<p><strong>ಮಡಿಕೇರಿ:</strong> ಹಿರಿಯರು ಬೆಳೆಸಿದ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಬಳುವಳಿಯಾಗಿ ಕೊಡಬೇಕಾದ ಜವಾಬ್ದಾರಿಆಯಾ ಸಮಾಜಗಳ ಮುಖಂಡರು ತೆಗೆದುಕೊಳ್ಳಬೇಕು' ಎಂದು ಕ್ರೀಡಾಪಟು ಅರ್ಜುನ್ ದೇವಯ್ಯ ಸಲಹೆ ನೀಡಿದರು.</p>.<p>ನಗರದ ಕೊಡವ ಸಮಾಜದಲ್ಲಿ ಭಾನುವಾರ ಪುತ್ತರಿ ಊರೊರ್ಮೆ ಸಂತೋಷ ಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>ಯಾವ ದೇಶ ತನ್ನ ಸಂಸ್ಕೃತಿಮರೆಯುತ್ತಿದೆಯೋ ಆ ದೇಶ ನಾಶವಾಗುತ್ತಿದೆ. ಸಂಸ್ಕೃತಿ ಇರುವುದಿಲ್ಲವೋ ಜನಾಂಗ ಪತನವಾಗುತ್ತದೆ. ನಮ್ಮ ಸಂಸ್ಕೃತಿ, ಸಂಸ್ಕಾರ ಮತ್ತೊಬ್ಬರ ಮನಸ್ಸಿಗೆ ಮೆಚ್ಚುಗೆಯಾಗುವ ರೀತಿಯಲ್ಲಿರಬೇಕು ಎಂದು ಸಲಹೆ ನೀಡಿದರು.</p>.<p>ಯಾರನ್ನು ಸೋಲಿಸಲು ಪ್ರಯತ್ನಿಸಬಾರದು. ಬದಲಿಗೆ ತಾನು ಗೆಲುವು ಸಾಧಿಸಲು ಪ್ರಯತ್ನಿಸಬೇಕು. ಹೀಗಾದಾಗ ಯಾರ ನಡುವೆಯೂ ದ್ವೇಷ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಿಸಿದರು.</p>.<p>'ಕೊಡವರಂತಹ ಸಂಸ್ಕೃತಿಯನ್ನು ಮತ್ತೊಂದು ಜನಾಂಗದಲ್ಲಿ ಕಾಣಲು ಸಾಧ್ಯವೇ ಇಲ್ಲ. ಕೊಡವರು ತಮ್ಮ ಆಸ್ತಿಯನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಆಸ್ತಿ ಕಳೆದುಕೊಂಡರೆ ಅಸ್ತಿತ್ವವೇ ನಾಶವಾಗಲಿದೆ' ಎಂದು ಅರ್ಜುನ್ ದೇವಯ್ಯ ಎಚ್ಚರಿಸಿದರು.</p>.<p>ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಕೊಂಗಂಡ ಎಸ್ ದೇವಯ್ಯ ಮಾತನಾಡಿ, ‘ಪ್ರಕೃತಿ ವಿಕೋಪದಿಂದಾಗಿ ಅದೆಷ್ಟೋ ಕೊಡವ ಜನಾಂಗದವರು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಮುಂದೆಂದೂ ಕೊಡಗಿನಲ್ಲಿ ಈ ರೀತಿಯ ಘಟನೆ ಸಂಭವಿಸದಿರಲಿ’ ಎಂದು ಆಶಿಸಿದರು.</p>.<p>ಕೂಟದಲ್ಲಿ ಪ್ರಕೃತಿ ವಿಕೋಪದಲ್ಲಿ ಮಡಿದವರಿಗೆ ಸಂತಾಪ ಸೂಚಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕೊಡವ ಸಮಾಜದ ಸದಸ್ಯರ ಮಕ್ಕಳಿಗೆ ಅರ್ಜುನ್ ದೇವಯ್ಯ ಪ್ರೋತ್ಸಾಹ ಧನ ವಿತರಿಸಿದರು.</p>.<p>ಕೊಡವ ಸಮಾಜ ಉಪಾಧ್ಯಕ್ಷ ಮಣವಟ್ಟಿರ ಚಿಣ್ಣಪ್ಪ, ಕೊಡವ ಮಕ್ಕಡ ಕೂಟ ಹಾಗೂ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಹಿರಿಯರು ಬೆಳೆಸಿದ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಬಳುವಳಿಯಾಗಿ ಕೊಡಬೇಕಾದ ಜವಾಬ್ದಾರಿಆಯಾ ಸಮಾಜಗಳ ಮುಖಂಡರು ತೆಗೆದುಕೊಳ್ಳಬೇಕು' ಎಂದು ಕ್ರೀಡಾಪಟು ಅರ್ಜುನ್ ದೇವಯ್ಯ ಸಲಹೆ ನೀಡಿದರು.</p>.<p>ನಗರದ ಕೊಡವ ಸಮಾಜದಲ್ಲಿ ಭಾನುವಾರ ಪುತ್ತರಿ ಊರೊರ್ಮೆ ಸಂತೋಷ ಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>ಯಾವ ದೇಶ ತನ್ನ ಸಂಸ್ಕೃತಿಮರೆಯುತ್ತಿದೆಯೋ ಆ ದೇಶ ನಾಶವಾಗುತ್ತಿದೆ. ಸಂಸ್ಕೃತಿ ಇರುವುದಿಲ್ಲವೋ ಜನಾಂಗ ಪತನವಾಗುತ್ತದೆ. ನಮ್ಮ ಸಂಸ್ಕೃತಿ, ಸಂಸ್ಕಾರ ಮತ್ತೊಬ್ಬರ ಮನಸ್ಸಿಗೆ ಮೆಚ್ಚುಗೆಯಾಗುವ ರೀತಿಯಲ್ಲಿರಬೇಕು ಎಂದು ಸಲಹೆ ನೀಡಿದರು.</p>.<p>ಯಾರನ್ನು ಸೋಲಿಸಲು ಪ್ರಯತ್ನಿಸಬಾರದು. ಬದಲಿಗೆ ತಾನು ಗೆಲುವು ಸಾಧಿಸಲು ಪ್ರಯತ್ನಿಸಬೇಕು. ಹೀಗಾದಾಗ ಯಾರ ನಡುವೆಯೂ ದ್ವೇಷ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಿಸಿದರು.</p>.<p>'ಕೊಡವರಂತಹ ಸಂಸ್ಕೃತಿಯನ್ನು ಮತ್ತೊಂದು ಜನಾಂಗದಲ್ಲಿ ಕಾಣಲು ಸಾಧ್ಯವೇ ಇಲ್ಲ. ಕೊಡವರು ತಮ್ಮ ಆಸ್ತಿಯನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಆಸ್ತಿ ಕಳೆದುಕೊಂಡರೆ ಅಸ್ತಿತ್ವವೇ ನಾಶವಾಗಲಿದೆ' ಎಂದು ಅರ್ಜುನ್ ದೇವಯ್ಯ ಎಚ್ಚರಿಸಿದರು.</p>.<p>ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಕೊಂಗಂಡ ಎಸ್ ದೇವಯ್ಯ ಮಾತನಾಡಿ, ‘ಪ್ರಕೃತಿ ವಿಕೋಪದಿಂದಾಗಿ ಅದೆಷ್ಟೋ ಕೊಡವ ಜನಾಂಗದವರು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಮುಂದೆಂದೂ ಕೊಡಗಿನಲ್ಲಿ ಈ ರೀತಿಯ ಘಟನೆ ಸಂಭವಿಸದಿರಲಿ’ ಎಂದು ಆಶಿಸಿದರು.</p>.<p>ಕೂಟದಲ್ಲಿ ಪ್ರಕೃತಿ ವಿಕೋಪದಲ್ಲಿ ಮಡಿದವರಿಗೆ ಸಂತಾಪ ಸೂಚಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕೊಡವ ಸಮಾಜದ ಸದಸ್ಯರ ಮಕ್ಕಳಿಗೆ ಅರ್ಜುನ್ ದೇವಯ್ಯ ಪ್ರೋತ್ಸಾಹ ಧನ ವಿತರಿಸಿದರು.</p>.<p>ಕೊಡವ ಸಮಾಜ ಉಪಾಧ್ಯಕ್ಷ ಮಣವಟ್ಟಿರ ಚಿಣ್ಣಪ್ಪ, ಕೊಡವ ಮಕ್ಕಡ ಕೂಟ ಹಾಗೂ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>