ಜಾತಿ ನಿಂದನೆ ಪ್ರಕರಣದಲ್ಲಿ ಇವರು ನ್ಯಾಯಾಂಗ ಬಂಧನದಲ್ಲಿದ್ದರು. ಖುದ್ದು ನಾಮಪತ್ರ ಸಲ್ಲಿಸಲು ಅವಕಾಶ ಆಗಿರಲಿಲ್ಲ. ತಮ್ಮ ಬೆಂಬಲಿಗರೊಬ್ಬರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಜಾಮೀನು ಸಿಕ್ಕಿ, ಎರಡು ದಿನ ಪ್ರಚಾರ ನಡೆಸಿದ್ದರು. ಈ ಹಿಂದೆ ಅವರು 12 ವರ್ಷ ಪಾಲಿಬೆಟ್ಟ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಅವಧಿಯಲ್ಲಿ ಗ್ರಾಮ ಪಂಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರವೂ ಲಭಿಸಿತ್ತು.