<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯಲ್ಲಿ ಸಾಹಿತ್ಯಾಭಿಮಾನಿಗಳು ಹಾಗೂ ಸದಸ್ಯರು ಬದಲಾವಣೆ ಬಯಸಿದ್ದು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಸಾರಥಿಯಾಗಿ ಎಂ.ಪಿ.ಕೇಶವಕಾಮತ್ ಅವರು ಆಯ್ಕೆಯಾದರು.</p>.<p>ಭಾನುವಾರ ನಡೆದ ಚುನಾವಣೆಯಲ್ಲಿ ಕೇಶವ ಕಾಮತ್ ಅವರು ಲೋಕೇಶ್ ಸಾಗರ್ ವಿರುದ್ಧ ಗೆಲುವು ಸಾಧಿಸಿದರು. ಮುಂದಿನ ಅವಧಿಗೆ ಜಿಲ್ಲೆಯಲ್ಲಿ ಕನ್ನಡ ತೇರು ಎಳೆಯಲು ಸಾಹಿತ್ಯಾಭಿಮಾನಿಗಳು ಅವಕಾಶ ನೀಡಿದರು.</p>.<p>ಕೇಶವ ಕಾಮತ್ ಅವರು 134 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಚಲಾವಣೆಯಾದ ಒಟ್ಟು ಮತಗಳಲ್ಲಿ ಕೇಶವ ಕಾಮತ್ ಅವರು 924 ಮತ ಪಡೆದರೆ, ಲೋಕೇಶ್ ಸಾಗರ್ 790 ಮತಗಳನ್ನು ಪಡೆದರು.</p>.<p>ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕೇಶವ ಕಾಮತ್ ಅವರು ಅಧಿಕ ಮತಗಳನ್ನು ಪಡೆದರು. ಸೋಮವಾರಪೇಟೆ ಹಾಗೂ ಕುಶಾಲನಗರದಲ್ಲಿ ಲೋಕೇಶ್ ಸಾಗರಗೆ ಮುನ್ನಡೆ ಸಿಕ್ಕಿತ್ತು. ಅಂತಿಮವಾಗಿ ಕೇಶವ ಕಾಮತ್ ಅವರು ಜಯ ಗಳಿಸಿದರು. 2ನೇ ಅವಧಿಗೆ ಅಧ್ಯಕ್ಷ ಸ್ಥಾನ ಬಯಸಿದ್ದ ಲೋಕೇಶ್ ಪರಾಭವಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯಲ್ಲಿ ಸಾಹಿತ್ಯಾಭಿಮಾನಿಗಳು ಹಾಗೂ ಸದಸ್ಯರು ಬದಲಾವಣೆ ಬಯಸಿದ್ದು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಸಾರಥಿಯಾಗಿ ಎಂ.ಪಿ.ಕೇಶವಕಾಮತ್ ಅವರು ಆಯ್ಕೆಯಾದರು.</p>.<p>ಭಾನುವಾರ ನಡೆದ ಚುನಾವಣೆಯಲ್ಲಿ ಕೇಶವ ಕಾಮತ್ ಅವರು ಲೋಕೇಶ್ ಸಾಗರ್ ವಿರುದ್ಧ ಗೆಲುವು ಸಾಧಿಸಿದರು. ಮುಂದಿನ ಅವಧಿಗೆ ಜಿಲ್ಲೆಯಲ್ಲಿ ಕನ್ನಡ ತೇರು ಎಳೆಯಲು ಸಾಹಿತ್ಯಾಭಿಮಾನಿಗಳು ಅವಕಾಶ ನೀಡಿದರು.</p>.<p>ಕೇಶವ ಕಾಮತ್ ಅವರು 134 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಚಲಾವಣೆಯಾದ ಒಟ್ಟು ಮತಗಳಲ್ಲಿ ಕೇಶವ ಕಾಮತ್ ಅವರು 924 ಮತ ಪಡೆದರೆ, ಲೋಕೇಶ್ ಸಾಗರ್ 790 ಮತಗಳನ್ನು ಪಡೆದರು.</p>.<p>ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕೇಶವ ಕಾಮತ್ ಅವರು ಅಧಿಕ ಮತಗಳನ್ನು ಪಡೆದರು. ಸೋಮವಾರಪೇಟೆ ಹಾಗೂ ಕುಶಾಲನಗರದಲ್ಲಿ ಲೋಕೇಶ್ ಸಾಗರಗೆ ಮುನ್ನಡೆ ಸಿಕ್ಕಿತ್ತು. ಅಂತಿಮವಾಗಿ ಕೇಶವ ಕಾಮತ್ ಅವರು ಜಯ ಗಳಿಸಿದರು. 2ನೇ ಅವಧಿಗೆ ಅಧ್ಯಕ್ಷ ಸ್ಥಾನ ಬಯಸಿದ್ದ ಲೋಕೇಶ್ ಪರಾಭವಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>