ಮಡಿಕೇರಿ: ‘ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಗಳ ಪೈಕಿ ಎರಡು ಸ್ಥಳಗಳಲ್ಲಿ ಮನೆ ನಿರ್ಮಾಣ ಕಾಮಗಾರಿ ಪೂರ್ಣವಾಗಿದೆ. ಅಲ್ಲಿ ಮೂಲಸೌಲಭ್ಯ ಕಲ್ಪಿಸುವ ಕಾಮಗಾರಿಯಷ್ಟೇ ಬಾಕಿಯಿದ್ದು, ಅದು ಪೂರ್ಣಗೊಂಡ ಬಳಿಕ ಜುಲೈ ಅಂತ್ಯಕ್ಕೆ ಮನೆಗಳನ್ನು ಹಸ್ತಾಂತರ ಮಾಡಲಾಗುವುದು’ ಎಂದು ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ಇಲ್ಲಿ ಶನಿವಾರ ಭರವಸೆ ನೀಡಿದರು.