<p><strong>ಮಡಿಕೇರಿ: </strong>ಕೊಡಗು ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಎಂ.ಪಿ.ಸುನಿಲ್ ಸುಬ್ರಮಣಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಅವರ ಸಹೋದರ ಸುಜಾ ಕುಶಾಲಪ್ಪಗೆ ಟಿಕೆಟ್ ಸಿಕ್ಕಿದೆ. ಶುಕ್ರವಾರ ರಾತ್ರಿ ಬಿಜೆಪಿ ಅಧಿಕೃತವಾಗಿ ಪಟ್ಟಿಯನ್ನು ಪ್ರಕಟಿಸಿದೆ.ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಅಣ್ಣ ಸುಜಾ.<br /><br />ಈ ಬಾರಿಯೂ ಬಿಜೆಪಿ ಕೊಡಗಿನಲ್ಲಿ ಕುಟುಂಬ ರಾಜಕಾರಣದ ಮೊರೆಹೋಗಿದೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಅವಧಿಯಲ್ಲಿ ಸುಜಾ ಹೆಸರು ಘೋಷಣೆಯಾಗಿದ್ದರೂ ಕಾನೂನು ತೊಡಕಿನಿಂದ ಸ್ಪರ್ಧೆ ಸಾಧ್ಯವಾಗಿರಲಿಲ್ಲ. ಅವರ ತಮ್ಮ ಸುನಿಲ್ಗೆ ಟಿಕೆಟ್ ಲಭಿಸಿತ್ತು.<br />ಸುಜಾ ಅವರು ಬಿಜೆಪಿಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.<br /><br />ಮುಖಂಡರಾದ ಬಿ.ಬಿ.ಭಾರತೀಶ್ ಹಾಗೂ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅವರೂ ತೆರೆಮರೆಯಲ್ಲಿ ಟಿಕೆಟ್ಗೆ ಲಾಬಿ ನಡೆಸಿದ್ದರು. ಆದರೆ, ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿಲ್ಲ. ಕಾಂಗ್ರೆಸ್ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಜೆಡಿಎಸ್ ಇನ್ನೂ ಲೆಕ್ಕಾಚಾರದಲ್ಲಿ ಇದೆ. </p>.<p><strong>ಇದನ್ನೂ ಓದಿ... <a href="https://www.prajavani.net/india-news/karnataka-legislative-council-elections-2021-bjp-releases-20-candidates-list-885267.html" target="_blank">ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕೊಡಗು ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಎಂ.ಪಿ.ಸುನಿಲ್ ಸುಬ್ರಮಣಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಅವರ ಸಹೋದರ ಸುಜಾ ಕುಶಾಲಪ್ಪಗೆ ಟಿಕೆಟ್ ಸಿಕ್ಕಿದೆ. ಶುಕ್ರವಾರ ರಾತ್ರಿ ಬಿಜೆಪಿ ಅಧಿಕೃತವಾಗಿ ಪಟ್ಟಿಯನ್ನು ಪ್ರಕಟಿಸಿದೆ.ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಅಣ್ಣ ಸುಜಾ.<br /><br />ಈ ಬಾರಿಯೂ ಬಿಜೆಪಿ ಕೊಡಗಿನಲ್ಲಿ ಕುಟುಂಬ ರಾಜಕಾರಣದ ಮೊರೆಹೋಗಿದೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಅವಧಿಯಲ್ಲಿ ಸುಜಾ ಹೆಸರು ಘೋಷಣೆಯಾಗಿದ್ದರೂ ಕಾನೂನು ತೊಡಕಿನಿಂದ ಸ್ಪರ್ಧೆ ಸಾಧ್ಯವಾಗಿರಲಿಲ್ಲ. ಅವರ ತಮ್ಮ ಸುನಿಲ್ಗೆ ಟಿಕೆಟ್ ಲಭಿಸಿತ್ತು.<br />ಸುಜಾ ಅವರು ಬಿಜೆಪಿಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.<br /><br />ಮುಖಂಡರಾದ ಬಿ.ಬಿ.ಭಾರತೀಶ್ ಹಾಗೂ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅವರೂ ತೆರೆಮರೆಯಲ್ಲಿ ಟಿಕೆಟ್ಗೆ ಲಾಬಿ ನಡೆಸಿದ್ದರು. ಆದರೆ, ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿಲ್ಲ. ಕಾಂಗ್ರೆಸ್ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಜೆಡಿಎಸ್ ಇನ್ನೂ ಲೆಕ್ಕಾಚಾರದಲ್ಲಿ ಇದೆ. </p>.<p><strong>ಇದನ್ನೂ ಓದಿ... <a href="https://www.prajavani.net/india-news/karnataka-legislative-council-elections-2021-bjp-releases-20-candidates-list-885267.html" target="_blank">ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>