<p><strong>ನಾಪೋಕ್ಲು:</strong> ನಾಪೋಕ್ಲು ಭಾಗಮಂಡಲ ರಸ್ತೆಯ ಅಯ್ಯಂಗೇರಿ ಗ್ರಾಮದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿಪಡಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಸದ್ಯದಲ್ಲಿಯೇ ಮಳೆಗಾಲ ಕಾಲಿರಿಸಲಿದ್ದು ಅದಕ್ಕೂ ಮುನ್ನ ಸಂಬಂಧಪಟ್ಟವರು ಕಾರ್ಯಪ್ರವೃತ್ತರಾಗಬೇಕು. ಸಂಚಾರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ಈ ಬಗ್ಗೆ ಸಾಕಷ್ಟು ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಾಪೋಕ್ಲು ಪಟ್ಟಣದಿಂದ ನೆಲಜಿ ಗ್ರಾಮದವರೆಗೆ ಅಲ್ಲಲ್ಲಿ ರಸ್ತೆ ಗುಂಡಿಗಳನ್ನು ಈಚೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಆದರೆ, ಭಾಗಮಂಡಲದವರೆಗಿನ ರಸ್ತೆ ಅಲ್ಲಲ್ಲಿ ಹದಗೆಟ್ಟಿದೆ. ಅಯ್ಯಂಗೇರಿ ಗ್ರಾಮದಲ್ಲಿ ರಸ್ತೆ ಗುಂಡಿಗಳು ಹೆಚ್ಚಿದ್ದು ವಾಹನ ಸಂಚಾರಕ್ಕೆ ತೊಡಕಾಗಿದೆ. ಮಳೆ ಬಂದರಂತೂ ಗುಂಡಿಗಳಲ್ಲಿ ನೀರು ನಿಂತು ಸಾಗಲು ದುಸ್ಸಾಹಸ ಪಡಬೇಕಾಗುತ್ತದೆ. ವಾಹನ ಚಾಲಕರು, ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಇಲ್ಲಿನ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-51-9556873</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ನಾಪೋಕ್ಲು ಭಾಗಮಂಡಲ ರಸ್ತೆಯ ಅಯ್ಯಂಗೇರಿ ಗ್ರಾಮದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿಪಡಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಸದ್ಯದಲ್ಲಿಯೇ ಮಳೆಗಾಲ ಕಾಲಿರಿಸಲಿದ್ದು ಅದಕ್ಕೂ ಮುನ್ನ ಸಂಬಂಧಪಟ್ಟವರು ಕಾರ್ಯಪ್ರವೃತ್ತರಾಗಬೇಕು. ಸಂಚಾರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ಈ ಬಗ್ಗೆ ಸಾಕಷ್ಟು ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಾಪೋಕ್ಲು ಪಟ್ಟಣದಿಂದ ನೆಲಜಿ ಗ್ರಾಮದವರೆಗೆ ಅಲ್ಲಲ್ಲಿ ರಸ್ತೆ ಗುಂಡಿಗಳನ್ನು ಈಚೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಆದರೆ, ಭಾಗಮಂಡಲದವರೆಗಿನ ರಸ್ತೆ ಅಲ್ಲಲ್ಲಿ ಹದಗೆಟ್ಟಿದೆ. ಅಯ್ಯಂಗೇರಿ ಗ್ರಾಮದಲ್ಲಿ ರಸ್ತೆ ಗುಂಡಿಗಳು ಹೆಚ್ಚಿದ್ದು ವಾಹನ ಸಂಚಾರಕ್ಕೆ ತೊಡಕಾಗಿದೆ. ಮಳೆ ಬಂದರಂತೂ ಗುಂಡಿಗಳಲ್ಲಿ ನೀರು ನಿಂತು ಸಾಗಲು ದುಸ್ಸಾಹಸ ಪಡಬೇಕಾಗುತ್ತದೆ. ವಾಹನ ಚಾಲಕರು, ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಇಲ್ಲಿನ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-51-9556873</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>