‘ಕೊರೊನಾ ಸೋಂಕಿತರ ಪ್ರಮಾಣ ಕೇರಳದಲ್ಲಿ ಕರ್ನಾಟಕಕ್ಕಿಂತ ಹೆಚ್ಚಿರುವುದರಿಂದ ಸದ್ಯ ನಿಯಮ ಸಡಿಲಿಕೆ ಸಾಧ್ಯವಿಲ್ಲ. ಕೇರಳ ರಾಜ್ಯದವರು ನ್ಯಾಯಾಲಯಕ್ಕೂ ಹೋಗಿದ್ದು, ನ್ಯಾಯಾಲಯ ಸಹ ಅದನ್ನು ಮಾನ್ಯ ಮಾಡಿಲ್ಲ. ಸದ್ಯ ಕೇರಳದಿಂದ ರಾಜ್ಯಕ್ಕೆ ಪ್ರವೇಶಕ್ಕೆ ವಿಧಿಸಿರುವ ನಿರ್ಬಂಧ ಎಲ್ಲರೂ ಪಾಲಿಸಬೇಕು. ಎರಡು ಲಸಿಕೆ ಪಡೆದಿದ್ದರೂ, ಅದನ್ನು ಮಾನ್ಯ ಮಾಡಲು ಸಾದ್ಯವಿಲ್ಲ. ಆರ್ಟಿಪಿಸಿಆರ್ ವರದಿ ಕಡ್ಡಾಯ. ಸರ್ಕಾರದ ನಿರ್ಬಂಧಗಳಿರುವುದರಿಂದ ನಾನು ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ. ಮುಖ್ಯಮಂತ್ರಿಯೊಂದಿಗೇ ಚರ್ಚಿಸಿ’ ಎಂದು ನಿಯೋಗಕ್ಕೆ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.