ಸಂಜೆ ಕಾವೇರಿ ಹೊಳೆಯಲ್ಲಿ ದೇವರ ಅವಭೃತ ಸ್ನಾನ ನೆರವೇರಿತು. ದೇವಾಲಯದ ಪ್ರಾಂಗಣದಲ್ಲಿ ನಡೆದ ದೇವರ ನೃತ್ಯಬಲಿಯನ್ನು ಅಧಿಕ ಸಂಖ್ಯೆಯ ಭಕ್ತರು ವೀಕ್ಷಿಸಿದರು. ಅರ್ಚಕ ಚಂದ್ರಶೇಖರ ಐತಾಳ್ ಅವರ ನೇತೃತ್ವದಲ್ಲಿ ಪೂಜಾವಿಧಿವಿಧಾನಗಳು ನೆರವೇರಿದವು. ಬುಧವಾರ ಅಜ್ಜಪ್ಪ ಕೋಲ ಹಾಗೂ ಚಾಮುಂಡಿ ಕೋಲಗಳು ಜರುಗಿದವು. ದೇವಾಲಯದಲ್ಲಿ ಜರುಗಿದ ಶುದ್ಧ ಕಳಶದೊಂದಿಗೆ ಉತ್ಸವ ಸಂಪನ್ನಗೊಂಡಿತು.