<p><strong>ಕುಶಾಲನಗರ:</strong> ಪಟ್ಟಣದ ರಥಬೀದಿಯಲ್ಲಿ ಬಟ್ಟೆ ಅಂಗಡಿಗೆ ಸಂಬಂಧಿಸಿದ ಬ್ಯಾನರ್ ಸಂಪೂರ್ಣ ಆಂಗ್ಲಭಾಷೆಯಲ್ಲಿರುವುದನ್ನು ಗಮನಿಸಿದ ಎಚ್.ಶಿವರಾಮೇಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಮತ್ತು ಪ್ರಮುಖರು ಬ್ಯಾನರ್ ಅನ್ನು ಸೋಮವಾರ ತೆರವುಗೊಳಿಸಿದರು.</p>.<p>ಕನ್ನಡ ಕಡ್ಡಾಯವಾಗಿ ಬಳಸಬೇಕಿದೆ ಎಂದು ಸರ್ಕಾರದ ಸೂಚನೆಯಿದ್ದರೂ ಕನ್ನಡ ಭಾಷೆ ಬಳಕೆಗೆ ಕನ್ನಡಿಗರು ಅಸಡ್ಡೆ ತೋರುತ್ತಿರುವ ಬಗ್ಗೆ ಅಂಗಡಿ ಮಾಲೀಕರನ್ನು ಕರವೇ ಪದಾಧಿಕಾರಿಗಳು ತರಾಟೆಗೆ ತೆಗೆದುಕೊಂಡರು.</p>.<p>ಪುರಸಭೆ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ದಂಡ ವಿಧಿಸಬೇಕಿದೆ. ಆಂಗ್ಲಭಾಷೆ ಬಳಕೆ ವಿರುದ್ಧ ಹಲವು ಬಾರಿ ಹೋರಾಟ ನಡೆಸಿದರು ಜನತೆ ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದು ದಿನೇಶ್ ಶೆಟ್ಟಿ ಆಗ್ರಹಿಸಿದರು.</p>.<p>ಕರವೇ ಜಿಲ್ಲಾ ಉಪಾಧ್ಯಕ್ಷ ಪುಟ್ಟಸ್ವಾಮಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಚ್.ನಾಗರಾಜ್, ತಾಲ್ಲೂಕು ಸಂಚಾಲಕ ರಂಗಸ್ವಾಮಿ, ತಾಲ್ಲೂಕು ಸಹ ಕಾರ್ಯದರ್ಶಿ ಕಾರ್ತಿಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಪಟ್ಟಣದ ರಥಬೀದಿಯಲ್ಲಿ ಬಟ್ಟೆ ಅಂಗಡಿಗೆ ಸಂಬಂಧಿಸಿದ ಬ್ಯಾನರ್ ಸಂಪೂರ್ಣ ಆಂಗ್ಲಭಾಷೆಯಲ್ಲಿರುವುದನ್ನು ಗಮನಿಸಿದ ಎಚ್.ಶಿವರಾಮೇಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಮತ್ತು ಪ್ರಮುಖರು ಬ್ಯಾನರ್ ಅನ್ನು ಸೋಮವಾರ ತೆರವುಗೊಳಿಸಿದರು.</p>.<p>ಕನ್ನಡ ಕಡ್ಡಾಯವಾಗಿ ಬಳಸಬೇಕಿದೆ ಎಂದು ಸರ್ಕಾರದ ಸೂಚನೆಯಿದ್ದರೂ ಕನ್ನಡ ಭಾಷೆ ಬಳಕೆಗೆ ಕನ್ನಡಿಗರು ಅಸಡ್ಡೆ ತೋರುತ್ತಿರುವ ಬಗ್ಗೆ ಅಂಗಡಿ ಮಾಲೀಕರನ್ನು ಕರವೇ ಪದಾಧಿಕಾರಿಗಳು ತರಾಟೆಗೆ ತೆಗೆದುಕೊಂಡರು.</p>.<p>ಪುರಸಭೆ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ದಂಡ ವಿಧಿಸಬೇಕಿದೆ. ಆಂಗ್ಲಭಾಷೆ ಬಳಕೆ ವಿರುದ್ಧ ಹಲವು ಬಾರಿ ಹೋರಾಟ ನಡೆಸಿದರು ಜನತೆ ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದು ದಿನೇಶ್ ಶೆಟ್ಟಿ ಆಗ್ರಹಿಸಿದರು.</p>.<p>ಕರವೇ ಜಿಲ್ಲಾ ಉಪಾಧ್ಯಕ್ಷ ಪುಟ್ಟಸ್ವಾಮಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಚ್.ನಾಗರಾಜ್, ತಾಲ್ಲೂಕು ಸಂಚಾಲಕ ರಂಗಸ್ವಾಮಿ, ತಾಲ್ಲೂಕು ಸಹ ಕಾರ್ಯದರ್ಶಿ ಕಾರ್ತಿಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>