<p><strong>ಗೋಣಿಕೊಪ್ಪಲು (ಕೊಡಗು ಜಿಲ್ಲೆ): </strong>ಹುಲಿ ದಾಳಿಗೆ ಸಿಲುಕಿ ಸೋಮವಾರ ಬೆಳಿಗ್ಗೆ ಕೇರಳ ಗಡಿಭಾಗ ಪಲ್ಲೇರಿ ಗ್ರಾಮದಲ್ಲಿ ಕೃಷಿ ಕಾರ್ಮಿಕ ರಾಜು (75) ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.</p>.<p>ಸೋಮವಾರ ಬೆಳಿಗ್ಗೆ ತನ್ನ ಮನೆಯಿಂದ ಹೊರ ಬಂದ ರಾಜು ಅವರ ಮೇಲೆ ಕಾಫಿ ತೋಟದಲ್ಲಿ ಅಡಗಿದ್ದ ಹುಲಿ ದಿಢೀರನೇ ದಾಳಿ ನಡೆಸಿ, ತಲೆ ಹಾಗೂ ಕುತ್ತಿಗೆ ಭಾಗವನ್ನು ತೀವ್ರವಾಗಿ ಗಾಯಗೊಳಿಸಿದೆ. ಇದರಿಂದ ರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p><em><strong>ಓದಿ: <a href="https://www.prajavani.net/district/kodagu/youth-death-in-tiger-attack-near-gonikoppal-1014754.html">ಗೋಣಿಕೊಪ್ಪಲು: ಹುಲಿ ದಾಳಿಗೆ ಯುವಕ ಸಾವು</a></strong></em></p>.<p>ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿರುವುದು ಗೋಚರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಸಿದ್ದತೆ ನಡೆಸಿದ್ದಾರೆ.</p>.<p>ಭಾನುವಾರ ಸಂಜೆ ಹುಲಿ ದಾಳಿಗೆ ಚೇತನ್ (18) ಎಂಬುವವರು ಮೃತಪಟ್ಟ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಮನುಷ್ಯರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ಹುಲಿ ಕಾಫಿ ತೋಟದಲ್ಲಿಯೇ ಸುಳಿದಾಡುತ್ತಿದ್ದು ಕಾರ್ಮಿಕರ ಆತಂಕ ಹೆಚ್ಚಿಸಿದೆ.</p>.<p><strong>ಸ್ಥಳೀಯರ ಆಕ್ರೋಶ: </strong> ದಕ್ಷಿಣ ಕೊಡಗಿನಲ್ಲಿ 5 ವರ್ಷಗಳಿಂದ ನಿರಂತರವಾಗಿ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತಿದ್ದ ಹುಲಿಗಳು ಇದೀಗ ಮನುಷ್ಯರ ಮೇಲೆ ದಾಳಿ ನಡೆಸತೊಡಗಿವೆ. ಜಾನುವಾರುಗಳು ಖಾಲಿಯಾಗಿ ಅವುಗಳು ಸಿಗದೆ ಇರುವುದರಿಂದ ಮನುಷ್ಯರನ್ನು ಬಲಿ ತೆಗೆದುಕೊಳ್ಳಲಾರಂಭಿಸಿವೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವುಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳ ಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು (ಕೊಡಗು ಜಿಲ್ಲೆ): </strong>ಹುಲಿ ದಾಳಿಗೆ ಸಿಲುಕಿ ಸೋಮವಾರ ಬೆಳಿಗ್ಗೆ ಕೇರಳ ಗಡಿಭಾಗ ಪಲ್ಲೇರಿ ಗ್ರಾಮದಲ್ಲಿ ಕೃಷಿ ಕಾರ್ಮಿಕ ರಾಜು (75) ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.</p>.<p>ಸೋಮವಾರ ಬೆಳಿಗ್ಗೆ ತನ್ನ ಮನೆಯಿಂದ ಹೊರ ಬಂದ ರಾಜು ಅವರ ಮೇಲೆ ಕಾಫಿ ತೋಟದಲ್ಲಿ ಅಡಗಿದ್ದ ಹುಲಿ ದಿಢೀರನೇ ದಾಳಿ ನಡೆಸಿ, ತಲೆ ಹಾಗೂ ಕುತ್ತಿಗೆ ಭಾಗವನ್ನು ತೀವ್ರವಾಗಿ ಗಾಯಗೊಳಿಸಿದೆ. ಇದರಿಂದ ರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p><em><strong>ಓದಿ: <a href="https://www.prajavani.net/district/kodagu/youth-death-in-tiger-attack-near-gonikoppal-1014754.html">ಗೋಣಿಕೊಪ್ಪಲು: ಹುಲಿ ದಾಳಿಗೆ ಯುವಕ ಸಾವು</a></strong></em></p>.<p>ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿರುವುದು ಗೋಚರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಸಿದ್ದತೆ ನಡೆಸಿದ್ದಾರೆ.</p>.<p>ಭಾನುವಾರ ಸಂಜೆ ಹುಲಿ ದಾಳಿಗೆ ಚೇತನ್ (18) ಎಂಬುವವರು ಮೃತಪಟ್ಟ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಮನುಷ್ಯರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ಹುಲಿ ಕಾಫಿ ತೋಟದಲ್ಲಿಯೇ ಸುಳಿದಾಡುತ್ತಿದ್ದು ಕಾರ್ಮಿಕರ ಆತಂಕ ಹೆಚ್ಚಿಸಿದೆ.</p>.<p><strong>ಸ್ಥಳೀಯರ ಆಕ್ರೋಶ: </strong> ದಕ್ಷಿಣ ಕೊಡಗಿನಲ್ಲಿ 5 ವರ್ಷಗಳಿಂದ ನಿರಂತರವಾಗಿ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತಿದ್ದ ಹುಲಿಗಳು ಇದೀಗ ಮನುಷ್ಯರ ಮೇಲೆ ದಾಳಿ ನಡೆಸತೊಡಗಿವೆ. ಜಾನುವಾರುಗಳು ಖಾಲಿಯಾಗಿ ಅವುಗಳು ಸಿಗದೆ ಇರುವುದರಿಂದ ಮನುಷ್ಯರನ್ನು ಬಲಿ ತೆಗೆದುಕೊಳ್ಳಲಾರಂಭಿಸಿವೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವುಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳ ಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>