<p><strong>ಮಡಿಕೇರಿ/ವಿರಾಜಪೇಟೆ:</strong> ಇಲ್ಲಿನ ವಾಲ್ನೂರು ಸಮೀಪ ಗುರುವಾರ ರಾತ್ರಿ ಕಾರೊಂದು ಬಿಜೆಪಿ ಕಾರ್ಯಕರ್ತರಿಗೆ ಡಿಕ್ಕಿ ಹೊಡೆದು ರಾಮಪ್ಪ ಎಂಬುವವರು ಮೃತಪಟ್ಟ ಘಟನೆ ಕುರಿತ ಬಿಜೆಪಿ ಆಕ್ರೋಶ ಶನಿವಾರವೂ ಮುಂದುವರೆಯಿತು.</p>.<p>ಇಲ್ಲಿನ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ವಿರಾಜಪೇಟೆ, ಪೊನ್ನಂಪೇಟೆ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದರು.</p>.<p>ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ತಳೂರು ಕಿಶೋರ್ಕುಮಾರ್, ‘ಇದು ಆಕಸ್ಮಿಕ ಘಟನೆಯಲ್ಲ. ಉದ್ದೇಶಪೂರ್ವಕ ಅಪಘಾತ’ ಎಂದು ದೂರಿದರು.</p>.<p>ಬಿಜೆಪಿ ಕಾರ್ಯಕರ್ತರ ಮನೋಸ್ಥೈರ್ಯವನ್ನು ಕುಗ್ಗಿಸಲೆಂದೇ ಇಂತಹ ಕೃತ್ಯ ನಡೆಸಲಾಗುತ್ತಿದೆ. ಘಟನೆ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪಕ್ಷದ ವತಿಯಿಂದ ₹ 10 ಲಕ್ಷ ಹಾಗೂ ಗಾಯಗೊಂಡವರಿಗೆ ₹ 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ‘ಬಿಜೆಪಿ ಪರವಾದ ಅಲೆಯನ್ನು ನಾಶಮಾಡಿ ಮತದಾರರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಕಾಂಗ್ರೆಸ್ನದು’ ಎಂದರು. ಒಂದು ಸಮುದಾಯದ ಓಲೈಕೆಗಾಗಿ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ಅನ್ಯಾಯವಾದರೂ ಸುಮ್ಮನಿರುತ್ತದೆ. ಮುಂದೊಂದು ದಿನ ಆ ಪಕ್ಷದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆಯೇ ಇಲ್ಲದ ಸ್ಥಿತಿ ಬರಬಹುದು ಎಂದು ಹೇಳಿದರು.</p>.<p>ಜಿಲ್ಲಾ ವಕ್ತಾರ ಬಿ.ಕೆ.ಅರುಣ್ಕುಮಾರ್ ಮಾತನಾಡಿ, ‘ಯುವತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆಗುವುದಕ್ಕೆ ಮುನ್ನವೇ ಗೃಹಮಂತ್ರಿ ಇದು ಲವ್ಜಿಹಾದ್ ಅಲ್ಲ ಎನ್ನುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಕೂಡಲೇ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ ಮಾತನಾಡಿ, ‘ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ₹ 25 ಲಕ್ಷ ಪರಿಹಾರ ನೀಡಬೇಕು. ಸಂಚಿನಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಬೇಕು’ ಎಂದು ಆಗ್ರಹಿಸಿದರು.</p>.<p>ಈಚೆಗೆ ನಾವು ಪೆರಾಜೆಯಲ್ಲಿ ಚಹಾ ಕುಡಿಯುವಾಗ ಕಾರೊಂದು ಅಂಗಡಿಗೆ ನುಗ್ಗಿದೆ. ಈಗ ನೋಡಿದರೆ ಕಾರೊಂದು ಕಾರ್ಯಕರ್ತರಿಗೆ ಡಿಕ್ಕಿ ಹೊಡೆದಿದೆ. ಎಲ್ಲೆಡೆ ಭಯದ ವಾತಾವರಣ ಮೂಡಿದೆ ಎಂದರು.</p>.<p>ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ‘ಹೆಣ್ಣಿನ ಕೊಲೆ ನಡೆದಾಗ ಸಚಿವರು ಸಾಂತ್ವನ ಹೇಳುವ ಬದಲು ಅದು ಆಕಸ್ಮಿಕ ಎನ್ನುತ್ತಾರೆ. ಸರ್ಕಾರ ಮೊದಲು ಮಹಿಳೆಯರಿಗೆ ಭದ್ರತೆ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p><strong>ಎಲ್ಲೆಡೆ ಪ್ರತಿಭಟನೆ:</strong> ಇದಕ್ಕೂ ಮುನ್ನ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಹಿರಿಯ ಮುಖಂಡ ಕೆ.ಜಿ.ಬೋಪಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮುಖಂಡರಾದ ರಾಬಿನ್ ದೇವಯ್ಯ, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.</p>.<p>ವಿರಾಜಪೇಟೆಯ ಮಿನಿ ವಿಧಾನಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಎಂ.ಸುಜಾ ಕುಶಾಲಪ್ಪ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಸುವಿನ್ ಗಣಪತಿ ಭಾಗವಹಿಸಿದ್ದರು. ತಹಶೀಲ್ದಾರ್ ಎಚ್.ಎನ್.ರಾಮಚಂದ್ರ ಅವರಿಗೆ ಮನವಿ ಸಲ್ಲಿಸಿದರು.</p>.<p>ಪೊನ್ನಂಪೇಟೆ ಬಸ್ ನಿಲ್ದಾಣ, ಕುಶಾಲನಗರದ ನಾಡಕಚೇರಿ ಮುಂದೆ ಹಾಗೂ ಸೋಮವಾರಪೇಟೆಯ ಪುಟ್ಟಪ್ಪ ವೃತ್ತದಲ್ಲೂ ಪ್ರತಿಭಟನೆಗಳು ನಡೆದವು.</p>.<blockquote>ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ರಕ್ಷಣೆ ನೀಡಲು ಒತ್ತಾಯ ಹಲವು ಮುಖಂಡರು ಭಾಗಿ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ/ವಿರಾಜಪೇಟೆ:</strong> ಇಲ್ಲಿನ ವಾಲ್ನೂರು ಸಮೀಪ ಗುರುವಾರ ರಾತ್ರಿ ಕಾರೊಂದು ಬಿಜೆಪಿ ಕಾರ್ಯಕರ್ತರಿಗೆ ಡಿಕ್ಕಿ ಹೊಡೆದು ರಾಮಪ್ಪ ಎಂಬುವವರು ಮೃತಪಟ್ಟ ಘಟನೆ ಕುರಿತ ಬಿಜೆಪಿ ಆಕ್ರೋಶ ಶನಿವಾರವೂ ಮುಂದುವರೆಯಿತು.</p>.<p>ಇಲ್ಲಿನ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ವಿರಾಜಪೇಟೆ, ಪೊನ್ನಂಪೇಟೆ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದರು.</p>.<p>ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ತಳೂರು ಕಿಶೋರ್ಕುಮಾರ್, ‘ಇದು ಆಕಸ್ಮಿಕ ಘಟನೆಯಲ್ಲ. ಉದ್ದೇಶಪೂರ್ವಕ ಅಪಘಾತ’ ಎಂದು ದೂರಿದರು.</p>.<p>ಬಿಜೆಪಿ ಕಾರ್ಯಕರ್ತರ ಮನೋಸ್ಥೈರ್ಯವನ್ನು ಕುಗ್ಗಿಸಲೆಂದೇ ಇಂತಹ ಕೃತ್ಯ ನಡೆಸಲಾಗುತ್ತಿದೆ. ಘಟನೆ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪಕ್ಷದ ವತಿಯಿಂದ ₹ 10 ಲಕ್ಷ ಹಾಗೂ ಗಾಯಗೊಂಡವರಿಗೆ ₹ 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ‘ಬಿಜೆಪಿ ಪರವಾದ ಅಲೆಯನ್ನು ನಾಶಮಾಡಿ ಮತದಾರರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಕಾಂಗ್ರೆಸ್ನದು’ ಎಂದರು. ಒಂದು ಸಮುದಾಯದ ಓಲೈಕೆಗಾಗಿ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ಅನ್ಯಾಯವಾದರೂ ಸುಮ್ಮನಿರುತ್ತದೆ. ಮುಂದೊಂದು ದಿನ ಆ ಪಕ್ಷದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆಯೇ ಇಲ್ಲದ ಸ್ಥಿತಿ ಬರಬಹುದು ಎಂದು ಹೇಳಿದರು.</p>.<p>ಜಿಲ್ಲಾ ವಕ್ತಾರ ಬಿ.ಕೆ.ಅರುಣ್ಕುಮಾರ್ ಮಾತನಾಡಿ, ‘ಯುವತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆಗುವುದಕ್ಕೆ ಮುನ್ನವೇ ಗೃಹಮಂತ್ರಿ ಇದು ಲವ್ಜಿಹಾದ್ ಅಲ್ಲ ಎನ್ನುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಕೂಡಲೇ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ ಮಾತನಾಡಿ, ‘ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ₹ 25 ಲಕ್ಷ ಪರಿಹಾರ ನೀಡಬೇಕು. ಸಂಚಿನಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಬೇಕು’ ಎಂದು ಆಗ್ರಹಿಸಿದರು.</p>.<p>ಈಚೆಗೆ ನಾವು ಪೆರಾಜೆಯಲ್ಲಿ ಚಹಾ ಕುಡಿಯುವಾಗ ಕಾರೊಂದು ಅಂಗಡಿಗೆ ನುಗ್ಗಿದೆ. ಈಗ ನೋಡಿದರೆ ಕಾರೊಂದು ಕಾರ್ಯಕರ್ತರಿಗೆ ಡಿಕ್ಕಿ ಹೊಡೆದಿದೆ. ಎಲ್ಲೆಡೆ ಭಯದ ವಾತಾವರಣ ಮೂಡಿದೆ ಎಂದರು.</p>.<p>ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ‘ಹೆಣ್ಣಿನ ಕೊಲೆ ನಡೆದಾಗ ಸಚಿವರು ಸಾಂತ್ವನ ಹೇಳುವ ಬದಲು ಅದು ಆಕಸ್ಮಿಕ ಎನ್ನುತ್ತಾರೆ. ಸರ್ಕಾರ ಮೊದಲು ಮಹಿಳೆಯರಿಗೆ ಭದ್ರತೆ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p><strong>ಎಲ್ಲೆಡೆ ಪ್ರತಿಭಟನೆ:</strong> ಇದಕ್ಕೂ ಮುನ್ನ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಹಿರಿಯ ಮುಖಂಡ ಕೆ.ಜಿ.ಬೋಪಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮುಖಂಡರಾದ ರಾಬಿನ್ ದೇವಯ್ಯ, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.</p>.<p>ವಿರಾಜಪೇಟೆಯ ಮಿನಿ ವಿಧಾನಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಎಂ.ಸುಜಾ ಕುಶಾಲಪ್ಪ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಸುವಿನ್ ಗಣಪತಿ ಭಾಗವಹಿಸಿದ್ದರು. ತಹಶೀಲ್ದಾರ್ ಎಚ್.ಎನ್.ರಾಮಚಂದ್ರ ಅವರಿಗೆ ಮನವಿ ಸಲ್ಲಿಸಿದರು.</p>.<p>ಪೊನ್ನಂಪೇಟೆ ಬಸ್ ನಿಲ್ದಾಣ, ಕುಶಾಲನಗರದ ನಾಡಕಚೇರಿ ಮುಂದೆ ಹಾಗೂ ಸೋಮವಾರಪೇಟೆಯ ಪುಟ್ಟಪ್ಪ ವೃತ್ತದಲ್ಲೂ ಪ್ರತಿಭಟನೆಗಳು ನಡೆದವು.</p>.<blockquote>ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ರಕ್ಷಣೆ ನೀಡಲು ಒತ್ತಾಯ ಹಲವು ಮುಖಂಡರು ಭಾಗಿ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>