<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ಸಿದ್ದಾಪುರ ಭಾಗದಲ್ಲಿ ಜನವಸತಿ ಪ್ರದೇಶಗಳತ್ತ ಪದೇ ಪದೇ ದಾಳಿ ನಡೆಸುತ್ತಿದ್ದ ದಕ್ಷ ಎಂಬ ಗಂಡಾನೆಯನ್ನು ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು.</p><p>30 ವರ್ಷದ ಈ ಆನೆ ಸೆರೆಗೆ ಮಂಗಳವಾರದಿಂದ ಒಟ್ಟು 8 ಸಾಕಾನೆಗಳ ನೆರವಿನಿಂದ ನೂರಕ್ಕೂ ಅಧಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಎಮ್ಮೆಗುಂಡಿ ಬಳಿ ಪತ್ತೆಯಾದ ಈ ಆನೆಯ ಬೆನ್ನತ್ತಿದ ಸಿಬ್ಬಂದಿ ಸುಮಾರು 5 ಕಿ.ಮೀ ದೂರದವರೆಗೂ ಸಾಗಿ, ಮಾಲ್ದಾರೆ ಅರಣ್ಯ ಪ್ರದೇಶದ ಗಡಿಯಲ್ಲಿ ಅರಿವಳಿಕೆ ಚುಚ್ಚುಮದ್ದು ನೀಡಿದರು. ಸಮೀಪದ ಕೆರೆಯೊಂದರಲ್ಲಿ ಒರಗಿದ ಈ ಆನೆಗೆ ರೇಡಿಯೊ ಕಾಲರ್ ಅಳವಡಿಸಿ, ಅಲ್ಲಿಗೆ 80 ಕಿ.ಮೀ ದೂರದ ನಾಗರಹೊಳೆ ಅರಣ್ಯ ಪ್ರದೇಶದ ಮಧ್ಯದಲ್ಲಿರುವ ಬಿಸಿಲವಾಡಿ ಕೆರೆಯ ಸಮೀಪ ಇದನ್ನು ಬಿಡಲಾಗುವುದು ಎಂದು ಡಿಸಿಎಫ್ ಜಗನ್ನಾಥ್ ತಿಳಿಸಿದರು.</p><p>ಸಾಕಾನೆ ಶಿಬಿರಗಳಲ್ಲಿ ಆನೆಗಳ ಸಂಖ್ಯೆ ಹೆಚ್ಚಿರುವುದರಿಂದ ಈ ಕಾಡಾನೆಯನ್ನು ಮತ್ತೆ ಕಾಡಿಗೆ ಬಿಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p><p>ಸಿದ್ದಾಪುರ ಭಾಗದಲ್ಲಿ ಉಪಟಳ ನೀಡುತ್ತಿರುವ ಆಕಾಂಕ್ಷಾ ಮತ್ತು ಮೀರಾ ಎಂಬ ಕಾಡಾನೆಗಳಿಗೂ ರೇಡಿಯೊ ಕಾಲರ್ ಅಳವಡಿಸಬೇಕಿದ್ದು, ಇದಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ಸಿದ್ದಾಪುರ ಭಾಗದಲ್ಲಿ ಜನವಸತಿ ಪ್ರದೇಶಗಳತ್ತ ಪದೇ ಪದೇ ದಾಳಿ ನಡೆಸುತ್ತಿದ್ದ ದಕ್ಷ ಎಂಬ ಗಂಡಾನೆಯನ್ನು ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು.</p><p>30 ವರ್ಷದ ಈ ಆನೆ ಸೆರೆಗೆ ಮಂಗಳವಾರದಿಂದ ಒಟ್ಟು 8 ಸಾಕಾನೆಗಳ ನೆರವಿನಿಂದ ನೂರಕ್ಕೂ ಅಧಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಎಮ್ಮೆಗುಂಡಿ ಬಳಿ ಪತ್ತೆಯಾದ ಈ ಆನೆಯ ಬೆನ್ನತ್ತಿದ ಸಿಬ್ಬಂದಿ ಸುಮಾರು 5 ಕಿ.ಮೀ ದೂರದವರೆಗೂ ಸಾಗಿ, ಮಾಲ್ದಾರೆ ಅರಣ್ಯ ಪ್ರದೇಶದ ಗಡಿಯಲ್ಲಿ ಅರಿವಳಿಕೆ ಚುಚ್ಚುಮದ್ದು ನೀಡಿದರು. ಸಮೀಪದ ಕೆರೆಯೊಂದರಲ್ಲಿ ಒರಗಿದ ಈ ಆನೆಗೆ ರೇಡಿಯೊ ಕಾಲರ್ ಅಳವಡಿಸಿ, ಅಲ್ಲಿಗೆ 80 ಕಿ.ಮೀ ದೂರದ ನಾಗರಹೊಳೆ ಅರಣ್ಯ ಪ್ರದೇಶದ ಮಧ್ಯದಲ್ಲಿರುವ ಬಿಸಿಲವಾಡಿ ಕೆರೆಯ ಸಮೀಪ ಇದನ್ನು ಬಿಡಲಾಗುವುದು ಎಂದು ಡಿಸಿಎಫ್ ಜಗನ್ನಾಥ್ ತಿಳಿಸಿದರು.</p><p>ಸಾಕಾನೆ ಶಿಬಿರಗಳಲ್ಲಿ ಆನೆಗಳ ಸಂಖ್ಯೆ ಹೆಚ್ಚಿರುವುದರಿಂದ ಈ ಕಾಡಾನೆಯನ್ನು ಮತ್ತೆ ಕಾಡಿಗೆ ಬಿಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p><p>ಸಿದ್ದಾಪುರ ಭಾಗದಲ್ಲಿ ಉಪಟಳ ನೀಡುತ್ತಿರುವ ಆಕಾಂಕ್ಷಾ ಮತ್ತು ಮೀರಾ ಎಂಬ ಕಾಡಾನೆಗಳಿಗೂ ರೇಡಿಯೊ ಕಾಲರ್ ಅಳವಡಿಸಬೇಕಿದ್ದು, ಇದಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>