<p><strong>ಸೋಮವಾರಪೇಟೆ:</strong> ‘ಯಾವುದೇ ಸಮಾಜಗಳು ಬಲಿಷ್ಠವಾಗಿ ಬೆಳೆದಲ್ಲಿ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕೊಡವ ಸಮಾಜದಿಂದ ಭಾನುವಾರ ನಡೆದ ಪುತ್ತರಿ ಊರೊರ್ಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೊಡಗು ಜಿಲ್ಲೆ ಭೂಲೋಕದ ಸ್ವರ್ಗ, ನಾವು ಈ ಸ್ವರ್ಗದಲ್ಲಿ ಜೀವನ ನಡೆಸುತ್ತಿದ್ದೇವೆ. ಕೊಡಗು ಜಿಲ್ಲೆಯನ್ನು ಕೊಡಗನ್ನಾಗಿಯೇ ಉಳಿಸಿಕೊಳ್ಳಲು ಸ್ಥಳೀಯರು ಯಾರೂ ಹೊರ ಜಿಲ್ಲೆಯವರಿಗೆ ಕೃಷಿ ಜಮೀನನ್ನು ಮಾರುವುದು ಬೇಡ. ನಮ್ಮ ಹಿರಿಯರಿಂದ ಬಂದ ಭೂಮಿ ನಮ್ಮ ಜನಾಂಗದ ಹೆಗ್ಗುರುತಾಗಿ ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ’ ಎಂದರು.</p>.<p>‘ಕೊಡವ ಸಮುದಾಯದ ಆಚಾರ, ವಿಚಾರ, ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ನಮ್ಮ ಜವಾಬ್ದಾರಿಯಾಗಿದೆ. ಆ ಕೆಲಸವನ್ನು ಸ್ಥಳೀಯ ಕೊಡವ ಸಮಾಜ ಮಾಡಿಕೊಂಡು ಬರುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಬೆಂಗಳೂರಿನ ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಎಸ್. ಸುರೇಶ್ ನಂಜಪ್ಪ ಮಾತನಾಡಿ, ‘ನಮ್ಮ ಆಚಾರ ವಿಚಾರಗಳನ್ನು ಪರಿಚಯಿಸುತ್ತಿರುವ ಕೊಡವ ಸಮಾಜ ಎಲ್ಲ ಕಾರ್ಯಕ್ರಮಗಳಲ್ಲೂ ತಮ್ಮ ಕುಟುಂಬದೊಂದಿಗೆ ಸಮಾಜ ಬಾಂಧವರು ಪಾಲ್ಗೊಂಡಲ್ಲಿ ಮಾತ್ರ ಮಕ್ಕಳಿಗೆ ನಮ್ಮ ಸಂಸ್ಕೃತಿ ಕಲಿಸಿಲು ಸಾಧ್ಯ. ಸಮಾಜದ ಏಳಿಗೆಗಾಗಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ಅವರ ಮುಂದಿನ ಜೀವನಕ್ಕೆ ಒಳ್ಳೆಯ ಮಾರ್ಗ ತೋರಿಸುವ ಕೆಲಸ ನಮ್ಮಿಂದಾಗಬೇಕು’ ಎಂದರು.</p>.<p>ಚಿಕ್ಕಮಗಳೂರಿನ ಕಾಫಿ ಬೆಳೆಗಾರರ ಸಂಘದ ಉಪಾಧ್ಯಕ್ಷ ಮಾತಂಡ ಸಿ. ಕಾರ್ಯಪ್ಪ ಮಾತನಾಡಿ, ‘ಸಮಾಜ ಬಾಂಧವರು ಇಂದು ಕಾಫಿಗೆ ಉತ್ತಮ ಬೆಲೆ ಇದೆ ಎಂದು ಸರ್ಕಾರಿ ನೌಕರಿಯತ್ತ ಮುಖ ಮಾಡುತ್ತಿಲ್ಲ. ಮುಂದಿನ ಒಂದೆರಡು ವರ್ಷಗಳಲ್ಲಿ ಬ್ರೆಜಿಲ್ನಲ್ಲಿ ಉತ್ತಮ ಕಾಫಿ ನಿರೀಕ್ಷೆ ಇದ್ದು, ಭಾರತದ ಕಾಫಿ ಬೆಲೆ ಕಳೆದುಕೊಳ್ಳಲಿದೆ. ಆದುದ್ದರಿಂದ ನಾವು ಉನ್ನತ ಸರ್ಕಾರಿ ನೌಕರಿ ಪಡೆಯುವತ್ತ ಗಮನ ಹರಿಸಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡವ ಸಮಾಜದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿ, ‘ಕೊಡಗಿನ ಜನರು ಕೇವಲ ಸೇನೆ ಮತ್ತು ಕ್ರೀಡೆಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಎಲ್ಲರಿಗೂ ಗೌರವ ಕೊಡುವುದು ಮತ್ತು ಸಾಧನೆ ಮಾಡುವುದು ನಮ್ಮ ರಕ್ತದಲ್ಲಿಯೇ ಬಂದಿದೆ’ ಎಂದರು.</p>.<p>ವೇದಿಕೆಯಲ್ಲಿ ಸಮಾಜದ ಉಪಾಧ್ಯಕ್ಷ ಕುಟ್ಟಪ್ಪ, ಕಾರ್ಯದರ್ಶಿ ಅನಿಲ್ ಇದ್ದರು. ಗರ್ವಾಲೆ ಗ್ರಾಮದ ಬೋಟ್ಲಪ್ಪ ತಂಡದಿಂದ ಬೊಳಕಾಟ್, ಮುವತ್ತೊಕ್ಲು ನಾಗಂಡ ತಂಡದಿಂದ ಉಮ್ಮತ್ತಾಟ್ ನಡೆಯಿತು. ಸಮಾಜದ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಸೇರಿದಂತೆ ವಾರ್ಷಿಕ ಪರೀಕ್ಷೆಯಲ್ಲಿ ಶೇ 70ಕ್ಕಿಂತಲೂ ಅಧಿಕ ಅಂಕಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ‘ಯಾವುದೇ ಸಮಾಜಗಳು ಬಲಿಷ್ಠವಾಗಿ ಬೆಳೆದಲ್ಲಿ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕೊಡವ ಸಮಾಜದಿಂದ ಭಾನುವಾರ ನಡೆದ ಪುತ್ತರಿ ಊರೊರ್ಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೊಡಗು ಜಿಲ್ಲೆ ಭೂಲೋಕದ ಸ್ವರ್ಗ, ನಾವು ಈ ಸ್ವರ್ಗದಲ್ಲಿ ಜೀವನ ನಡೆಸುತ್ತಿದ್ದೇವೆ. ಕೊಡಗು ಜಿಲ್ಲೆಯನ್ನು ಕೊಡಗನ್ನಾಗಿಯೇ ಉಳಿಸಿಕೊಳ್ಳಲು ಸ್ಥಳೀಯರು ಯಾರೂ ಹೊರ ಜಿಲ್ಲೆಯವರಿಗೆ ಕೃಷಿ ಜಮೀನನ್ನು ಮಾರುವುದು ಬೇಡ. ನಮ್ಮ ಹಿರಿಯರಿಂದ ಬಂದ ಭೂಮಿ ನಮ್ಮ ಜನಾಂಗದ ಹೆಗ್ಗುರುತಾಗಿ ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ’ ಎಂದರು.</p>.<p>‘ಕೊಡವ ಸಮುದಾಯದ ಆಚಾರ, ವಿಚಾರ, ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ನಮ್ಮ ಜವಾಬ್ದಾರಿಯಾಗಿದೆ. ಆ ಕೆಲಸವನ್ನು ಸ್ಥಳೀಯ ಕೊಡವ ಸಮಾಜ ಮಾಡಿಕೊಂಡು ಬರುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಬೆಂಗಳೂರಿನ ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಎಸ್. ಸುರೇಶ್ ನಂಜಪ್ಪ ಮಾತನಾಡಿ, ‘ನಮ್ಮ ಆಚಾರ ವಿಚಾರಗಳನ್ನು ಪರಿಚಯಿಸುತ್ತಿರುವ ಕೊಡವ ಸಮಾಜ ಎಲ್ಲ ಕಾರ್ಯಕ್ರಮಗಳಲ್ಲೂ ತಮ್ಮ ಕುಟುಂಬದೊಂದಿಗೆ ಸಮಾಜ ಬಾಂಧವರು ಪಾಲ್ಗೊಂಡಲ್ಲಿ ಮಾತ್ರ ಮಕ್ಕಳಿಗೆ ನಮ್ಮ ಸಂಸ್ಕೃತಿ ಕಲಿಸಿಲು ಸಾಧ್ಯ. ಸಮಾಜದ ಏಳಿಗೆಗಾಗಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ಅವರ ಮುಂದಿನ ಜೀವನಕ್ಕೆ ಒಳ್ಳೆಯ ಮಾರ್ಗ ತೋರಿಸುವ ಕೆಲಸ ನಮ್ಮಿಂದಾಗಬೇಕು’ ಎಂದರು.</p>.<p>ಚಿಕ್ಕಮಗಳೂರಿನ ಕಾಫಿ ಬೆಳೆಗಾರರ ಸಂಘದ ಉಪಾಧ್ಯಕ್ಷ ಮಾತಂಡ ಸಿ. ಕಾರ್ಯಪ್ಪ ಮಾತನಾಡಿ, ‘ಸಮಾಜ ಬಾಂಧವರು ಇಂದು ಕಾಫಿಗೆ ಉತ್ತಮ ಬೆಲೆ ಇದೆ ಎಂದು ಸರ್ಕಾರಿ ನೌಕರಿಯತ್ತ ಮುಖ ಮಾಡುತ್ತಿಲ್ಲ. ಮುಂದಿನ ಒಂದೆರಡು ವರ್ಷಗಳಲ್ಲಿ ಬ್ರೆಜಿಲ್ನಲ್ಲಿ ಉತ್ತಮ ಕಾಫಿ ನಿರೀಕ್ಷೆ ಇದ್ದು, ಭಾರತದ ಕಾಫಿ ಬೆಲೆ ಕಳೆದುಕೊಳ್ಳಲಿದೆ. ಆದುದ್ದರಿಂದ ನಾವು ಉನ್ನತ ಸರ್ಕಾರಿ ನೌಕರಿ ಪಡೆಯುವತ್ತ ಗಮನ ಹರಿಸಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡವ ಸಮಾಜದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿ, ‘ಕೊಡಗಿನ ಜನರು ಕೇವಲ ಸೇನೆ ಮತ್ತು ಕ್ರೀಡೆಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಎಲ್ಲರಿಗೂ ಗೌರವ ಕೊಡುವುದು ಮತ್ತು ಸಾಧನೆ ಮಾಡುವುದು ನಮ್ಮ ರಕ್ತದಲ್ಲಿಯೇ ಬಂದಿದೆ’ ಎಂದರು.</p>.<p>ವೇದಿಕೆಯಲ್ಲಿ ಸಮಾಜದ ಉಪಾಧ್ಯಕ್ಷ ಕುಟ್ಟಪ್ಪ, ಕಾರ್ಯದರ್ಶಿ ಅನಿಲ್ ಇದ್ದರು. ಗರ್ವಾಲೆ ಗ್ರಾಮದ ಬೋಟ್ಲಪ್ಪ ತಂಡದಿಂದ ಬೊಳಕಾಟ್, ಮುವತ್ತೊಕ್ಲು ನಾಗಂಡ ತಂಡದಿಂದ ಉಮ್ಮತ್ತಾಟ್ ನಡೆಯಿತು. ಸಮಾಜದ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಸೇರಿದಂತೆ ವಾರ್ಷಿಕ ಪರೀಕ್ಷೆಯಲ್ಲಿ ಶೇ 70ಕ್ಕಿಂತಲೂ ಅಧಿಕ ಅಂಕಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>