<p><strong>ಮಡಿಕೇರಿ:</strong> ಕಳೆದ 11 ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ 5,870 ಮಕ್ಕಳು ಜನಿಸಿದ್ದರೆ, 4,283 ಮಂದಿ ಮೃತಪಟ್ಟಿದ್ದಾರೆ. ಜನಿಸಿದ ಮಕ್ಕಳಲ್ಲಿ 2,963 ಗಂಡು, 2,907 ಹೆಣ್ಣು ಮಕ್ಕಳಿದ್ದರೆ, ಮೃತಪಟ್ಟವರಲ್ಲಿ 2,539 ಪುರುಷರು, 1,734 ಮಹಿಳೆಯರು ಇದ್ದಾರೆ. ಇವರ ವಾರಸುದಾರರಿಗೆ ಜನನ ಮತ್ತು ಮರಣ ಪತ್ರವನ್ನು ತ್ವರಿತಗತಿಯಲ್ಲಿ ವಿತರಿಸಲು 338 ನೋಂದಣಿ ಘಟಕಗಳನ್ನು ಆರಂಭಿಸಲಾಗಿದೆ. ಇದರಲ್ಲಿ 330 ಘಟಕಗಳು ಗ್ರಾಮೀಣ ಪ್ರದೇಶದಲ್ಲಿವೆ.</p>.<p>ಈ ವಿಷಯ ಇಲ್ಲಿ ಮಂಗಳವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಡೆಸಿದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಯಿತು.</p>.<p>ಜಿಲ್ಲಾ ಸಾಂಖ್ಯಿಕ ಇಲಾಖೆಯ ಅಧಿಕಾರಿ ನಾರಾಯಣ ಅವರು ಈ ಮಾಹಿತಿ ನೀಡಿ, ‘ಜನನ ಮತ್ತು ಮರಣವನ್ನು ವಿವಿಧ ಹಂತದಲ್ಲಿ ದಾಖಲಿಸಲಾಗುತ್ತಿದೆ’ ಎಂದರು.</p>.<p>ಸರ್ಕಾರಿ ಆಸ್ಪತ್ರೆಗಳಲ್ಲಿ ಜನನ ಮರಣ ಉಪ ನೋಂದಣಿ ಘಟಕವನ್ನು ಸ್ಥಾಪಿಸಿ ಈ ಸಂಸ್ಥೆಗಳಲ್ಲಿ ಸಂಭವಿಸುವ ಜನನ ಮತ್ತು ಮರಣ ಘಟನೆಗಳನ್ನು ನೋಂದಣಿ ಮಾಡಿ, ಅರ್ಜಿದಾರರಿಗೆ ನಿಗದಿತ ಸಮಯದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಘಟನೆಗಳನ್ನು 21 ದಿನದೊಳಗೆ ನೋಂದಣಿ ಮಾಡಲು ಅನುಕೂಲವಾಗುವಂತೆ ಸಂಬಂಧಿಸಿದ ಜನನ ಮತ್ತು ಮರಣ ನೋಂದಣಾಧಿಕಾರಿಗಳಿಗೆ ವರದಿ ಮಾಡಲು ಸೂಚಿಸಲಾಗಿದೆ ಎಂದೂ ತಿಳಿಸಿದರು.</p>.<h2><strong>‘30 ದಿನದೊಳಗೆ ಗ್ರಾ.ಪಂ ವ್ಯಾಪ್ತಿಯಲ್ಲಿ ನೋಂದಾಯಿಸಿ’</strong></h2><p>ಈಗಾಗಲೇ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಯವರನ್ನು ಉಪ ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 30 ದಿನದೊಳಗೆ ಜನನ ಮತ್ತು ಮರಣ ನೋಂದಣಿ ಮಾಡಬೇಕು. 30 ದಿನದ ನಂತರ ಗ್ರಾಮ ಆಡಳಿತ ಅಧಿಕಾರಿಯನ್ನು ನೋಂದಣಿ ಅಧಿಕಾರಿಯಾಗಿ ನೇಮಿಸಲಾಗಿದ್ದು, ಈ ನೋಂದಣಿಯನ್ನು 30 ದಿನದೊಳಗೆ ಇ-ಜನ್ಮ ತಂತ್ರಾಂಶದಲ್ಲಿ ದಾಖಲು ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.</p>.<p>ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಸರಳೀಕರಣಗೊಳಿಸುವ ಮತ್ತು ನಾಗರಿಕ ಸ್ನೇಹಿ ಮಾಡುವಲ್ಲಿ ಮುಂದಾಗಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿನ ಜನನ ಪ್ರಮಾಣ ಪತ್ರವನ್ನು ಎರಡು ಮೂರು ದಿನದೊಳಗೆ ಪಡೆಯಬಹುದಾಗಿದೆ ಎಂದರು.</p>.<p>ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆರೋಗ್ಯ ಅಧಿಕಾರಿಯವರು ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.</p>.<p>ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತಪ್ಪ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಸಹಾಯಕ ಸಾಂಖ್ಯಿಕ ಅಧಿಕಾರಿ ಟಿ.ವೆಂಕಟೇಶ್, ಬಿ.ಎಂ.ಗಾನವಿ ಭಾಗವಹಿಸಿದ್ದರು.</p>.<h2>ನಿಖರವಾಗಿ ದಾಖಲಿಸಲು ಡಿಸಿ ಸೂಚನೆ </h2><p>ಕೊಡಗು ಜಿಲ್ಲೆಯಲ್ಲಿ ನಡೆಯುವ ಜನನ ಮತ್ತು ಮರಣಗಳ ನೋಂದಣಿಯನ್ನು ನಿಖರವಾಗಿ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಈ ಕಾರ್ಯ ಆಗಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು. ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮೀಣ ಭಾಗದಲ್ಲಿ 2015 ರ ಏಪ್ರಿಲ್ 01 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು ಈ ಕಾರ್ಯದ ಪ್ರಗತಿಯನ್ನು ಸಾಧಿಸುವಂತೆ ಅವರು ಸೂಚಿಸಿದರು. ಜನನ ಮತ್ತು ಮರಣ ನೋಂದಣಿ ಸಂಬಂಧಿಸಿದಂತೆ ಆಯಾಯ ಕಾಲದಲ್ಲಿ ಪಡೆಯುವಂತಾಗಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಆಯಾಯ ಕಾಲದಲ್ಲಿಯೇ ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು. ಈಗಾಗಲೇ ದತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು 2022 ರ ಸೆಕ್ಷನ್ 40 ಮತ್ತು 48 ರಂತೆ ತಿದ್ದುಪಡಿ ಮಾಡಲಾಗಿದ್ದು ಯಾವುದೇ ಏಜೆನ್ಸಿಗಳು ದತ್ತು ಮಕ್ಕಳನ್ನು ಪಡೆಯಲು ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡು ಜನನ ಪ್ರಮಾಣ ಪತ್ರವನ್ನು ನಿಯಮಾನುಸಾರ ಪಡೆಯಬಹುದಾಗಿದೆ ಎಂದು ಅವರು ಹೇಳಿದರು. </p>.<h2>ಇತರೆ ಸೂಚನೆಗಳು </h2><p>* ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಜನನ ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿ ಪ್ರಮಾಣ ಪತ್ರವನ್ನು ವಿತರಿಸಬೇಕು </p><p>* ಎಲ್ಲಾ ಖಾಸಗಿ ಆಸ್ಪತ್ರೆಗಳು ಜನನ ಮರಣ ಘಟನೆಗಳನ್ನು ಎರಡು– ಮೂರು ದಿನಗಳೊಳಗೆ ಸಂಬಂಧಿಸಿದ ಜನನ ಮರಣ ನೋಂದಣಾಧಿಕಾರಿಗಳಿಗೆ ವರದಿ ಮಾಡಬೇಕು </p><p>* ಎಲ್ಲಾ ಆಸ್ಪತ್ರೆಗಳಲ್ಲಿ ಜನನ ಮರಣ ಘಟನೆಗಳು ಸಂಭವಿಸಿರುವ ಮಾಹಿತಿಯ ಪಟ್ಟ್ಟಿಯನ್ನು ಇರಿಸಬೇಕು </p><p>* ಜನನ ಮರಣ ಪ್ರಮಾಣ ಪತ್ರಗಳ ನೋಂದಣಿ ವಂಚನೆಯ ಚಟುವಟಿಕೆಗಳನ್ನು ತಡೆಗಟ್ಟುವ ಕ್ರಮಗಳಿಗೆ ಸಂಬಂಧಿಸಿದಂತೆ ಜನನ ಮರಣ ನೋಂದಣಾಧಿಕಾರಿಗಳು ಉಪ ನೋಂದಣಾಧಿಕಾರಿಗಳು ತಮ್ಮ ಬಳಕೆದಾರರ ಐಡಿ ಪಾಸ್ವರ್ಡ್ ಮತ್ತು ಮೊಬೈಲ್ ಓಟಿಪಿ ಗಳನ್ನು ಹಂಚಿಕೊಳ್ಳದಂತೆ ಮತ್ತು ಆಗಾಗ್ಗೆ ಪಾಸ್ ವರ್ಡ್ ಬದಲಾಯಿಸುವ ಅಗತ್ಯತೆಯ ಬಗ್ಗೆ ಎಲ್ಲಾ ಜನನ ಮರಣ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕಳೆದ 11 ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ 5,870 ಮಕ್ಕಳು ಜನಿಸಿದ್ದರೆ, 4,283 ಮಂದಿ ಮೃತಪಟ್ಟಿದ್ದಾರೆ. ಜನಿಸಿದ ಮಕ್ಕಳಲ್ಲಿ 2,963 ಗಂಡು, 2,907 ಹೆಣ್ಣು ಮಕ್ಕಳಿದ್ದರೆ, ಮೃತಪಟ್ಟವರಲ್ಲಿ 2,539 ಪುರುಷರು, 1,734 ಮಹಿಳೆಯರು ಇದ್ದಾರೆ. ಇವರ ವಾರಸುದಾರರಿಗೆ ಜನನ ಮತ್ತು ಮರಣ ಪತ್ರವನ್ನು ತ್ವರಿತಗತಿಯಲ್ಲಿ ವಿತರಿಸಲು 338 ನೋಂದಣಿ ಘಟಕಗಳನ್ನು ಆರಂಭಿಸಲಾಗಿದೆ. ಇದರಲ್ಲಿ 330 ಘಟಕಗಳು ಗ್ರಾಮೀಣ ಪ್ರದೇಶದಲ್ಲಿವೆ.</p>.<p>ಈ ವಿಷಯ ಇಲ್ಲಿ ಮಂಗಳವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಡೆಸಿದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಯಿತು.</p>.<p>ಜಿಲ್ಲಾ ಸಾಂಖ್ಯಿಕ ಇಲಾಖೆಯ ಅಧಿಕಾರಿ ನಾರಾಯಣ ಅವರು ಈ ಮಾಹಿತಿ ನೀಡಿ, ‘ಜನನ ಮತ್ತು ಮರಣವನ್ನು ವಿವಿಧ ಹಂತದಲ್ಲಿ ದಾಖಲಿಸಲಾಗುತ್ತಿದೆ’ ಎಂದರು.</p>.<p>ಸರ್ಕಾರಿ ಆಸ್ಪತ್ರೆಗಳಲ್ಲಿ ಜನನ ಮರಣ ಉಪ ನೋಂದಣಿ ಘಟಕವನ್ನು ಸ್ಥಾಪಿಸಿ ಈ ಸಂಸ್ಥೆಗಳಲ್ಲಿ ಸಂಭವಿಸುವ ಜನನ ಮತ್ತು ಮರಣ ಘಟನೆಗಳನ್ನು ನೋಂದಣಿ ಮಾಡಿ, ಅರ್ಜಿದಾರರಿಗೆ ನಿಗದಿತ ಸಮಯದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಘಟನೆಗಳನ್ನು 21 ದಿನದೊಳಗೆ ನೋಂದಣಿ ಮಾಡಲು ಅನುಕೂಲವಾಗುವಂತೆ ಸಂಬಂಧಿಸಿದ ಜನನ ಮತ್ತು ಮರಣ ನೋಂದಣಾಧಿಕಾರಿಗಳಿಗೆ ವರದಿ ಮಾಡಲು ಸೂಚಿಸಲಾಗಿದೆ ಎಂದೂ ತಿಳಿಸಿದರು.</p>.<h2><strong>‘30 ದಿನದೊಳಗೆ ಗ್ರಾ.ಪಂ ವ್ಯಾಪ್ತಿಯಲ್ಲಿ ನೋಂದಾಯಿಸಿ’</strong></h2><p>ಈಗಾಗಲೇ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಯವರನ್ನು ಉಪ ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 30 ದಿನದೊಳಗೆ ಜನನ ಮತ್ತು ಮರಣ ನೋಂದಣಿ ಮಾಡಬೇಕು. 30 ದಿನದ ನಂತರ ಗ್ರಾಮ ಆಡಳಿತ ಅಧಿಕಾರಿಯನ್ನು ನೋಂದಣಿ ಅಧಿಕಾರಿಯಾಗಿ ನೇಮಿಸಲಾಗಿದ್ದು, ಈ ನೋಂದಣಿಯನ್ನು 30 ದಿನದೊಳಗೆ ಇ-ಜನ್ಮ ತಂತ್ರಾಂಶದಲ್ಲಿ ದಾಖಲು ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.</p>.<p>ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಸರಳೀಕರಣಗೊಳಿಸುವ ಮತ್ತು ನಾಗರಿಕ ಸ್ನೇಹಿ ಮಾಡುವಲ್ಲಿ ಮುಂದಾಗಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿನ ಜನನ ಪ್ರಮಾಣ ಪತ್ರವನ್ನು ಎರಡು ಮೂರು ದಿನದೊಳಗೆ ಪಡೆಯಬಹುದಾಗಿದೆ ಎಂದರು.</p>.<p>ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆರೋಗ್ಯ ಅಧಿಕಾರಿಯವರು ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.</p>.<p>ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತಪ್ಪ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಸಹಾಯಕ ಸಾಂಖ್ಯಿಕ ಅಧಿಕಾರಿ ಟಿ.ವೆಂಕಟೇಶ್, ಬಿ.ಎಂ.ಗಾನವಿ ಭಾಗವಹಿಸಿದ್ದರು.</p>.<h2>ನಿಖರವಾಗಿ ದಾಖಲಿಸಲು ಡಿಸಿ ಸೂಚನೆ </h2><p>ಕೊಡಗು ಜಿಲ್ಲೆಯಲ್ಲಿ ನಡೆಯುವ ಜನನ ಮತ್ತು ಮರಣಗಳ ನೋಂದಣಿಯನ್ನು ನಿಖರವಾಗಿ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಈ ಕಾರ್ಯ ಆಗಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು. ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮೀಣ ಭಾಗದಲ್ಲಿ 2015 ರ ಏಪ್ರಿಲ್ 01 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು ಈ ಕಾರ್ಯದ ಪ್ರಗತಿಯನ್ನು ಸಾಧಿಸುವಂತೆ ಅವರು ಸೂಚಿಸಿದರು. ಜನನ ಮತ್ತು ಮರಣ ನೋಂದಣಿ ಸಂಬಂಧಿಸಿದಂತೆ ಆಯಾಯ ಕಾಲದಲ್ಲಿ ಪಡೆಯುವಂತಾಗಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಆಯಾಯ ಕಾಲದಲ್ಲಿಯೇ ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು. ಈಗಾಗಲೇ ದತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು 2022 ರ ಸೆಕ್ಷನ್ 40 ಮತ್ತು 48 ರಂತೆ ತಿದ್ದುಪಡಿ ಮಾಡಲಾಗಿದ್ದು ಯಾವುದೇ ಏಜೆನ್ಸಿಗಳು ದತ್ತು ಮಕ್ಕಳನ್ನು ಪಡೆಯಲು ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡು ಜನನ ಪ್ರಮಾಣ ಪತ್ರವನ್ನು ನಿಯಮಾನುಸಾರ ಪಡೆಯಬಹುದಾಗಿದೆ ಎಂದು ಅವರು ಹೇಳಿದರು. </p>.<h2>ಇತರೆ ಸೂಚನೆಗಳು </h2><p>* ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಜನನ ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿ ಪ್ರಮಾಣ ಪತ್ರವನ್ನು ವಿತರಿಸಬೇಕು </p><p>* ಎಲ್ಲಾ ಖಾಸಗಿ ಆಸ್ಪತ್ರೆಗಳು ಜನನ ಮರಣ ಘಟನೆಗಳನ್ನು ಎರಡು– ಮೂರು ದಿನಗಳೊಳಗೆ ಸಂಬಂಧಿಸಿದ ಜನನ ಮರಣ ನೋಂದಣಾಧಿಕಾರಿಗಳಿಗೆ ವರದಿ ಮಾಡಬೇಕು </p><p>* ಎಲ್ಲಾ ಆಸ್ಪತ್ರೆಗಳಲ್ಲಿ ಜನನ ಮರಣ ಘಟನೆಗಳು ಸಂಭವಿಸಿರುವ ಮಾಹಿತಿಯ ಪಟ್ಟ್ಟಿಯನ್ನು ಇರಿಸಬೇಕು </p><p>* ಜನನ ಮರಣ ಪ್ರಮಾಣ ಪತ್ರಗಳ ನೋಂದಣಿ ವಂಚನೆಯ ಚಟುವಟಿಕೆಗಳನ್ನು ತಡೆಗಟ್ಟುವ ಕ್ರಮಗಳಿಗೆ ಸಂಬಂಧಿಸಿದಂತೆ ಜನನ ಮರಣ ನೋಂದಣಾಧಿಕಾರಿಗಳು ಉಪ ನೋಂದಣಾಧಿಕಾರಿಗಳು ತಮ್ಮ ಬಳಕೆದಾರರ ಐಡಿ ಪಾಸ್ವರ್ಡ್ ಮತ್ತು ಮೊಬೈಲ್ ಓಟಿಪಿ ಗಳನ್ನು ಹಂಚಿಕೊಳ್ಳದಂತೆ ಮತ್ತು ಆಗಾಗ್ಗೆ ಪಾಸ್ ವರ್ಡ್ ಬದಲಾಯಿಸುವ ಅಗತ್ಯತೆಯ ಬಗ್ಗೆ ಎಲ್ಲಾ ಜನನ ಮರಣ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>