ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ. ಅ.17 ರಂದು ಸಂಜೆ 7.21 ಕ್ಕೆ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ.
ಮಳೆಯಿಂದ ಹಾಳಾಗಿರುವ ಭಾಗಮಂಡಲ-ಮಡಿಕೇರಿ, ಭಾಗಮಂಡಲ - ಕರಿಕೆ, ಭಾಗಮಂಡಲ ನಾಪೋಕ್ಲು ರಸ್ತೆಗಳ ದುರಸ್ತಿ ಕಾರ್ಯ ನಡೆಸಬೇಕು. ರಸ್ತೆಗೆ ವಾಲಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಬಿ.ಸಿ.ನಾಗೇಶ ಅಧಿಕಾರಿಗಳಿಗೆ ಸೂಚಿಸಿದರು.