<p>ಮಡಿಕೇರಿ: ಗ್ರಾಮ ಸಭೆಯ ನಿರ್ಣಯವೇ ಅಂತಿಮ. ಗ್ರಾಮ ಪಂಚಾಯಿತಿಗಳಿಗೆ ಇರುವ ಅಧಿಕಾರ ಮತ್ತು ಕಾನೂನಿನ ಬಗ್ಗೆ ಕೈಪಿಡಿ ಮುದ್ರಿಸಿ ವಿತರಿಸಿ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ ಸೂಚಿಸಿದರು.</p>.<p>ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 2026-27 ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.</p>.<p>ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು, ಅದನ್ನು ನಿಯಮಾನುಸಾರ ಬಳಸಬೇಕು ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ದಿಗೆ ಕಾನೂನಿನ ಪ್ರಕಾರ ಅಧಿಕಾರ ಚಲಾಯಿಸಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಆ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸಬೇಕು ಎಂದು ಪ್ರತಿಪಾದಿಸಿದರು.</p>.<p>ಸ್ಥಳೀಯವಾಗಿಯೇ ಶಾಲೆ, ಆಸ್ಪತ್ರೆ, ಅಂಗನವಾಡಿ ಮತ್ತಿತರ ಅಗತ್ಯ ಹುದ್ದೆಗಳ ನೇಮಕವೂ ಆಗಬೇಕು ಎಂದು ಅಭಿಪ್ರಾಯಪಟ್ಟ ಅವರು ಗ್ರಾಮ ಅಭಿವೃದ್ಧಿಗೆ ಸ್ಥಳೀಯರೇ ಚಿಂತಿಸಬೇಕು ಎಂದು ಸಲಹೆ ನೀಡಿದರು.</p>.<p>ಮಹಾತ್ಮ ಗಾಂಧಿಯವರ ಕನಸಿನ ರಾಮರಾಜ್ಯ ಮತ್ತು ರಾಜೀವ್ ಗಾಂಧಿ ಅವರ ಗ್ರಾಮೀಣಾಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಆಧುನಿಕ ತಂತ್ರಜ್ಞಾನದ ಆಶಯದೊಂದಿಗೆ ಗ್ರಾಮಗಳ ಅಭಿವೃದ್ಧಿ ಮತ್ತಷ್ಟು ಆಗಬೇಕು ಎಂದರು.</p>.<p>ಮುಂದೆ ಜುಲೈ ತಿಂಗಳಲ್ಲಿ ಹೊದ್ದೂರಿನಲ್ಲಿ ನಡೆಯುವ ಗ್ರಾಮ ಸಭೆಯಲ್ಲಿ ಭಾಗವಹಿಸುವೆ ಎಂದರು.</p>.<p>ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ವಿಶೇಷ ಸಲಹೆಗಾರ ಕೆಂಪೇಗೌಡ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಚುನಾಯಿತ ಸರ್ಕಾರ ಇರಬೇಕು ಎಂಬುದು ಸರ್ಕಾರದ ಆಶಯವಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಆಡಳಿತಕ್ಕೆ ವಿಶೇಷವಾದ ಅಧಿಕಾರ ನೀಡಲಾಗಿದೆ ಎಂದರು.</p>.<p>ಜನರ ನಿರೀಕ್ಷೆಗೆ ತಕ್ಕಂತೆ ಅಧಿಕಾರ ನಡೆಸಬೇಕು. ಪಂಚಾಯತ್ ಅಭಿವೃದ್ಧಿ ಸಂಬಂಧಿಸಿದಂತೆ ಎಲ್ಲಾ ಮತದಾರರಿಗೂ ಮಾಹಿತಿ ನೀಡಬೇಕು. ಫಲಾನುಭವಿಗಳ ಆಯ್ಕೆ ಮತ್ತು ಕ್ರೀಯಾ ಯೋಜನೆ ರೂಪಿಸುವುದು ಹಾಗೂ ವಾರ್ಡ್ ಸಭೆ ನಡೆಸುವುದು ಸೇರಿದಂತೆ ಪಂಚಾಯತ್ ರಾಜ್ ಆಶಯವನ್ನು ಅರಿತುಕೊಂಡು ಕೆಲಸ ಮಾಡಬೇಕು ಎಂದರು.</p>.<p>2027-28 ನೇ ಸಾಲಿನಲ್ಲಿ ಜನರ ಯೋಜನೆಯಾಗಿ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದು, ಅದರಂತೆ ಜನರ ಭಾಗವಹಿಸುವಿಕೆ ಅತಿಮುಖ್ಯ ಎಂದು ಅವರು ಹೇಳಿದರು.</p>.<p>ಸ್ಥಳೀಯರೊಬ್ಬರು ಮಾತನಾಡಿ ವಸತಿ ಯೋಜನೆಯಡಿ ಸರ್ಕಾರದಿಂದ ನೀಡುವ ಅನುದಾನ ಸಾಲುವುದಿಲ್ಲ, ಆದ್ದರಿಂದ ₹ 5 ಲಕ್ಷದವರೆಗೆ ಅನುದಾನ ಹೆಚ್ಚಿಸಬೇಕು ಎಂದು ಕೋರಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕುಸುಮಾವತಿ, ಹಮೀದ್, ಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್, ಆಡಳಿತಾಧಿಕಾರಿ ಪಿ.ಪಿ.ಕವಿತಾ, ಪಿಡಿಒ ವತ್ಸಲಾ, ಅಬ್ದುಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-51-794459368</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಗ್ರಾಮ ಸಭೆಯ ನಿರ್ಣಯವೇ ಅಂತಿಮ. ಗ್ರಾಮ ಪಂಚಾಯಿತಿಗಳಿಗೆ ಇರುವ ಅಧಿಕಾರ ಮತ್ತು ಕಾನೂನಿನ ಬಗ್ಗೆ ಕೈಪಿಡಿ ಮುದ್ರಿಸಿ ವಿತರಿಸಿ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ ಸೂಚಿಸಿದರು.</p>.<p>ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 2026-27 ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.</p>.<p>ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು, ಅದನ್ನು ನಿಯಮಾನುಸಾರ ಬಳಸಬೇಕು ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ದಿಗೆ ಕಾನೂನಿನ ಪ್ರಕಾರ ಅಧಿಕಾರ ಚಲಾಯಿಸಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಆ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸಬೇಕು ಎಂದು ಪ್ರತಿಪಾದಿಸಿದರು.</p>.<p>ಸ್ಥಳೀಯವಾಗಿಯೇ ಶಾಲೆ, ಆಸ್ಪತ್ರೆ, ಅಂಗನವಾಡಿ ಮತ್ತಿತರ ಅಗತ್ಯ ಹುದ್ದೆಗಳ ನೇಮಕವೂ ಆಗಬೇಕು ಎಂದು ಅಭಿಪ್ರಾಯಪಟ್ಟ ಅವರು ಗ್ರಾಮ ಅಭಿವೃದ್ಧಿಗೆ ಸ್ಥಳೀಯರೇ ಚಿಂತಿಸಬೇಕು ಎಂದು ಸಲಹೆ ನೀಡಿದರು.</p>.<p>ಮಹಾತ್ಮ ಗಾಂಧಿಯವರ ಕನಸಿನ ರಾಮರಾಜ್ಯ ಮತ್ತು ರಾಜೀವ್ ಗಾಂಧಿ ಅವರ ಗ್ರಾಮೀಣಾಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಆಧುನಿಕ ತಂತ್ರಜ್ಞಾನದ ಆಶಯದೊಂದಿಗೆ ಗ್ರಾಮಗಳ ಅಭಿವೃದ್ಧಿ ಮತ್ತಷ್ಟು ಆಗಬೇಕು ಎಂದರು.</p>.<p>ಮುಂದೆ ಜುಲೈ ತಿಂಗಳಲ್ಲಿ ಹೊದ್ದೂರಿನಲ್ಲಿ ನಡೆಯುವ ಗ್ರಾಮ ಸಭೆಯಲ್ಲಿ ಭಾಗವಹಿಸುವೆ ಎಂದರು.</p>.<p>ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ವಿಶೇಷ ಸಲಹೆಗಾರ ಕೆಂಪೇಗೌಡ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಚುನಾಯಿತ ಸರ್ಕಾರ ಇರಬೇಕು ಎಂಬುದು ಸರ್ಕಾರದ ಆಶಯವಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಆಡಳಿತಕ್ಕೆ ವಿಶೇಷವಾದ ಅಧಿಕಾರ ನೀಡಲಾಗಿದೆ ಎಂದರು.</p>.<p>ಜನರ ನಿರೀಕ್ಷೆಗೆ ತಕ್ಕಂತೆ ಅಧಿಕಾರ ನಡೆಸಬೇಕು. ಪಂಚಾಯತ್ ಅಭಿವೃದ್ಧಿ ಸಂಬಂಧಿಸಿದಂತೆ ಎಲ್ಲಾ ಮತದಾರರಿಗೂ ಮಾಹಿತಿ ನೀಡಬೇಕು. ಫಲಾನುಭವಿಗಳ ಆಯ್ಕೆ ಮತ್ತು ಕ್ರೀಯಾ ಯೋಜನೆ ರೂಪಿಸುವುದು ಹಾಗೂ ವಾರ್ಡ್ ಸಭೆ ನಡೆಸುವುದು ಸೇರಿದಂತೆ ಪಂಚಾಯತ್ ರಾಜ್ ಆಶಯವನ್ನು ಅರಿತುಕೊಂಡು ಕೆಲಸ ಮಾಡಬೇಕು ಎಂದರು.</p>.<p>2027-28 ನೇ ಸಾಲಿನಲ್ಲಿ ಜನರ ಯೋಜನೆಯಾಗಿ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದು, ಅದರಂತೆ ಜನರ ಭಾಗವಹಿಸುವಿಕೆ ಅತಿಮುಖ್ಯ ಎಂದು ಅವರು ಹೇಳಿದರು.</p>.<p>ಸ್ಥಳೀಯರೊಬ್ಬರು ಮಾತನಾಡಿ ವಸತಿ ಯೋಜನೆಯಡಿ ಸರ್ಕಾರದಿಂದ ನೀಡುವ ಅನುದಾನ ಸಾಲುವುದಿಲ್ಲ, ಆದ್ದರಿಂದ ₹ 5 ಲಕ್ಷದವರೆಗೆ ಅನುದಾನ ಹೆಚ್ಚಿಸಬೇಕು ಎಂದು ಕೋರಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕುಸುಮಾವತಿ, ಹಮೀದ್, ಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್, ಆಡಳಿತಾಧಿಕಾರಿ ಪಿ.ಪಿ.ಕವಿತಾ, ಪಿಡಿಒ ವತ್ಸಲಾ, ಅಬ್ದುಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-51-794459368</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>