ಮಡಿಕೇರಿ: ಇಲ್ಲಿನ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಶಾಂತ್ ಫರ್ನಿಚರ್ ಅವರ ದಾಸ್ತಾನು ಮಳಿಗೆಗೆ ಸೋಮವಾರ ನಸುಕಿನಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮರದ ಪೀಠೋಪಕರಣಗಳು ಉರಿದು ಭಸ್ಮವಾಗಿವೆ.
ಮಡಿಕೇರಿ, ಗೋಣಿಕೊಪ್ಪಲು, ಕುಶಾಲನಗರದಿಂದಲೂ ಅಗ್ನಿಶಾಮಕ ಸಿಬ್ಬಂದಿ ಬಂದು 4 ವಾಹನಗಳಲ್ಲಿ ಬೆಂಕಿ ನಂದಿಸಲು ಯತ್ನಿಸಲಾಗುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.