ಇದರಿಂದ ಬಿಕೊ ಎನ್ನುತ್ತಿದ್ದ ಪ್ರವಾಸಿ ಕೇಂದ್ರಗಳಿಗೆ ಜೀವಕಳೆ ಬಂದಿದ್ದು, ಪ್ರವಾಸೋದ್ಯಮ ಗರಿಗೆದರಿದೆ. ಭಾನುವಾರ ನಿಸರ್ಗಧಾಮಕ್ಕೆ 600ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭೇಟಿ ನೀಡಿದ್ದರು. ಕಳೆದ ವಾರಕ್ಕೆ ಹೋಲಿಸಿದರೆ ಈ ದಿನ ಜಿಲ್ಲೆಗೆ ಪ್ರವಾಸಿಗರ ಸಂಖ್ಯೆಯಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದೆ. ನಂಜರಾಯಪಟ್ಟಣ ಸಮೀಪದ ದುಬಾರೆ ಸಾಕಾನೆ ಶಿಬಿರ ಹಾಗೂ ಬೈಲುಕುಪ್ಪೆಯ ಟೆಬೆಟನ್ನ ಗೋಲ್ಡನ್ ಟೆಂಪಲ್ಗೂ ಕೂಡ ಪ್ರವಾಸಿಗರ ಪ್ರವೇಶ ಇನ್ನೂ ಆರಂಭಗೊಂಡಿಲ್ಲ.