ಮಳೆ ಇಲ್ಲದಿದ್ದಲ್ಲಿ ಸಾಯಿ ಟರ್ಫ್ ಮೈದಾನದಲ್ಲಿ ಕಾರ್ಯಕ್ರಮ ನಡೆಸುವುದಾಗಿ ಜಿಲ್ಲಾಡಳಿತ ಈ ಮೊದಲು ಪ್ರಕಟಿಸಿತ್ತು. ಆದರೆ, ಬದಲಾಗುತ್ತಿರುವ ಹವಾಮಾನ, ಪದೇ ಪದೇ ಬೀಳುತ್ತಿರುವ ಜಿಟಿಜಿಟಿ ಮಳೆಯ ಕಾರಣಕ್ಕೆ ಕಾರ್ಯಕ್ರಮವನ್ನು ಒಳಾಂಗಣದಲ್ಲೇ ನಡೆಸಬೇಕು ಎನ್ನುವ ಒತ್ತಾಯ ಯೋಗಾಭ್ಯಾಸಿಗಳಿಂದ ವ್ಯಕ್ತವಾಗಿತ್ತು. ಈ ಕುರಿತು ‘ಪ್ರಜಾವಾಣಿ’ ಭಾನುವಾರವಷ್ಟೇ ವಿಶೇಷ ವರದಿ ಪ್ರಕಟಿಸಿತ್ತು. ಅಂತಿಮ ಗಳಿಗೆಯಲ್ಲಿ ತನ್ನ ನಿರ್ಧಾರದಿಂದ ಹಿಂದೆ ಸರಿದ ಜಿಲ್ಲಾಡಳಿತವು ಮಳೆಯ ಮುನ್ಸೂಚನೆಯಿಂದಾಗಿ ಕೆಳಗಿನ ಗೌಡ ಸಮಾಜದ ಸಭಾಂಗಣದಲ್ಲಿ ನಡೆಸುವುದಾಗಿ ಪ್ರಕಟಿಸಿದೆ.