<p><strong>ಮಡಿಕೇರಿ</strong>: ಇಲ್ಲಿನ ಗಾಂಧಿ ಭವನದಲ್ಲಿ ಮಂಗಳವಾರ ಆರಂಭವಾದ 2 ದಿನಗಳ ಕಾಲದ ಜಿಲ್ಲಾಮಟ್ಟದ ‘ಕಲಾ ಪ್ರತಿಭೋತ್ಸವ’ದಲ್ಲಿ ಬರೋಬರಿ 500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿಯಾಗಿ, ಸಂಭ್ರಮಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೊದಲ ದಿನ ಬಾಲಪ್ರತಿಭೆ ಮತ್ತು ಕಿಶೋರ ಪ್ರತಿಭೆ ವಿಭಾಗದ ಸ್ಪರ್ಧೆಗಳು ನಡೆದವು. ಅವುಗಳಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲೇ ಅತ್ಯಂತ ಹೆಚ್ಚು ಸುಮಾರು 200 ಮಕ್ಕಳು ಭಾಗವಹಿಸಿದ್ದು ವಿಶೇಷ ಎನಿಸಿತ್ತು.</p>.<p>ಇದರೊಂದಿಗೆ ಭರತನಾಟ್ಯ ವಿಭಾಗದಲ್ಲೂ 75ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ,ಕರ್ನಾಟಕ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ವಿಭಾಗಗಳಲ್ಲೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ‘ಕಲಾ ಪ್ರತಿಭೋತ್ಸವ ನಡೆಯುತ್ತಿರುವುದು ಕೇವಲ ಮನರಂಜನೆಗಾಗಿ ಮಾತ್ರ ಅಲ್ಲ. ಬದಲಿಗೆ, ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರ ಕಲಾ ನೈಪುಣ್ಯ ವೃದ್ಧಿಗೊಳಿಸಲು ಈ ಕಲಾ ಪ್ರತಿಭೋತ್ಸವ ನಡೆಸಲಾಗುತ್ತಿದೆ’ ಎಂದರು.</p>.<p>ಕಲೆಯಲ್ಲಿ ಮಕ್ಕಳು ತೊಡಗುವುದರಿಂದ ಮಕ್ಕಳ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಸಮಾಜದ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಮುಂತಾದವುದರ ಬೆಳವಣಿಗೆಗೆ ಇದು ಅತ್ಯಗತ್ಯ ಎಂದು ಪ್ರತಿಪಾದಿಸಿದರು.</p>.<p>‘ಸೋಲು ಅಥವಾ ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮತ್ತು ಧೈರ್ಯದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯ’ ಎಂದೂ ಅವರು ಹೇಳಿದರು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಕುಮಾರ್ ಮಾತನಾಡಿ, ‘ಕೊಡಗು ಜಿಲ್ಲೆಯ ಮಕ್ಕಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಈ ವೇದಿಕೆಯು ಉತ್ತಮ ಅವಕಾಶವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಶಾಲಾ ಶಿಕ್ಷಣ ಇಲಾಖೆಯ ಕೆ.ಆರ್.ಬಿಂದು ಮಾತನಾಡಿ, ‘ಯಾವುದೇ ಪ್ರತಿಭಾ ಸ್ಪರ್ಧೆಗಳಲ್ಲಿಯೂ ಗೆದ್ದರೆ ಪ್ರಶಸ್ತಿ ಹಾಗೂ ಸೋತರೆ ಅನುಭವ ಸಿಗುತ್ತದೆ ಎಂಬ ಮನಸ್ಥಿತಿಯೊಂದಿಗೆ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಬಿ.ಸಿ.ಶಂಕರಯ್ಯ, ಅನಿತಾ, ಮಣಜೂರು ಮಂಜುನಾಥ್ ಭಾಗವಹಿಸಿದ್ದರು.</p>.<p>ನ. 5ರಂದೂ ಗಾಂಧಿ ಭವನದಲ್ಲಿ ಕಲಾ ಪ್ರತಿಭೋತ್ಸವ ಮುಂದುವರಿಯಲಿದೆ. ಯುವ ಪ್ರತಿಭೆ ಮತ್ತು ಸಮೂಹ ಸ್ಪರ್ಧೆ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ.</p>.<div><blockquote>ಗುರಿ ಇಟ್ಟುಕೊಂಡರೆ ಜೀವನದಲ್ಲಿ ಮುಂದೆ ಸಾಗಲು ಸಾಧ್ಯ. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ.. </blockquote><span class="attribution">– ಬಿ.ಜಿ.ಅನಂತಶಯನ, ಜಾನಪದ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ</span></div>.<div><blockquote>ವಿದ್ಯಾರ್ಥಿಗಳು ಪ್ರತಿಭಾ ಉತ್ಸವಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಮಹತ್ವ.</blockquote><span class="attribution">– ಮುನೀರ್ ಅಹಮ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಇಲ್ಲಿನ ಗಾಂಧಿ ಭವನದಲ್ಲಿ ಮಂಗಳವಾರ ಆರಂಭವಾದ 2 ದಿನಗಳ ಕಾಲದ ಜಿಲ್ಲಾಮಟ್ಟದ ‘ಕಲಾ ಪ್ರತಿಭೋತ್ಸವ’ದಲ್ಲಿ ಬರೋಬರಿ 500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿಯಾಗಿ, ಸಂಭ್ರಮಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೊದಲ ದಿನ ಬಾಲಪ್ರತಿಭೆ ಮತ್ತು ಕಿಶೋರ ಪ್ರತಿಭೆ ವಿಭಾಗದ ಸ್ಪರ್ಧೆಗಳು ನಡೆದವು. ಅವುಗಳಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲೇ ಅತ್ಯಂತ ಹೆಚ್ಚು ಸುಮಾರು 200 ಮಕ್ಕಳು ಭಾಗವಹಿಸಿದ್ದು ವಿಶೇಷ ಎನಿಸಿತ್ತು.</p>.<p>ಇದರೊಂದಿಗೆ ಭರತನಾಟ್ಯ ವಿಭಾಗದಲ್ಲೂ 75ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ,ಕರ್ನಾಟಕ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ವಿಭಾಗಗಳಲ್ಲೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ‘ಕಲಾ ಪ್ರತಿಭೋತ್ಸವ ನಡೆಯುತ್ತಿರುವುದು ಕೇವಲ ಮನರಂಜನೆಗಾಗಿ ಮಾತ್ರ ಅಲ್ಲ. ಬದಲಿಗೆ, ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರ ಕಲಾ ನೈಪುಣ್ಯ ವೃದ್ಧಿಗೊಳಿಸಲು ಈ ಕಲಾ ಪ್ರತಿಭೋತ್ಸವ ನಡೆಸಲಾಗುತ್ತಿದೆ’ ಎಂದರು.</p>.<p>ಕಲೆಯಲ್ಲಿ ಮಕ್ಕಳು ತೊಡಗುವುದರಿಂದ ಮಕ್ಕಳ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಸಮಾಜದ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಮುಂತಾದವುದರ ಬೆಳವಣಿಗೆಗೆ ಇದು ಅತ್ಯಗತ್ಯ ಎಂದು ಪ್ರತಿಪಾದಿಸಿದರು.</p>.<p>‘ಸೋಲು ಅಥವಾ ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮತ್ತು ಧೈರ್ಯದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯ’ ಎಂದೂ ಅವರು ಹೇಳಿದರು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಕುಮಾರ್ ಮಾತನಾಡಿ, ‘ಕೊಡಗು ಜಿಲ್ಲೆಯ ಮಕ್ಕಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಈ ವೇದಿಕೆಯು ಉತ್ತಮ ಅವಕಾಶವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಶಾಲಾ ಶಿಕ್ಷಣ ಇಲಾಖೆಯ ಕೆ.ಆರ್.ಬಿಂದು ಮಾತನಾಡಿ, ‘ಯಾವುದೇ ಪ್ರತಿಭಾ ಸ್ಪರ್ಧೆಗಳಲ್ಲಿಯೂ ಗೆದ್ದರೆ ಪ್ರಶಸ್ತಿ ಹಾಗೂ ಸೋತರೆ ಅನುಭವ ಸಿಗುತ್ತದೆ ಎಂಬ ಮನಸ್ಥಿತಿಯೊಂದಿಗೆ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಬಿ.ಸಿ.ಶಂಕರಯ್ಯ, ಅನಿತಾ, ಮಣಜೂರು ಮಂಜುನಾಥ್ ಭಾಗವಹಿಸಿದ್ದರು.</p>.<p>ನ. 5ರಂದೂ ಗಾಂಧಿ ಭವನದಲ್ಲಿ ಕಲಾ ಪ್ರತಿಭೋತ್ಸವ ಮುಂದುವರಿಯಲಿದೆ. ಯುವ ಪ್ರತಿಭೆ ಮತ್ತು ಸಮೂಹ ಸ್ಪರ್ಧೆ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ.</p>.<div><blockquote>ಗುರಿ ಇಟ್ಟುಕೊಂಡರೆ ಜೀವನದಲ್ಲಿ ಮುಂದೆ ಸಾಗಲು ಸಾಧ್ಯ. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ.. </blockquote><span class="attribution">– ಬಿ.ಜಿ.ಅನಂತಶಯನ, ಜಾನಪದ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ</span></div>.<div><blockquote>ವಿದ್ಯಾರ್ಥಿಗಳು ಪ್ರತಿಭಾ ಉತ್ಸವಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಮಹತ್ವ.</blockquote><span class="attribution">– ಮುನೀರ್ ಅಹಮ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>