ಸ್ಥಳೀಯರ ಆಕ್ರೋಶ: ದಕ್ಷಿಣ ಕೊಡಗಿನಲ್ಲಿ 5 ವರ್ಷಗಳಿಂದ ನಿರಂತರವಾಗಿ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತಿದ್ದ ಹುಲಿಗಳು ಇದೀಗ ಮನುಷ್ಯರ ಮೇಲೆ ದಾಳಿ ನಡೆಸತೊಡಗಿವೆ. ಜಾನುವಾರುಗಳು ಖಾಲಿಯಾಗಿ ಅವುಗಳು ಸಿಗದೆ ಇರುವುದರಿಂದ ಮನುಷ್ಯರನ್ನು ಬಲಿ ತೆಗೆದುಕೊಳ್ಳಲಾರಂಭಿಸಿವೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವುಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳ ಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ.