2019–20ನೇ ಸಾಲಿನಲ್ಲಿ ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಅಧಿಕೃತವಾದ ಮನೆಗಳಿಗೆ ಬಾಡಿಗೆ ಮೊತ್ತ ಪಾವತಿಸಲಾಗಿದೆ. ಅದೇ ರೀತಿ ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದ ‘ಎ’ ಮತ್ತು ‘ಬಿ’ ವೃಂದದ ಪಟ್ಟಿಯಲ್ಲಿರುವ ಮನೆಗಳಿಗೆ ಬಾಡಿಗೆ ಹಣವನ್ನು ಪಾವತಿಸುವ ಸಂಬಂಧ ಫೆ.10ರಂದು ಬೆಂಗಳೂರಿನಲ್ಲಿ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎದು ಅವರು ಮಾಹಿತಿ ನೀಡಿದ್ದಾರೆ.