ಇದನ್ನು ನೋಡಿದರೆ ಬಹಳ ಆಶ್ಚರ್ಯ ಮತ್ತು ಸೋಜಿಗವೂ ಆಗುತ್ತದೆ. ಒಂದು ಕ್ಷೇತ್ರವನ್ನು ಹುಡುಕಿಕೊಳ್ಳಬೇಕಾದ ಸ್ಥಿತಿ ಸಿದ್ದರಾಮಯ್ಯನವರಿಗೆ ಬಂದಿದೆ ಎಂದರೆ, ಅವರ ಈ ಭಾಗ್ಯಗಳಿಗೆ ಜನ ಯಾವುದೇ ಬೆಲೆ ಕೊಟ್ಟಿಲ್ಲ. ಅವರಿಗೆ ಇಂತಹ ಸ್ಥಿತಿ ಬಂದಿದೆ ಎಂದರೆ ಜನರಿಗೆ ಇವರ ಮೇಲೆ ಯಾವುದೇ ವಿಶ್ವಾಸ ಇಲ್ಲ ಎಂದರ್ಥ ಎಂದು ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.