<p>ಕುಶಾಲನಗರ(ಕೊಡಗು ಜಿಲ್ಲೆ): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯವಾಗಿ ಮಗುವನ್ನು ಕಳೆದುಕೊಂಡ ದುಃಖದಲ್ಲೂ ಪೋಷಕರು ಆ ಮಗುವಿನ ಕಿಡ್ನಿ ಹಾಗೂ ಕಣ್ಣುಗಳನ್ನು ದಾನ ಮಾಡಿದ್ದಾರೆ.</p>.<p>ಚಿಕ್ಕಅಳುವಾರ ಗ್ರಾಮದ ರಜಿತ್– ರಮ್ಯಾ ದಂಪತಿಯ ಪುತ್ರ ಅನ್ವಿಕ್ (4 ವರ್ಷ) ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿದ್ದ. ಈತ ಯಡವನಾಡು ಗ್ರಾಮದಲ್ಲಿ ತಾತ ಹರಗ ತಿಮ್ಮಯ್ಯ ಮತ್ತು ಅಜ್ಜಿಯೊಂದಿಗೆ ವಾಸವಿದ್ದ.</p>.<p>ಸೋಮವಾರ ಅಜ್ಜಿಯೊಂದಿಗೆ ಸೋಮವಾರಪೇಟೆಗೆ ಹೋಗಿ ವಾಪಸ್ ಬಸ್ನಲ್ಲಿ ಬಂದು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳಿಂದ ಆತನಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಾಲಕ ಗುರುವಾರ ರಾತ್ರಿ ಮೃತಪಟ್ಟಿದ್ದ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-51-1012825236</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ(ಕೊಡಗು ಜಿಲ್ಲೆ): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯವಾಗಿ ಮಗುವನ್ನು ಕಳೆದುಕೊಂಡ ದುಃಖದಲ್ಲೂ ಪೋಷಕರು ಆ ಮಗುವಿನ ಕಿಡ್ನಿ ಹಾಗೂ ಕಣ್ಣುಗಳನ್ನು ದಾನ ಮಾಡಿದ್ದಾರೆ.</p>.<p>ಚಿಕ್ಕಅಳುವಾರ ಗ್ರಾಮದ ರಜಿತ್– ರಮ್ಯಾ ದಂಪತಿಯ ಪುತ್ರ ಅನ್ವಿಕ್ (4 ವರ್ಷ) ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿದ್ದ. ಈತ ಯಡವನಾಡು ಗ್ರಾಮದಲ್ಲಿ ತಾತ ಹರಗ ತಿಮ್ಮಯ್ಯ ಮತ್ತು ಅಜ್ಜಿಯೊಂದಿಗೆ ವಾಸವಿದ್ದ.</p>.<p>ಸೋಮವಾರ ಅಜ್ಜಿಯೊಂದಿಗೆ ಸೋಮವಾರಪೇಟೆಗೆ ಹೋಗಿ ವಾಪಸ್ ಬಸ್ನಲ್ಲಿ ಬಂದು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳಿಂದ ಆತನಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಾಲಕ ಗುರುವಾರ ರಾತ್ರಿ ಮೃತಪಟ್ಟಿದ್ದ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-51-1012825236</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>