<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆಯವರೆಗೂ ಗಾಳಿ ಮಳೆ ಅಬ್ಬರಿಸಿದೆ. </p><p>ಅಮ್ಮತ್ತಿ ಹೋಬಳಿಯ ಪುಲಿಯೇರಿ ಗ್ರಾಮದ ಶ್ರೀಜಾ ಎಂಬುವವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದಿದೆ.</p><p>ಸೋಮವಾರಪೇಟೆ ಹೋಬಳಿ ಹರದೂರು ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾಗಿದೆ. ಕಟ್ಟಡದ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದ ಶೌಚಾಲಯ ಕಟ್ಟಡವು ಸಹ ಹಾನಿಯಾಗಿದೆ.</p><p>ಶನಿವಾರಸಂತೆ ಹೋಬಳಿ ಮಾದೆಗೋಡು ಗ್ರಾಮದ ನಿವಾಸಿ ಎಂ ಎನ್ ದಿವಾಕರ ಅವರ ಮನೆ ಮಳೆಯಿಂದ ಕುಸಿದಿದೆ.</p><p>ಸುಂಟಿಕೊಪ್ಪ ಹೋಬಳಿ ಉಳುಗುಲಿ ಗ್ರಾಮದ ಎನ್ ಆರ್ ನಂಜಪ್ಪ ಅವರ ಮನೆ ಮೇಲೆ ಮರ ಬಿದ್ದು, ಹಾನಿಯಾಗಿದೆ.</p><p>ನಾಪೋಕ್ಲು ಹೋಬಳಿ ಎಮ್ಮೆಮಾಡು ಗ್ರಾಮದ ಕರೀಂ ಅವರ ಮನೆಯ ಮುಂಭಾಗದ ಗೋಡೆ ಕುಸಿದಿದೆ. </p><p>ಹರಿಹರ-ಬಲ್ಯಮಂಡೂರು ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.</p><p>ಹಲವೆಡೆ ಮಣ್ಣು ಕುಸಿತದಂತಹ ಘಟನಗಳು ಸಂಭವಿಸಿವೆ. ಗುಡ್ಡದ ಮೇಲೆ, ಗುಡ್ಡದ ಕೆಳಗೆ ವಾಸಿಸುತ್ತಿರುವವರಲ್ಲಿ ಸುರಿಯುತ್ತಿರುವ ಮಳೆ ಆತಂಕ ತರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆಯವರೆಗೂ ಗಾಳಿ ಮಳೆ ಅಬ್ಬರಿಸಿದೆ. </p><p>ಅಮ್ಮತ್ತಿ ಹೋಬಳಿಯ ಪುಲಿಯೇರಿ ಗ್ರಾಮದ ಶ್ರೀಜಾ ಎಂಬುವವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದಿದೆ.</p><p>ಸೋಮವಾರಪೇಟೆ ಹೋಬಳಿ ಹರದೂರು ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾಗಿದೆ. ಕಟ್ಟಡದ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದ ಶೌಚಾಲಯ ಕಟ್ಟಡವು ಸಹ ಹಾನಿಯಾಗಿದೆ.</p><p>ಶನಿವಾರಸಂತೆ ಹೋಬಳಿ ಮಾದೆಗೋಡು ಗ್ರಾಮದ ನಿವಾಸಿ ಎಂ ಎನ್ ದಿವಾಕರ ಅವರ ಮನೆ ಮಳೆಯಿಂದ ಕುಸಿದಿದೆ.</p><p>ಸುಂಟಿಕೊಪ್ಪ ಹೋಬಳಿ ಉಳುಗುಲಿ ಗ್ರಾಮದ ಎನ್ ಆರ್ ನಂಜಪ್ಪ ಅವರ ಮನೆ ಮೇಲೆ ಮರ ಬಿದ್ದು, ಹಾನಿಯಾಗಿದೆ.</p><p>ನಾಪೋಕ್ಲು ಹೋಬಳಿ ಎಮ್ಮೆಮಾಡು ಗ್ರಾಮದ ಕರೀಂ ಅವರ ಮನೆಯ ಮುಂಭಾಗದ ಗೋಡೆ ಕುಸಿದಿದೆ. </p><p>ಹರಿಹರ-ಬಲ್ಯಮಂಡೂರು ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.</p><p>ಹಲವೆಡೆ ಮಣ್ಣು ಕುಸಿತದಂತಹ ಘಟನಗಳು ಸಂಭವಿಸಿವೆ. ಗುಡ್ಡದ ಮೇಲೆ, ಗುಡ್ಡದ ಕೆಳಗೆ ವಾಸಿಸುತ್ತಿರುವವರಲ್ಲಿ ಸುರಿಯುತ್ತಿರುವ ಮಳೆ ಆತಂಕ ತರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>