<p><strong>ಸೋಮವಾರಪೇಟೆ:</strong> ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿಯಿಂದ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನ ಹಮ್ಮಿಕೊಂಡಿದ್ದು, ಇದರ ಮೊದಲ ಪೂರ್ವಬಾವಿ ಸಭೆ ತಾಲ್ಲೂಕು ಪಂಚಾಯಿತಿ ಇಒ ಕಚೇರಿಯಲ್ಲಿ ಸೋಮವಾರ ನಡೆಯಿತು.</p>.<p>ಸಭೆಯಲ್ಲಿ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ತನಳ್ಳಿ ಮಾತನಾಡಿ, ‘ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಇಲ್ಲಿನ ಎಲ್ಲಾ ನಾಗರಿಕರು ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಂಘ ಸಂಸ್ಥೆಗಳು ಅಭಿಯಾನಕ್ಕೆ ಕೈಜೋಡಿಸಬೇಕು. ಈಗಾಗಲೇ ಬಹುತೇಕ ಖಾಸಗಿ ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಲು ಮುಂದಾಗಿದ್ದಾರೆ. ಇದು ಆಶಾದಾಯಕ ಬೆಳವಣಿಗೆ’ ಎಂದರು.</p>.<p>‘ಕೊಡಗು ದೇಶದಲೇ ಪರಿಶುದ್ಧ ಗಾಳಿ ನೀಡುವ ಪ್ರದೇಶವಾಗಿದ್ದು, ಇದನ್ನು ಕಲುಷಿತಗೊಳಿಸುವುದು ಬೇಡ. ಕೊಡಗಿನಲ್ಲಿ ಹೆಚ್ಚು ಪ್ರವಾಸಿ ತಾಣಗಳಿದ್ದು, ಹಾಗಾಗಿ ಇಲ್ಲಿಗೆ ಪ್ರವಾಸಿಗರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅವರು ತಂದ ತಿಂಡಿ– ತಿನಿಸು ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಎಲ್ಲಂದರಲ್ಲಿ ಬಿಸಾಡಿ ಹೋಗುತ್ತಾರೆ. ಇದರಿಂದ ವಾತಾವರಣ ಕಲುಷಿತಗೊಳ್ಳುತ್ತದೆ. ಹಾಗಾಗಿ ಮೊದಲಿಗೆ ನಮ್ಮ ಮನೆಗಳಿಂದಲೇ ಸ್ವಚ್ಛ ಕೊಡಗು ಎಂಬ ಅಭಿಯಾನ ಪ್ರಾರಂಭವಾಗಬೇಕಿದೆ’ ಎಂದರು.</p>.<p>ಹೋಂ ಸ್ಟೇ ಮತ್ತು ರೆಸಾರ್ಟ್ ಅಸೋಸಿಯೇಷನ್ ಜಿಲ್ಲಾ ಉಪಾಧ್ಯಕ್ಷ ಸುಂದರ್, ತಾಲ್ಲೂಕು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ರೋಹಿತ್, ನಾವು ಪ್ರತಿಸ್ಥಾನ ಸಂಸ್ಥೆಯ ಸುಮನ, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಾದ ಶ್ರೀನಿವಾಸ್, ರೋಟರಿ ಸಂಸ್ಥೆಯ ಅಧ್ಯಕ್ಷೆ ವೀಣಾ ಮನೋಹರ್, ಜೆಸಿಐ ಅಧ್ಯಕ್ಷೆ ಜಗದಾಂಭ ಗುರುಪ್ರಸಾದ್, ಯಿಫಾದಿಂದ ಸಜ್ಜನ್, ಕೆಟಿಡಿಒ ಅಧ್ಯಕ್ಷ ವಸಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿಯಿಂದ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನ ಹಮ್ಮಿಕೊಂಡಿದ್ದು, ಇದರ ಮೊದಲ ಪೂರ್ವಬಾವಿ ಸಭೆ ತಾಲ್ಲೂಕು ಪಂಚಾಯಿತಿ ಇಒ ಕಚೇರಿಯಲ್ಲಿ ಸೋಮವಾರ ನಡೆಯಿತು.</p>.<p>ಸಭೆಯಲ್ಲಿ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ತನಳ್ಳಿ ಮಾತನಾಡಿ, ‘ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಇಲ್ಲಿನ ಎಲ್ಲಾ ನಾಗರಿಕರು ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಂಘ ಸಂಸ್ಥೆಗಳು ಅಭಿಯಾನಕ್ಕೆ ಕೈಜೋಡಿಸಬೇಕು. ಈಗಾಗಲೇ ಬಹುತೇಕ ಖಾಸಗಿ ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಲು ಮುಂದಾಗಿದ್ದಾರೆ. ಇದು ಆಶಾದಾಯಕ ಬೆಳವಣಿಗೆ’ ಎಂದರು.</p>.<p>‘ಕೊಡಗು ದೇಶದಲೇ ಪರಿಶುದ್ಧ ಗಾಳಿ ನೀಡುವ ಪ್ರದೇಶವಾಗಿದ್ದು, ಇದನ್ನು ಕಲುಷಿತಗೊಳಿಸುವುದು ಬೇಡ. ಕೊಡಗಿನಲ್ಲಿ ಹೆಚ್ಚು ಪ್ರವಾಸಿ ತಾಣಗಳಿದ್ದು, ಹಾಗಾಗಿ ಇಲ್ಲಿಗೆ ಪ್ರವಾಸಿಗರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅವರು ತಂದ ತಿಂಡಿ– ತಿನಿಸು ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಎಲ್ಲಂದರಲ್ಲಿ ಬಿಸಾಡಿ ಹೋಗುತ್ತಾರೆ. ಇದರಿಂದ ವಾತಾವರಣ ಕಲುಷಿತಗೊಳ್ಳುತ್ತದೆ. ಹಾಗಾಗಿ ಮೊದಲಿಗೆ ನಮ್ಮ ಮನೆಗಳಿಂದಲೇ ಸ್ವಚ್ಛ ಕೊಡಗು ಎಂಬ ಅಭಿಯಾನ ಪ್ರಾರಂಭವಾಗಬೇಕಿದೆ’ ಎಂದರು.</p>.<p>ಹೋಂ ಸ್ಟೇ ಮತ್ತು ರೆಸಾರ್ಟ್ ಅಸೋಸಿಯೇಷನ್ ಜಿಲ್ಲಾ ಉಪಾಧ್ಯಕ್ಷ ಸುಂದರ್, ತಾಲ್ಲೂಕು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ರೋಹಿತ್, ನಾವು ಪ್ರತಿಸ್ಥಾನ ಸಂಸ್ಥೆಯ ಸುಮನ, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಾದ ಶ್ರೀನಿವಾಸ್, ರೋಟರಿ ಸಂಸ್ಥೆಯ ಅಧ್ಯಕ್ಷೆ ವೀಣಾ ಮನೋಹರ್, ಜೆಸಿಐ ಅಧ್ಯಕ್ಷೆ ಜಗದಾಂಭ ಗುರುಪ್ರಸಾದ್, ಯಿಫಾದಿಂದ ಸಜ್ಜನ್, ಕೆಟಿಡಿಒ ಅಧ್ಯಕ್ಷ ವಸಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>