ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಯ ಕಾಂಕ್ರೀಟ್ ಸ್ಲ್ಯಾಬ್ ಗಳು ಮಳೆಯಿಂದ ಹೊರಚಾಚಿದ್ದು, ಆತಂಕ ಸೃಷ್ಟಿಸಿದೆ. ಮಡಿಕೇರಿ- ಮಂಗಳೂರು ರಸ್ತೆಯಲ್ಲಿರುವ ತಡೆಗೋಡೆಯನ್ನು ಸಂಸದ ಪ್ರತಾಪಸಿಂಹ ಶುಕ್ರವಾರ ಪರಿಶೀಲನೆ ನಡೆಸಿದರು.
ಇದಕ್ಕೂ ಮುನ್ನ ನಡೆದ ಜಿಲ್ಲಾ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಈ ತಡೆಗೋಡೆಯ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದರು.
ಒಟ್ಟು ಮೂರು ಹಂತದ ಕಬ್ಬಿಣ ಅಳವಡಿಸಲಾಗಿದ್ದು, ತಡೆಗೋಡೆ ಕುಸಿಯುವ ಸಾಧ್ಯತೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದರು. ಅತಿ ಶೀಘ್ರದಲ್ಲಿ ತಜ್ಞರಿಂದ ತಪಾಸಣೆ ನಡೆಸಿ ಎಂದು ಪ್ರತಾಪಸಿಂಹ ಸೂಚಿಸಿದರು.