<p><strong>ಗೋಣಿಕೊಪ್ಪಲು</strong>: ಇಲ್ಲಿನ ಕಾವೇರಿ ದಸರಾ ನಾಡಹಬ್ಬದಂದು ನಡೆಯುತ್ತಿದ್ದ ದಶಮಂಟಪ ಶೋಭಾಯಾತ್ರೆಯಲ್ಲಿ ಈ ಬಾರಿ ಡಿಜೆ ಬಳಸದಿರಲು ದಶಮಂಟಪ ಸಮಿತಿ ನಿರ್ಧರಿಸಿದೆ. ಇದರ ಬದಲು ವಾದ್ಯಮೇಳ ಬಳಸಿಕೊಳ್ಳಲು ಚಿಂತನೆ ನಡೆಸಿದೆ.</p><p>ಈ ಕುರಿತು ಇತ್ತೀಚೆಗೆ ನಡೆದ ಸಭೆಯಲ್ಲಿ ಮಾತನಾಡಿದ ನಾಡಹಬ್ಬ ದಸರಾ ಸಮಿತಿ ಅಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ, ‘ಡಿಜೆ ಬದಲಿಗೆ ಕೊಡಗಿನ ವಾಲಗ ಬಳಸಿಕೊಂಡು ನಾಡ ದೇವಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಾಗುವುದು. ಪೊಲೀಸ್ ಇಲಾಖೆ ಈ ಬಗ್ಗೆ ಹೊರಡಿಸಿರುವ ಆದೇಶವನ್ನು ಗೌರವಿಸಲಾಗುವುದು’ ಎಂದರು.</p><p>‘ಶೋಭಾಯಾತ್ರೆಯಲ್ಲಿ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಡಿಜೆ ಸೌಂಡಿಗೆ ಕುಣಿದು ಕುಪ್ಪಳಿಸುತ್ತಿದ್ದರು. ಪೊಲೀಸ್ ಆದೇಶದಿಂದ ಅವರಿಗೆ ನಿರಾಶೆಯಾಗಬಹುದು. ಆದರೆ ಆರೋಗ್ಯದ ದೃಷ್ಟಿಯಿಂದ ಚಿಂತಿಸಿರುವ ಪೊಲೀಸ್ ಆದೇಶಕ್ಕೆ ಮನ್ನಣೆ ನೀಡಲು ನಿರ್ಧರಿಸಲಾಗಿದೆ’ ಎಂದರು.</p><p>ಇದೇ ನಾಡಹಬ್ಬ ದಸರಾ ಸಮಿತಿ 37 ವರ್ಷಗಳಿಂದ ಸ್ತಬ್ಧ ಚಿತ್ರ ಮತ್ತು ದಶಮಂಟಪ ಶೋಭಾಯಾತ್ರೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಈ ಬಾರಿಯೂ ಕೂಡ ಮತ್ತಷ್ಟು ಉತ್ತಮ ರೀತಿಯಲ್ಲಿ ನಡೆಸಲು ಗಂಭೀರ ಚಿಂತನೆ ನಡೆಸಿದೆ ಎಂದರು. ಸಾಮಾಜಿಕ ಮತ್ತು ಪೌರಾಣಿಕ ವಿಭಾಗಗಳಲ್ಲಿ ಸ್ತಬ್ಧ ಚಿತ್ರ:</p><p>ಸ್ತಬ್ಧ ಚಿತ್ರ ಈ ಕುರಿತು ಮಾತನಾಡಿದ ಪ್ರಭಾಕರ್ ನೆಲ್ಲಿತ್ತಾಯ, ‘ಸಾಮಾಜಿಕ ಮತ್ತು ಪೌರಾಣಿಕ ವಿಭಾಗಗಳಲ್ಲಿ ಸ್ತಬ್ಧ ಚಿತ್ರ ಆಯೋಜಿಸಲಾಗುತ್ತಿದೆ. ದಸರಾ ಉತ್ಸವದ ಪ್ರಮುಖ ಆಕರ್ಷಣೆ ಸ್ತಬ್ಧ ಚಿತ್ರವಾಗಿದ್ದು ಇದನ್ನು ವಿವಿಧ ಸಂಘ ಸಂಸ್ಥೆಗಳು ಅತ್ಯಾಕರ್ಷಕವಾಗಿ ತಯಾರಿಸಬೇಕು’ ಎಂದು ಮನವಿ ಮಾಡಿಕೊಂಡರು.</p><p>ಭಾಗವಹಿಸಿದ ಸ್ತಬ್ಧ ಚಿತ್ರಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ಆಕರ್ಷಕ ನಗದು ಮತ್ತು ಫಲಕ ನೀಡಲಾಗುವುದು. ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಕಲಾ ತಂಡಗಳಿಗೂ ಉತ್ತಮ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.</p><p>ಹೆಚ್ಚಿನ ಮಾಹಿತಿಗೆ ಮೊಬೈಲ್ ಫೋನ್ 8762478982 ಸಂಪರ್ಕಿಸಬಹುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಇಲ್ಲಿನ ಕಾವೇರಿ ದಸರಾ ನಾಡಹಬ್ಬದಂದು ನಡೆಯುತ್ತಿದ್ದ ದಶಮಂಟಪ ಶೋಭಾಯಾತ್ರೆಯಲ್ಲಿ ಈ ಬಾರಿ ಡಿಜೆ ಬಳಸದಿರಲು ದಶಮಂಟಪ ಸಮಿತಿ ನಿರ್ಧರಿಸಿದೆ. ಇದರ ಬದಲು ವಾದ್ಯಮೇಳ ಬಳಸಿಕೊಳ್ಳಲು ಚಿಂತನೆ ನಡೆಸಿದೆ.</p><p>ಈ ಕುರಿತು ಇತ್ತೀಚೆಗೆ ನಡೆದ ಸಭೆಯಲ್ಲಿ ಮಾತನಾಡಿದ ನಾಡಹಬ್ಬ ದಸರಾ ಸಮಿತಿ ಅಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ, ‘ಡಿಜೆ ಬದಲಿಗೆ ಕೊಡಗಿನ ವಾಲಗ ಬಳಸಿಕೊಂಡು ನಾಡ ದೇವಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಾಗುವುದು. ಪೊಲೀಸ್ ಇಲಾಖೆ ಈ ಬಗ್ಗೆ ಹೊರಡಿಸಿರುವ ಆದೇಶವನ್ನು ಗೌರವಿಸಲಾಗುವುದು’ ಎಂದರು.</p><p>‘ಶೋಭಾಯಾತ್ರೆಯಲ್ಲಿ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಡಿಜೆ ಸೌಂಡಿಗೆ ಕುಣಿದು ಕುಪ್ಪಳಿಸುತ್ತಿದ್ದರು. ಪೊಲೀಸ್ ಆದೇಶದಿಂದ ಅವರಿಗೆ ನಿರಾಶೆಯಾಗಬಹುದು. ಆದರೆ ಆರೋಗ್ಯದ ದೃಷ್ಟಿಯಿಂದ ಚಿಂತಿಸಿರುವ ಪೊಲೀಸ್ ಆದೇಶಕ್ಕೆ ಮನ್ನಣೆ ನೀಡಲು ನಿರ್ಧರಿಸಲಾಗಿದೆ’ ಎಂದರು.</p><p>ಇದೇ ನಾಡಹಬ್ಬ ದಸರಾ ಸಮಿತಿ 37 ವರ್ಷಗಳಿಂದ ಸ್ತಬ್ಧ ಚಿತ್ರ ಮತ್ತು ದಶಮಂಟಪ ಶೋಭಾಯಾತ್ರೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಈ ಬಾರಿಯೂ ಕೂಡ ಮತ್ತಷ್ಟು ಉತ್ತಮ ರೀತಿಯಲ್ಲಿ ನಡೆಸಲು ಗಂಭೀರ ಚಿಂತನೆ ನಡೆಸಿದೆ ಎಂದರು. ಸಾಮಾಜಿಕ ಮತ್ತು ಪೌರಾಣಿಕ ವಿಭಾಗಗಳಲ್ಲಿ ಸ್ತಬ್ಧ ಚಿತ್ರ:</p><p>ಸ್ತಬ್ಧ ಚಿತ್ರ ಈ ಕುರಿತು ಮಾತನಾಡಿದ ಪ್ರಭಾಕರ್ ನೆಲ್ಲಿತ್ತಾಯ, ‘ಸಾಮಾಜಿಕ ಮತ್ತು ಪೌರಾಣಿಕ ವಿಭಾಗಗಳಲ್ಲಿ ಸ್ತಬ್ಧ ಚಿತ್ರ ಆಯೋಜಿಸಲಾಗುತ್ತಿದೆ. ದಸರಾ ಉತ್ಸವದ ಪ್ರಮುಖ ಆಕರ್ಷಣೆ ಸ್ತಬ್ಧ ಚಿತ್ರವಾಗಿದ್ದು ಇದನ್ನು ವಿವಿಧ ಸಂಘ ಸಂಸ್ಥೆಗಳು ಅತ್ಯಾಕರ್ಷಕವಾಗಿ ತಯಾರಿಸಬೇಕು’ ಎಂದು ಮನವಿ ಮಾಡಿಕೊಂಡರು.</p><p>ಭಾಗವಹಿಸಿದ ಸ್ತಬ್ಧ ಚಿತ್ರಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ಆಕರ್ಷಕ ನಗದು ಮತ್ತು ಫಲಕ ನೀಡಲಾಗುವುದು. ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಕಲಾ ತಂಡಗಳಿಗೂ ಉತ್ತಮ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.</p><p>ಹೆಚ್ಚಿನ ಮಾಹಿತಿಗೆ ಮೊಬೈಲ್ ಫೋನ್ 8762478982 ಸಂಪರ್ಕಿಸಬಹುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>