ತಿ ಪಟ್ಟಿ ಇತ್ತು. ಆ ಪಟ್ಟಿ ಪ್ರಕಾರ ನಮ್ಮ ಆಸ್ತಿ ರಕ್ಷಿಸುವುದು ನಮ್ಮ ಹಕ್ಕು ಎಂದು ಪ್ರತಿಪಾದಿಸಿದರು.</p>.<p>ಈ ಸಮಸ್ಯೆಗೆ ಸರ್ಕಾರದ ತಪ್ಪೇ ಕಾರಣ. ಕಂದಾಯ ಭೂಮಿ ಬಗ್ಗೆ ಸರ್ಕಾರ ಸರಿಯಾಗಿ ಸರ್ವೇ ಮಾಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.</p>.<p>ಇದು ಅರಮನೆಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ತೊಂದರೆಗೆ ಒಳಗಾಗುವರು ಅರಮನೆಗೆ ಬಂದು ಮಾತನಾಡಿ ಎಂದು ಹೇಳಿದರು.</p>.<p>ಜಾತಿ ಜನಗಣತಿ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಈ ವರದಿ 10 ವರ್ಷದ ಹಿಂದೆ ನಡೆದಿದೆ. ಅದನ್ನು ಇಂದಿನ ಜನಸಂಖ್ಯೆಗೆ ಅಂದಾಜು ಮಾಡಿ ಜಾರಿಗೆ ತರುವುದು ಸರಿಯಲ್ಲ. ವೈಜ್ಞಾನಿಕವಾಗಿ ವರದಿ ತಯಾರಿಸಬೇಕಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>