ಕನ್ನಡ ರಥವನ್ನು ಕನ್ನಡಾಭಿಮಾನಿಗಳು ಮಡಿಕೇರಿ ನಗರದಲ್ಲಿ ಸೋಮವಾರ ಸಂಭ್ರಮದಿಂದ ಸ್ವಾಗತಿಸಿದರು
ರಥದಲ್ಲಿ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಮಾದರಿಗಳು ಗಮನ ಸೆಳೆದವು
ಭುವನೇಶ್ವರಿ ತಾಯಿ ವಿಗ್ರಹಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪುಷ್ಪನಮನ ಸಲ್ಲಿಸಿದರು
ರಮೇಶ್ ಮತ್ತು ತಂಡದಿಂದ ಗಿರಿಜನ ನೃತ್ಯ ಪ್ರದರ್ಶನ ಶಾಲಾ-ಕಾಲೇಜು ವಿದ್ಯಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಭಾಗಿ ಕೊಡೆ ಹಿಡಿದು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಕನ್ನಡಾಭಿಮಾನಿಗಳು
‘ನಾಡು ನುಡಿ ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸಬೇಕು’
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ‘ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ‘ಕರ್ನಾಟಕ ರಾಜ್ಯವೆಂದು ನಾಮಕರಣವಾಗಿದೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಸುವರ್ಣ ಸಂಭ್ರಮ ರಥಯಾತ್ರೆಯನ್ನು ರಾಜ್ಯದ್ಯಾಂತ ಹಮ್ಮಿಕೊಳ್ಳಲಾಗಿದೆ. ಕನ್ನಡ ನಾಡು ನುಡಿ ಕನ್ನಡ ಭಾಷೆಗೆ ಇರುವ ಇತಿಹಾಸವನ್ನು ನೆನಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ’ ಎಂದರು. ಸುವರ್ಣ ಸಂಭ್ರಮ 50ರ ರಥ ಯಾತ್ರೆಯು ಗೋಣಿಕೊಪ್ಪ-ಪೊನ್ನಂಪೇಟೆ-ವಿರಾಜಪೇಟೆ ಮೂಲಕ ಮಡಿಕೇರಿಗೆ ಆಗಮಿಸಿದೆ. ಸೆ.10ರಂದು ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ತೆರಳಲಿದೆ ಎಂದು ಅವರು ಹೇಳಿದರು.