<p><strong>ಮಡಿಕೇರಿ: </strong>ಹಸಿರು ಹೊದ್ದ ಬ್ರಹ್ಮಗಿರಿಯ ತಲಕಾವೇರಿಯಲ್ಲಿ ಸೋಮವಾರ ಸೂರ್ಯ ಅಸ್ತಮಿಸುತ್ತಿದ್ದಂತೆ ಸಂಭ್ರಮ ಮೇಳೈಸಿತು. ಭಕ್ತರ ನಂಬುಗೆಯಂತೆ ಇಲ್ಲಿನ ಬ್ರಹ್ಮಕುಂಡಿಕೆಯಲ್ಲಿ ಮೈಕೊರೆಯುವ ಚಳಿಯ ನಡುವೆ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಹರಿದಳು.</p>.<p>ದಟ್ಟವಾದ ಮಂಜಿನ ನಡುವೆ ಭಕ್ತರ ನೂಕುನುಗ್ಗಲಿನ ನಡುವೆ ಸಂಜೆ 7.21ರಲ್ಲಿ ವಿವಿಧ ಪೂಜಾವಿಧಿಗಳನ್ನು ನೆರವೇರಿಸಿದ ಬಳಿಕ 7.22 ಕ್ಕೆ ತೀರ್ಥೋದ್ಭವವಾಯಿತು ಎಂದು ಅರ್ಚಕ ವೃಂದ ಘೋಷಿಸಿ ತೀರ್ಥವನ್ನು ಪ್ರೋಕ್ಷಿಸಿದರು. ಕಳೆದೆರಡು ವರ್ಷಗಳಿಂದ ಇದ್ದ ಕೋವಿಡ್ ನಿರ್ಬಂಧಗಳು ಈ ಬಾರಿ ಇಲ್ಲದ್ದರಿಂದ ಭಕ್ತಸಾಗರವೇ ಹರಿದು ಬಂದಿತ್ತು.</p>.<p>ತೀರ್ಥೋದ್ಭವದ ಬಳಿಕ ಬಿಂದಿಗೆ ಹಾಗೂ ಬಾಟಲಿಗಳಲ್ಲಿ ತೀರ್ಥವನ್ನು ತುಂಬಿಸಿಕೊಳ್ಳಲು ಸಾವಿರಾರು ಭಕ್ತರು ಮುಗಿಬಿದ್ದರು. ಇಳಿ ಹೊತ್ತಿನಲ್ಲಿ, ಮೈಕೊರೆಯುವ ಚಳಿಯ ಮಧ್ಯೆಯೂ ಬ್ರಹ್ಮಕುಂಡಿಕೆಯ ಸಮೀಪದ ಪುಷ್ಕರಿಣಿಯಲ್ಲಿ ನೂರಾರು ಮಂದಿ ಮಿಂದು ಭಕ್ತಿಭಾವ ಮೆರೆದರು.</p>.<p>ತೀರ್ಥೋದ್ಭವದ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳಲು ತಮಿಳುನಾಡು, ಕೇರಳಗಳಿಂದಲೂ ಅಪಾರ ಸಂಖ್ಯೆಯ ಜನರು ಇಲ್ಲಿಗೆ ಬಂದಿದ್ದರು. ಭಾಗಮಂಡಲದಿಂದ ತಲಕಾವೇರಿಯವರೆಗೆ ಕೊಡವರ ಸಾಂಪ್ರದಾಯಿಕ ಉಡುಗೆಯಲ್ಲಿ ನೂರಾರು ಮಂದಿ ಪಾದಯಾತ್ರೆಯಲ್ಲಿ ಬಂದಿದ್ದು ವಿಶೇಷವಾಗಿತ್ತು. ತಲಕಾವೇರಿಯಾದ್ಯಂತ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು.</p>.<p>ಸಮೀಪದ ಭಾಗಮಂಡಲದ ಕಾವೇರಿ, ಕನ್ನಿಕೆ, ಸುಜ್ಯೋತಿ ನದಿಗಳು ಸೇರುವ ತ್ರಿವೇಣಿ ಸಂಗಮದಲ್ಲೂ ಭಕ್ತರು ಪುಣ್ಯಸ್ನಾನ ಮಾಡಿದರು. ಪಿಂಡ ಪ್ರದಾನ ಮತ್ತಿತರ ಧಾರ್ಮಿಕ ಕಾರ್ಯ ನೆರವೇರಿಸಿದರು. ತಡರಾತ್ರಿಯವರೆಗೂ ಭಾಗಮಂಡಲ, ತಲಕಾವೇರಿಯಲ್ಲಿ ಜನಜಂಗುಳಿ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಹಸಿರು ಹೊದ್ದ ಬ್ರಹ್ಮಗಿರಿಯ ತಲಕಾವೇರಿಯಲ್ಲಿ ಸೋಮವಾರ ಸೂರ್ಯ ಅಸ್ತಮಿಸುತ್ತಿದ್ದಂತೆ ಸಂಭ್ರಮ ಮೇಳೈಸಿತು. ಭಕ್ತರ ನಂಬುಗೆಯಂತೆ ಇಲ್ಲಿನ ಬ್ರಹ್ಮಕುಂಡಿಕೆಯಲ್ಲಿ ಮೈಕೊರೆಯುವ ಚಳಿಯ ನಡುವೆ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಹರಿದಳು.</p>.<p>ದಟ್ಟವಾದ ಮಂಜಿನ ನಡುವೆ ಭಕ್ತರ ನೂಕುನುಗ್ಗಲಿನ ನಡುವೆ ಸಂಜೆ 7.21ರಲ್ಲಿ ವಿವಿಧ ಪೂಜಾವಿಧಿಗಳನ್ನು ನೆರವೇರಿಸಿದ ಬಳಿಕ 7.22 ಕ್ಕೆ ತೀರ್ಥೋದ್ಭವವಾಯಿತು ಎಂದು ಅರ್ಚಕ ವೃಂದ ಘೋಷಿಸಿ ತೀರ್ಥವನ್ನು ಪ್ರೋಕ್ಷಿಸಿದರು. ಕಳೆದೆರಡು ವರ್ಷಗಳಿಂದ ಇದ್ದ ಕೋವಿಡ್ ನಿರ್ಬಂಧಗಳು ಈ ಬಾರಿ ಇಲ್ಲದ್ದರಿಂದ ಭಕ್ತಸಾಗರವೇ ಹರಿದು ಬಂದಿತ್ತು.</p>.<p>ತೀರ್ಥೋದ್ಭವದ ಬಳಿಕ ಬಿಂದಿಗೆ ಹಾಗೂ ಬಾಟಲಿಗಳಲ್ಲಿ ತೀರ್ಥವನ್ನು ತುಂಬಿಸಿಕೊಳ್ಳಲು ಸಾವಿರಾರು ಭಕ್ತರು ಮುಗಿಬಿದ್ದರು. ಇಳಿ ಹೊತ್ತಿನಲ್ಲಿ, ಮೈಕೊರೆಯುವ ಚಳಿಯ ಮಧ್ಯೆಯೂ ಬ್ರಹ್ಮಕುಂಡಿಕೆಯ ಸಮೀಪದ ಪುಷ್ಕರಿಣಿಯಲ್ಲಿ ನೂರಾರು ಮಂದಿ ಮಿಂದು ಭಕ್ತಿಭಾವ ಮೆರೆದರು.</p>.<p>ತೀರ್ಥೋದ್ಭವದ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳಲು ತಮಿಳುನಾಡು, ಕೇರಳಗಳಿಂದಲೂ ಅಪಾರ ಸಂಖ್ಯೆಯ ಜನರು ಇಲ್ಲಿಗೆ ಬಂದಿದ್ದರು. ಭಾಗಮಂಡಲದಿಂದ ತಲಕಾವೇರಿಯವರೆಗೆ ಕೊಡವರ ಸಾಂಪ್ರದಾಯಿಕ ಉಡುಗೆಯಲ್ಲಿ ನೂರಾರು ಮಂದಿ ಪಾದಯಾತ್ರೆಯಲ್ಲಿ ಬಂದಿದ್ದು ವಿಶೇಷವಾಗಿತ್ತು. ತಲಕಾವೇರಿಯಾದ್ಯಂತ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು.</p>.<p>ಸಮೀಪದ ಭಾಗಮಂಡಲದ ಕಾವೇರಿ, ಕನ್ನಿಕೆ, ಸುಜ್ಯೋತಿ ನದಿಗಳು ಸೇರುವ ತ್ರಿವೇಣಿ ಸಂಗಮದಲ್ಲೂ ಭಕ್ತರು ಪುಣ್ಯಸ್ನಾನ ಮಾಡಿದರು. ಪಿಂಡ ಪ್ರದಾನ ಮತ್ತಿತರ ಧಾರ್ಮಿಕ ಕಾರ್ಯ ನೆರವೇರಿಸಿದರು. ತಡರಾತ್ರಿಯವರೆಗೂ ಭಾಗಮಂಡಲ, ತಲಕಾವೇರಿಯಲ್ಲಿ ಜನಜಂಗುಳಿ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>