ಸಮಾರೋಪ ಸಮಾರಂಭ: ಅದೇ ದಿನ ಮಧ್ಯಾಹ್ನ 3ಕ್ಕೆ ಸಂಸದ ಪ್ರತಾಪ ಸಿಂಹ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಾ.ಕೊಳಂಬೆ ಚಿದಾನಂದ ಗೌಡ, ಜಿ.ಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸೋಮವಾರಪೇಟೆ ತಾ.ಪಂ ಅಧ್ಯಕ್ಷ ಅಭಿಮನ್ಯು ಕುಮಾರ್, ಪ್ರಮುಖರಾದ ಸೂರ್ತಲೆ ಆರ್.ಸೋಮಣ್ಣ, ಹೊದ್ದೆಟ್ಟಿ ಭವಾನಿಶಂಕರ್, ತೇನನ ರಾಜೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.