<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. </p>.<p>ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತರು ಪಿಂಡಪ್ರದಾನ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನಡೆಸಿದ್ದಾರೆ.</p>.<p>ಭಕ್ತಜನರು ತಮ್ಮ ವಾಹನಗಳನ್ನು ಭಾಗಮಂಡಲದಲ್ಲಿ ನಿಲ್ಲಿಸಿ ಪಾದಯಾತ್ರೆಗೆ ಅಣಿಯಾಗುತ್ತಿದ್ದಾರೆ. </p> <p>ತೀರ್ಥೋದ್ಭವ ಆಗಲಿರುವ ಬ್ರಹ್ಮಕುಂಡಿಕೆಯನ್ನು ವಿವಿಧ ಬಗೆಯ ಹೂಗಳಿಂದ ಸಿಂಗರಿಸಲಾಗಿದೆ.</p><p>ಪುಷ್ಕರಣಿ ಸುತ್ತಲೂ ಭಕ್ತರು ಈಗಾಗಲೇ ಸೇರಿದ್ದಾರೆ. ಬಂದ ಯಾತ್ರಿಕರಿಗೆ ಕೊಡಗು ಏಕೀಕರಣ ರಂಗವು ಉಪಾಹಾರದ ವ್ಯವಸ್ಥೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದೆ.</p>.<p>ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಶುಕ್ರವಾರ ಮಧ್ಯಾಹ್ನ 1.44 ಕ್ಕೆ ಕಾವೇರಿ ತೀರ್ಥೋದ್ಭವ ನಡೆಯಲಿದೆ. </p>.<h2>ತಲಕಾವೇರಿಗೆ ಡಿಸಿಎಂ ಭೇಟಿ ರದ್ದು</h2><p>ಮಡಿಕೇರಿ: ತಲಕಾವೇರಿಯ ಪವಿತ್ರ ಕಾವೇರಿ ತೀರ್ಥೋದ್ಭವದಲ್ಲಿ ಭಾಗಿಯಾಗಬೇಕಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ.</p><p>ಹವಾಮಾನ ವೈಪರೀತ್ಯ ಕಾರಣದಿಂದ ಕೊಡಗಿನ ಪ್ರವಾಸ ರದ್ದಾಗಿದೆ ಎಂದು ಪ್ರಕಟಣೆ ತಿಳಿಸಿದೆ</p>.<p><strong>ತಲಕಾವೇರಿ: ಮೊಳಗಿದ ಘೋಷಣೆಗಳು</strong></p><p>ಮಡಿಕೇರಿ: ಕಾವೇರಿ ತೀರ್ಥೋದ್ಭವದ ಕ್ಷಣ ಸಮೀಪಿಸುತ್ತಿದ್ದಂತೆ ಮಹಿಳೆಯರು ಸಾಂಪ್ರದಾಯಿಕ ದಿರಿಸಿನಲ್ಲಿ ದೀಪವಿಡಿದು ಬ್ರಹ್ಮಕುಂಡಿಕೆ ಸಮೀಪದ ಕಲ್ಯಾಣಿಯ ಮೆಟ್ಟಿಲುಗಳ ಮೇಲೆ ಕುಳಿತು ಕಾವೇರಿ ಮಾತೆಯ ಹಾಡುಗಳನ್ನು ಹಾಡಿದರು. ಜಯ್ ಜಯ್ ಮಾತೆ ಕಾವೇರಿ ಮಾತೆ ಘೋಷಣೆಗಳನ್ನು ಮೊಳಗಿಸಿದರು.</p><p>ಪುರುಷರು ಸಾಂಪ್ರದಾಯಿಕ ದುಡಿಕೊಟ್ ಪಾಟ್ ಹಾಡಿದರು.</p><p>ಅರ್ಚಕ ವೃಂದ ಬ್ರಹ್ಮಕುಂಡಿಕೆಗೆ ಪುಷ್ಪಾರ್ಚನೆ ನೆರವೇರಿಸುತ್ತಿದ್ದು, ತಲಕಾವೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಮಧ್ಯಾಹ್ನ 1.44 ಕ್ಕೆ ತೀರ್ಥೋದ್ಭವ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. </p>.<p>ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತರು ಪಿಂಡಪ್ರದಾನ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನಡೆಸಿದ್ದಾರೆ.</p>.<p>ಭಕ್ತಜನರು ತಮ್ಮ ವಾಹನಗಳನ್ನು ಭಾಗಮಂಡಲದಲ್ಲಿ ನಿಲ್ಲಿಸಿ ಪಾದಯಾತ್ರೆಗೆ ಅಣಿಯಾಗುತ್ತಿದ್ದಾರೆ. </p> <p>ತೀರ್ಥೋದ್ಭವ ಆಗಲಿರುವ ಬ್ರಹ್ಮಕುಂಡಿಕೆಯನ್ನು ವಿವಿಧ ಬಗೆಯ ಹೂಗಳಿಂದ ಸಿಂಗರಿಸಲಾಗಿದೆ.</p><p>ಪುಷ್ಕರಣಿ ಸುತ್ತಲೂ ಭಕ್ತರು ಈಗಾಗಲೇ ಸೇರಿದ್ದಾರೆ. ಬಂದ ಯಾತ್ರಿಕರಿಗೆ ಕೊಡಗು ಏಕೀಕರಣ ರಂಗವು ಉಪಾಹಾರದ ವ್ಯವಸ್ಥೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದೆ.</p>.<p>ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಶುಕ್ರವಾರ ಮಧ್ಯಾಹ್ನ 1.44 ಕ್ಕೆ ಕಾವೇರಿ ತೀರ್ಥೋದ್ಭವ ನಡೆಯಲಿದೆ. </p>.<h2>ತಲಕಾವೇರಿಗೆ ಡಿಸಿಎಂ ಭೇಟಿ ರದ್ದು</h2><p>ಮಡಿಕೇರಿ: ತಲಕಾವೇರಿಯ ಪವಿತ್ರ ಕಾವೇರಿ ತೀರ್ಥೋದ್ಭವದಲ್ಲಿ ಭಾಗಿಯಾಗಬೇಕಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ.</p><p>ಹವಾಮಾನ ವೈಪರೀತ್ಯ ಕಾರಣದಿಂದ ಕೊಡಗಿನ ಪ್ರವಾಸ ರದ್ದಾಗಿದೆ ಎಂದು ಪ್ರಕಟಣೆ ತಿಳಿಸಿದೆ</p>.<p><strong>ತಲಕಾವೇರಿ: ಮೊಳಗಿದ ಘೋಷಣೆಗಳು</strong></p><p>ಮಡಿಕೇರಿ: ಕಾವೇರಿ ತೀರ್ಥೋದ್ಭವದ ಕ್ಷಣ ಸಮೀಪಿಸುತ್ತಿದ್ದಂತೆ ಮಹಿಳೆಯರು ಸಾಂಪ್ರದಾಯಿಕ ದಿರಿಸಿನಲ್ಲಿ ದೀಪವಿಡಿದು ಬ್ರಹ್ಮಕುಂಡಿಕೆ ಸಮೀಪದ ಕಲ್ಯಾಣಿಯ ಮೆಟ್ಟಿಲುಗಳ ಮೇಲೆ ಕುಳಿತು ಕಾವೇರಿ ಮಾತೆಯ ಹಾಡುಗಳನ್ನು ಹಾಡಿದರು. ಜಯ್ ಜಯ್ ಮಾತೆ ಕಾವೇರಿ ಮಾತೆ ಘೋಷಣೆಗಳನ್ನು ಮೊಳಗಿಸಿದರು.</p><p>ಪುರುಷರು ಸಾಂಪ್ರದಾಯಿಕ ದುಡಿಕೊಟ್ ಪಾಟ್ ಹಾಡಿದರು.</p><p>ಅರ್ಚಕ ವೃಂದ ಬ್ರಹ್ಮಕುಂಡಿಕೆಗೆ ಪುಷ್ಪಾರ್ಚನೆ ನೆರವೇರಿಸುತ್ತಿದ್ದು, ತಲಕಾವೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಮಧ್ಯಾಹ್ನ 1.44 ಕ್ಕೆ ತೀರ್ಥೋದ್ಭವ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>