ಈ ಬಾರಿ ‘ಕಪ್ಪು ಜುಟ್ಟಿನ ಗಿಡುಗ’ ಪಕ್ಷಿಯನ್ನು ಕೇಂದ್ರೀಕರಿಸಿ ಹಕ್ಕಿ ಹಬ್ಬ ನಡೆಯುತ್ತಿದೆ. ಜಿಲ್ಲೆಯ ಏಳು ಸ್ಥಳಗಳಲ್ಲಿ ಪಕ್ಷಿಗಳ ವೀಕ್ಷಣೆ ಹಾಗೂ ಅಧ್ಯಯನ ನಡೆಯಲಿದೆ. ರಾಜ್ಯದ ನಾನಾ ಭಾಗದಿಂದ 80 ಮಂದಿ ಪಕ್ಷಿಪ್ರೇಮಿಗಳು ಈ ಹಬ್ಬದಲ್ಲಿ ಪಾಲ್ಗೊಂಡಿದ್ದು, ಪೂರ್ವ ಹಿಮಾಲಯ, ಚೀನಾ ಹಾಗೂ ಆಗ್ನೇಯ ಏಷ್ಯಾದಿಂದ ವಲಸೆ ಬಂದಿರುವ ಕಪ್ಪು ಜುಟ್ಟಿನ ಗಿಡುಗ ವಲಸೆ ಹಕ್ಕಿಯ ಅಧ್ಯಯನ ನಡೆಯಲಿದೆ.
ಪರಿಸರ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮದನ್ ಗೋಪಾಲ್, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹಾಜರಿದ್ದರು.