ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ, ಮುಖಂಡರ ಅಚ್ಚರಿಗೂ ಕಾರಣ ವಾಗಿದೆ. ಪ್ರಾಮಾಣಿಕತೆ ಹಾಗೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಅವರ ಗುಣದಿಂದಾಗಿ ಕಾಂಗ್ರೆಸ್ ಗೆ ಇದು ದೊಡ್ಡ ಹೊಡೆತ ಎಂದೇ ವಿಶ್ಲೇಷಿಸಲಾಗುತ್ತಿದೆ. ಮುಂದಿನ ಅವರ ನಡೆ ಏನು ಎಂಬ ಬಗ್ಗೆಯೂ ತೀವ್ರ ಕುತೂಹಲ ಮೂಡಿದೆ. 2005 ರ ನಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ವಿಧಾನಸಭೆಯ ಖಾತೆಯನ್ನೇ ತೆರೆದಿರಲಿಲ್ಲ. ಬಿಜೆಪಿಯ ಪ್ರಬಲ ಕೋಟೆ ಎನಿಸಿದ ಕೊಡಗಿನಲ್ಲಿ ಅಗತ್ಯ ವಸ್ತುಗಳ ಬೆಲೆಏರಿಕೆ ಹಾಗೂ ದುಬಾರಿ ಎನಿಸಿದ ಇಂಧನ ಬೆಲೆಗಳನ್ನೇ ಪ್ರಧಾನವಾಗಿಟ್ಟುಕೊಂಡು ಖಾತೆ ತೆರೆಯ ಬಹುದು ಎಂಬ ಸ್ಥಳೀಯ ಕಾಂಗ್ರೆಸ್ ನಾಯಕರ ಲೆಕ್ಕಾಚಾರಕ್ಕೂ ಇದು ಪೆಟ್ಟು ನೀಡಿದೆ.