ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತ್ಯ ಕರ್ಕೇರ ಪ್ರಾಕೃತಿಕ ವಿಕೋಪ ಸಂಭವಿಸಿ ಐದು ವರ್ಷಗಳಾದರೂ ಕೂಡ ಕೊಡಗಿನ ಬಹುತೇಕರಿಗೆ ಇನ್ನೂ ಮನೆಗಳು ಸಿಕ್ಕಿಲ್ಲ. ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆಯೂ ಇಲ್ಲ. ಈ ಎರಡು ಸಂಗತಿಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಆದರೆ, ಅಧಿಕಾರಿಗಳು ಅವಕಾಶ ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.